Advertisement
ವಿಶೇಷ ವರದಿಗಳು

ಹೆಚ್ಚುತ್ತಿರುವ ವಾಯುಮಾಲಿನ್ಯ ಹಾಗೂ ತಾಪಮಾನ | ಸೋಲಾರ್‌ ಇಂಧನದ ಮೇಲೆ ಪರಿಣಾಮ ಏನು..?

Share

ಹೆಚ್ಚುತ್ತಿರುವ ಮಾಲಿನ್ಯ ಹಾಗೂ ತಾಪಮಾನವು ಸೌರ ಫಲಕಗಳ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅಧ್ಯಯನ ವರದಿ ಎಚ್ಚರಿಸಿದೆ.2041-2050ರ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸೌರ ವಿಕಿರಣ ಇಳಿಮುಖವಾಗುವ ಸಾಧ್ಯತೆಯನ್ನು ಎಚ್ಚರಿಸಲಾಗಿದೆ. …..ಮುಂದೆ ಓದಿ….

ಭಾರತವು  ಹವಾಮಾನ ವೈಪರೀತ್ಯ ಕಡಿಮೆಗೊಳಿಸುವ ಭಾಗವಾಗಿ ಹಸಿರು ಇಂಧನದ ಕಡೆಗೆ ಗಮನಹರಿಸುತ್ತಿದೆ. 2030 ರ ವೇಳೆಗೆ 100 ಗಿಗಾ ವ್ಯಾಟ್ ಸೌರ ಶಕ್ತಿಯನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ.‌ ಆದರೆ, ಈಗ ಹೆಚ್ಚುತ್ತಿರುವ ವಾಯು ಮಾಲಿನ್ಯ ಮತ್ತು ಹವಾಮಾನ ಬದಲಾವಣೆಯು ಸೌರ ಫಲಕಗಳ ದಕ್ಷತೆಯನ್ನು ಕಡಿಮೆ ಮಾಡುತ್ತದೆ ಎಂದು ಹೊಸ ಅಧ್ಯಯನವು ಹೇಳುತ್ತಿದೆ. ಹೀಗಾಗಿ ಭಾರತದ ಸೌರ ಸಾಮರ್ಥ್ಯವನ್ನು ಹೆಚ್ಚಿಸಲು ವಾಯು ಮಾಲಿನ್ಯ ಮತ್ತು ಹವಾಮಾನ ಬದಲಾವಣೆಯನ್ನು ನಿಯಂತ್ರಿಸುವುದು ಅತ್ಯಗತ್ಯ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.

ಹವಾಮಾನ ಬದಲಾವಣೆಯನ್ನು, ಹವಾಮಾನ ವೈಪರೀತ್ಯವನ್ನು ಕಡಿಮೆ ಮಾಡುವ  ಕಾರ್ಯತಂತ್ರದಲ್ಲಿ ಭಾರತವು ಸೌರ ಶಕ್ತಿಯನ್ನು ಕೂಡಾ ಆಯ್ಕೆ ಮಾಡಿಕೊಂಡಿದೆ. ಆದರೆ ಬದಲಾಗುತ್ತಿರುವ ಹವಾಮಾನ ಮತ್ತು ಹೆಚ್ಚಿನ ಮಾಲಿನ್ಯವು ಭವಿಷ್ಯದಲ್ಲಿ ಸೌರ ಫಲಕಗಳ ಪರಿಣಾಮಕಾರಿ ಕೆಲಸಗಳನ್ನು ಕಡಿಮೆ ಮಾಡುತ್ತದೆ ಎಂದು ಪರಿಸರ ಸಂಶೋಧನಾ ಪತ್ರಗಳಲ್ಲಿ ಎಚ್ಚರಿಸಲಾಗಿದೆ.

ಸೆಂಟರ್ ಫಾರ್ ಅಟ್ಮಾಸ್ಫಿಯರಿಕ್ ಸೈನ್ಸಸ್, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ದೆಹಲಿಯ ಸಂಶೋಧಕರು  ಹವಾಮಾನ ಬದಲಾವಣೆ ಮತ್ತು ವಾಯು ಮಾಲಿನ್ಯದ  ಪರಿಣಾಮಗಳನ್ನು ವಿಶ್ಲೇಷಿಸಲು ಮಾಡಿರುವ ಅಧ್ಯಯನ ವರದಿಗಳಲ್ಲಿ   ಲಭ್ಯವಿರುವ ಜಾಗತಿಕ ಹವಾಮಾನ ಮಾದರಿಗಳಿಂದ ಡೇಟಾವನ್ನು ಬಳಸಿಕೊಂಡಿದ್ದರು.

ಮುಂದೆ 2041 ರಿಂದ 2050 ರವರೆಗಿನ ಬದಲಾವಣೆಯನ್ನು ಗಮನಿಸಲು 1985 ರಿಂದ 2014 ರವರೆಗಿನ ಡೇಟಾವನ್ನು ಮಾದರಿಯಾಗಿರಿಸಿಕೊಂಡು ಈ ಅಧ್ಯಯನ ಮಾಡಿದಾಗ ಮತ್ತು ಪ್ರಸ್ತುತ ಸೌರಶಕ್ತಿ ಉತ್ಪಾದನೆಯ ಮಟ್ಟವನ್ನು ಗಮನಿಸಿದ ಅಧ್ಯಯನವು, ವಾರ್ಷಿಕವಾಗಿ 600 ರಿಂದ 840 ಗಿಗಾವ್ಯಾಟ್ ವಿದ್ಯುತ್ ನಷ್ಟವನ್ನು ಅಂದಾಜಿಸಿದೆ. ಸೌರ ಫಲಕಗಳ  ಕಾರ್ಯನಿರ್ವಹಣೆಯಲ್ಲಿ ಸ್ಥಳೀಯ ಪರಿಸ್ಥಿತಿಗಳು ಮಹತ್ವದ ಪಾತ್ರವನ್ನು ವಹಿಸುವುದರಿಂದ ಈ ಬದಲಾವಣೆ ನಿರೀಕ್ಷೆ ಮಾಡಲಾಗಿದೆ. ಹೀಗಾಗಿ ಭಾರತವು 2030 ರ ವೇಳೆಗೆ ಸೌರಶಕ್ತಿ ಆಧಾರಿತವಾಗಿ 100 ಗಿಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆಯ ಮಹತ್ವಾಂಕ್ಷೆ ಯೋಜನೆಗೆ ಈಗಲೇ ಸಿದ್ಧತೆ ನಡೆಸಬೇಕಾಗಿದೆ.

ಭಾರತವು ಸಾಮಾನ್ಯವಾಗಿ ಪ್ರತಿ ವರ್ಷ ಸುಮಾರು 300 ಬಿಸಿಲಿನ ದಿನಗಳನ್ನು ಹೊಂದಿರುತ್ತದೆ.  ಸೌರ ವಿಕಿರಣದ ಮಟ್ಟವು ವಾರ್ಷಿಕವಾಗಿ ಪ್ರತಿ ಚದರ ಮೀಟರ್‌ಗೆ ಗಂಟೆಗೆ 1700 ರಿಂದ 2200 ಕಿಲೋವ್ಯಾಟ್ ಇರುತ್ತದೆ ಎಂದು ವರದಿಗಳು ಹೇಳುತ್ತವೆ. ಆದರೆ ಈಚೆಗೆ  ಬಿಸಿಲಿನ ದಿನಗಳಲ್ಲಿ ಭಾರತವು ನಿರಂತರ ಕುಸಿತವನ್ನು ಕಂಡಿದೆ.

ಸಂಶೋಧಕರ ಪ್ರಕಾರ, 1985 ರಿಂದ 2014 ರವರೆಗೆ ಭಾರತದಲ್ಲಿ ಸರಾಸರಿ ದೈನಂದಿನ ಗರಿಷ್ಠ ತಾಪಮಾನವು 15 ಡಿಗ್ರಿ ಸೆಲ್ಸಿಯಸ್‌ನಿಂದ 50 ಡಿಗ್ರಿ ಸೆಲ್ಸಿಯಸ್‌ವರೆಗೆ ಇತ್ತು. ಆದರೆ ಸೆಲ್ ತಾಪಮಾನವು 45 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿಲ್ಲದಿದ್ದಾಗ ಸೌರ ಫಲಕಗಳು ಸಾಮಾನ್ಯವಾಗಿ ಗರಿಷ್ಠ ದಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತವೆ. ಆದರೆ ಈಚೆಗೆ ತಾಪಮಾನವು ಅಧಿಕವಾಗುವುದರಿಂದ ದಕ್ಷತೆ ಕಡಿಮೆಯಾಗುವುದು ಕೂಡಾ ಹೆಚ್ಚಾಗುತ್ತದೆ. ವಾಯುಮಾಲಿನ್ಯ ಹೆಚ್ಚಾಗುವಿಕೆಯಿಂದ ಸೌರಫಲಕಗಳ ಮೇಲೆಯೂ ಪರಿಣಾಮ ಬೀರುತ್ತದೆ. ಬಿಸಿಲಿಗೆ ತಡೆಯಾಗುತ್ತದೆ.  ಹೀಗಾಗಿ ವಾಯು ಮಾಲಿನ್ಯ ಮತ್ತು ಹವಾಮಾನ ಬದಲಾವಣೆ ಎರಡನ್ನೂ ತಗ್ಗಿಸಲು ಕ್ರಮ ಅಗತ್ಯವಾಗಿದೆ ಎಂದು ಅಧ್ಯಯನವು ಹೇಳುತ್ತದೆ.

ಒಟ್ಟಾರೆಯಾಗಿ ಅಧ್ಯಯನದ ಪ್ರಕಾರ, 2041-2050ರ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸೌರ ವಿಕಿರಣದ ಇಳಿಮುಖವಾಗುವ ಸಾಧ್ಯತೆಯನ್ನು ನಿರೀಕ್ಷಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

19 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago