ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿಯಾಗಿ, ಮಾಲಿನ್ಯರಹಿತವಾಗಿ ಆಚರಿಸಬೇಕು. ಹಸಿರು ಪಟಾಕಿಯನ್ನು ಹೊರತುಪಡಿಸಿ, ಇತರೆ ಪಟಾಕಿಯ ಬಳಕೆ ಮತ್ತು ಮಾರಾಟ ನಿಷೇಧಿಸಲಾಗಿದೆ ಎಂದು ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಯಾರಾದ ಹಸಿರು ಪಟಾಕಿಗಳನ್ನು ಬಯಲು ಪ್ರದೇಶದಲ್ಲಿ ಮಾರಾಟ ಮಾಡುವ ಬಗ್ಗೆ ಮತ್ತು ಅಗ್ನಿ ಅನಾಹುತಗಳನ್ನು ತಪ್ಪಿಸಲು ಅನುಸರಿಸಬೇಕಾದ ಸುರಕ್ಷತೆ ಪರಿಶೀಲಿಸಲು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೀಪಾವಳಿ ಹಬ್ಬ ಆಚರಿಸುವ ಸಂಬಂಧ ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನ ಹಾಗೂ ರಾಜ್ಯ ಸರ್ಕಾರವು ಪಟಾಕಿ ಬಳಕೆ ಕುರಿತಂತೆ ನೀಡಿರುವ ಆದೇಶ, ಮಾರ್ಗಸೂಚಿಗಳನ್ನು ತಪ್ಪದೇ ಅನುಸರಿಸಬೇಕು. ಜಿಲ್ಲಾಡಳಿತ ವಿಧಿಸುವ ಷರತ್ತಿಗೆ ಒಳಪಟ್ಟು, ಯಾವುದೇ ರೀತಿಯಲ್ಲಿ ಕಾನೂನು ಉಲ್ಲಂಘನೆ ಆಗದಂತೆ ಪಟಾಕಿ ಮಾರಾಟ ಮಾಡಬೇಕು ಎಂದು ಹೇಳಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…