ಕೆಎಸ್ಆರ್ಟಿಸಿ ಬಸ್ಸು ಇದು. ಹೊಗೆಯುಗುಳುವ ಪರಿ ನೋಡಿದರೆ ಅಬ್ಬಾ ಎನಿಸುತ್ತದೆ…!. ವಾಯುಮಾಲಿನ್ಯ ತಪಾಸಣೆಯ ಅವಧಿ ಒಂದು ದಿನ ಮುಗಿದರೂ ದಂಡದ ಮೇಲೆ ದಂಡ ಬೀಳುತ್ತದೆ..!. ಈ ಸರ್ಕಾರಿ ವಾಹನ ವಿಪರೀತ ಹೊಗೆ ಬಿಡುವುದಕ್ಕೆ ಏನು ದಂಡ..? ಅಂದರೆ ಹೊಗೆ ಬಿಡುವುದಕ್ಕೆ ಅಲ್ಲ ದಂಡ, ಹೊಗೆ ಇಲ್ಲದೇ ಇರುವುದಕ್ಕೆ ದಂಡವೇ…?
ಮಂಗಳೂರು-ಕುಕ್ಕೆ ಸುಬ್ರಹ್ಮಣ್ಯ ಓಡಾಡುವ ಕೆಎಸ್ಆರ್ಟಿಸಿ ಬಸ್ಸು ಇದು. ಈ ಬಸ್ಸಿನ ಹಿಂದೆ ಹೋದವರ ಪಾಡು ಅಷ್ಟೇ. ವಿಪರೀತವಾಗಿ ಗೊಗೆ ಉಗುಳುತ್ತದೆ. ಇದಕ್ಕೆ ಏನು ಕಾರಣ ಎಂದು ಇಲಾಖೆಗಳೇ ಹೇಳಬೇಕಷ್ಟೆ. ಹಿಂದೊಮ್ಮೆ ಇದೇ ರೀತಿ ಹೊಗೆ ಉಗುಳುವ ಬಸ್ಸು ಕಂಡುಬಂದಾಗ ಇಲಾಖೆಯ ಗಮನಕ್ಕೆ ಸಾರ್ವಜನಿಕರೊಬ್ಬರು ತಂದಿದ್ದರು. ಆಗ ಬಂದಿರುವ ಉತ್ತರ , ಬಸ್ಸು ನಿಲ್ದಾಣದಿಂದ ಹೊರಡುವಾಗ ಸರಿ ಇತ್ತು, ದಾರಿ ಮಧ್ಯದಲ್ಲಿ ವಾಹನದ ಭಾಗವೊಂದು ತಾಂತ್ರಿಕ ಕಾರಣದಿಂದ ಕೆಟ್ಟು ಹೊಗೆ ಬರಲು ಆರಂಭವಾಗಿದೆ ಎಂದು ಉತ್ತರ ನೀಡಿತ್ತು ಇಲಾಖೆ. ಆದರೆ ದಿನವೂ ಅನೇಕ ಕೆಎಸ್ಆರ್ಟಿಸಿ ಬಸ್ಸುಗಳು ಇದೇ ಮಾದರಿಯಲ್ಲಿ ಹೊಗೆ ಬಿಡುತ್ತಾ ಸಾಗುತ್ತಿದೆ. ಸರ್ಕಾರ ಉಚಿತ ನೀಡುವಷ್ಟೇ ಗಂಭೀರವಾಗಿ ಮಾಲಿನ್ಯ ನಿಯಂತ್ರಣದ ಕಡೆಗೂ ಗಮನಹರಿಸಬೇಕು ಎನ್ನುವುದು ಕಾಳಜಿ ಅಷ್ಟೇ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…