Advertisement
MIRROR FOCUS

ಸುಸ್ಥಿರ ಕೃಷಿಯೇ ದೇಶದ ಬೆನ್ನೆಲುಬು – ಪ್ರಧಾನಿ ನರೇಂದ್ರ ಮೋದಿ

Share

ನವದೆಹಲಿಯಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವ ಡಾ. ಎಲ್. ಮುರುಗನ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಪೊಂಗಲ್ ಹಬ್ಬದ ಆಚರಣೆಯಲ್ಲಿ ನರೇಂದ್ರ ಮೋದಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಪೊಂಗಲ್ ಹಬ್ಬದ ಸಾಂಸ್ಕೃತಿಕ ಮಹತ್ವ ಹಾಗೂ ಕೃಷಿಯೊಂದಿಗೆ ಅದರ ಆಪ್ತ ಸಂಬಂಧವನ್ನು ಸ್ಮರಿಸಿ, ನಿಸರ್ಗದ ಸಂರಕ್ಷಣೆಯೇ ನಮ್ಮ ಭವಿಷ್ಯದ ಭದ್ರತೆ ಎಂದು ಹೇಳಿದರು.

ಮುಂದಿನ ಪೀಳಿಗೆಗಾಗಿ ನೀರು ಮತ್ತು ಮಣ್ಣನ್ನು ಉಳಿಸುವುದು ಎಲ್ಲರ ಜವಾಬ್ದಾರಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಸುಸ್ಥಿರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡರೆ ಪರಿಸರ ರಕ್ಷಣೆ ಮಾತ್ರವಲ್ಲ, ರೈತರು ಆರ್ಥಿಕವಾಗಿಯೂ ಸಬಲರಾಗಲು ಸಾಧ್ಯವೆಂದು ಅವರು ಹೇಳಿದರು. ಸಾವಯವ ಕೃಷಿಯತ್ತ ಸಾಗುವಿಕೆಯಿಂದ ಮಣ್ಣಿನ ಆರೋಗ್ಯ ಸುಧಾರಣೆ, ನೀರಿನ ಸಮರ್ಥ ಬಳಕೆ ಹಾಗೂ ಉತ್ಪಾದನಾ ವೆಚ್ಚದ ಕಡಿತ ಸಾಧ್ಯವಾಗುತ್ತದೆ ಎಂಬುದನ್ನೂ ಅವರು ಉಲ್ಲೇಖಿಸಿದರು.

ಇದೇ ಸಂದರ್ಭದಲ್ಲಿ, ಸಾವಯವ ಕೃಷಿ ಮಾದರಿಯಿಂದ ತಮ್ಮ ಬದುಕಿನಲ್ಲಿ ಬಂದ ಬದಲಾವಣೆಗಳನ್ನು ರಾಜ್ಯದ ರೈತ ಮಲ್ಲಿಕಾರ್ಜುನ ವಿವರಿಸಿದರು. ಪರಿಸರ ಸ್ನೇಹಿ ಕೃಷಿಯಿಂದ ಆದಾಯ ಹೆಚ್ಚಿದಂತೆ ಖರ್ಚು ಕಡಿಮೆಯಾಗಿ ಜೀವನಮಟ್ಟ ಸುಧಾರಿಸಿದೆ ಎಂದು ಅವರು ಆಕಾಶವಾಣಿಯೊಂದಿಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಪೊಂಗಲ್ ಹಬ್ಬವು ಕೃಷಿ, ಪ್ರಕೃತಿ ಮತ್ತು ಸಮಾಜದ ನಡುವೆ ಇರುವ ಆಪ್ತ ಸಂಬಂಧವನ್ನು ನೆನಪಿಸುವುದಾಗಿ ಪ್ರಧಾನಿ ಹೇಳಿ, ಹಬ್ಬದ ಸಂಭ್ರಮದೊಂದಿಗೆ ಸುಸ್ಥಿರತೆಯ ಸಂದೇಶವನ್ನೂ ಮನೆಮಾತಾಗಿಸಲು ಕರೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

7 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

11 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

17 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

18 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago