ನವದೆಹಲಿಯಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವ ಡಾ. ಎಲ್. ಮುರುಗನ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಪೊಂಗಲ್ ಹಬ್ಬದ ಆಚರಣೆಯಲ್ಲಿ ನರೇಂದ್ರ ಮೋದಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಪೊಂಗಲ್ ಹಬ್ಬದ ಸಾಂಸ್ಕೃತಿಕ ಮಹತ್ವ ಹಾಗೂ ಕೃಷಿಯೊಂದಿಗೆ ಅದರ ಆಪ್ತ ಸಂಬಂಧವನ್ನು ಸ್ಮರಿಸಿ, ನಿಸರ್ಗದ ಸಂರಕ್ಷಣೆಯೇ ನಮ್ಮ ಭವಿಷ್ಯದ ಭದ್ರತೆ ಎಂದು ಹೇಳಿದರು.
ಮುಂದಿನ ಪೀಳಿಗೆಗಾಗಿ ನೀರು ಮತ್ತು ಮಣ್ಣನ್ನು ಉಳಿಸುವುದು ಎಲ್ಲರ ಜವಾಬ್ದಾರಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಸುಸ್ಥಿರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡರೆ ಪರಿಸರ ರಕ್ಷಣೆ ಮಾತ್ರವಲ್ಲ, ರೈತರು ಆರ್ಥಿಕವಾಗಿಯೂ ಸಬಲರಾಗಲು ಸಾಧ್ಯವೆಂದು ಅವರು ಹೇಳಿದರು. ಸಾವಯವ ಕೃಷಿಯತ್ತ ಸಾಗುವಿಕೆಯಿಂದ ಮಣ್ಣಿನ ಆರೋಗ್ಯ ಸುಧಾರಣೆ, ನೀರಿನ ಸಮರ್ಥ ಬಳಕೆ ಹಾಗೂ ಉತ್ಪಾದನಾ ವೆಚ್ಚದ ಕಡಿತ ಸಾಧ್ಯವಾಗುತ್ತದೆ ಎಂಬುದನ್ನೂ ಅವರು ಉಲ್ಲೇಖಿಸಿದರು.
ಇದೇ ಸಂದರ್ಭದಲ್ಲಿ, ಸಾವಯವ ಕೃಷಿ ಮಾದರಿಯಿಂದ ತಮ್ಮ ಬದುಕಿನಲ್ಲಿ ಬಂದ ಬದಲಾವಣೆಗಳನ್ನು ರಾಜ್ಯದ ರೈತ ಮಲ್ಲಿಕಾರ್ಜುನ ವಿವರಿಸಿದರು. ಪರಿಸರ ಸ್ನೇಹಿ ಕೃಷಿಯಿಂದ ಆದಾಯ ಹೆಚ್ಚಿದಂತೆ ಖರ್ಚು ಕಡಿಮೆಯಾಗಿ ಜೀವನಮಟ್ಟ ಸುಧಾರಿಸಿದೆ ಎಂದು ಅವರು ಆಕಾಶವಾಣಿಯೊಂದಿಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.
ಪೊಂಗಲ್ ಹಬ್ಬವು ಕೃಷಿ, ಪ್ರಕೃತಿ ಮತ್ತು ಸಮಾಜದ ನಡುವೆ ಇರುವ ಆಪ್ತ ಸಂಬಂಧವನ್ನು ನೆನಪಿಸುವುದಾಗಿ ಪ್ರಧಾನಿ ಹೇಳಿ, ಹಬ್ಬದ ಸಂಭ್ರಮದೊಂದಿಗೆ ಸುಸ್ಥಿರತೆಯ ಸಂದೇಶವನ್ನೂ ಮನೆಮಾತಾಗಿಸಲು ಕರೆ ನೀಡಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…