Advertisement
MIRROR FOCUS

ಸುಸ್ಥಿರ ಕೃಷಿಯೇ ದೇಶದ ಬೆನ್ನೆಲುಬು – ಪ್ರಧಾನಿ ನರೇಂದ್ರ ಮೋದಿ

Share

ನವದೆಹಲಿಯಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವ ಡಾ. ಎಲ್. ಮುರುಗನ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಪೊಂಗಲ್ ಹಬ್ಬದ ಆಚರಣೆಯಲ್ಲಿ ನರೇಂದ್ರ ಮೋದಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಪೊಂಗಲ್ ಹಬ್ಬದ ಸಾಂಸ್ಕೃತಿಕ ಮಹತ್ವ ಹಾಗೂ ಕೃಷಿಯೊಂದಿಗೆ ಅದರ ಆಪ್ತ ಸಂಬಂಧವನ್ನು ಸ್ಮರಿಸಿ, ನಿಸರ್ಗದ ಸಂರಕ್ಷಣೆಯೇ ನಮ್ಮ ಭವಿಷ್ಯದ ಭದ್ರತೆ ಎಂದು ಹೇಳಿದರು.

ಮುಂದಿನ ಪೀಳಿಗೆಗಾಗಿ ನೀರು ಮತ್ತು ಮಣ್ಣನ್ನು ಉಳಿಸುವುದು ಎಲ್ಲರ ಜವಾಬ್ದಾರಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಸುಸ್ಥಿರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡರೆ ಪರಿಸರ ರಕ್ಷಣೆ ಮಾತ್ರವಲ್ಲ, ರೈತರು ಆರ್ಥಿಕವಾಗಿಯೂ ಸಬಲರಾಗಲು ಸಾಧ್ಯವೆಂದು ಅವರು ಹೇಳಿದರು. ಸಾವಯವ ಕೃಷಿಯತ್ತ ಸಾಗುವಿಕೆಯಿಂದ ಮಣ್ಣಿನ ಆರೋಗ್ಯ ಸುಧಾರಣೆ, ನೀರಿನ ಸಮರ್ಥ ಬಳಕೆ ಹಾಗೂ ಉತ್ಪಾದನಾ ವೆಚ್ಚದ ಕಡಿತ ಸಾಧ್ಯವಾಗುತ್ತದೆ ಎಂಬುದನ್ನೂ ಅವರು ಉಲ್ಲೇಖಿಸಿದರು.

ಇದೇ ಸಂದರ್ಭದಲ್ಲಿ, ಸಾವಯವ ಕೃಷಿ ಮಾದರಿಯಿಂದ ತಮ್ಮ ಬದುಕಿನಲ್ಲಿ ಬಂದ ಬದಲಾವಣೆಗಳನ್ನು ರಾಜ್ಯದ ರೈತ ಮಲ್ಲಿಕಾರ್ಜುನ ವಿವರಿಸಿದರು. ಪರಿಸರ ಸ್ನೇಹಿ ಕೃಷಿಯಿಂದ ಆದಾಯ ಹೆಚ್ಚಿದಂತೆ ಖರ್ಚು ಕಡಿಮೆಯಾಗಿ ಜೀವನಮಟ್ಟ ಸುಧಾರಿಸಿದೆ ಎಂದು ಅವರು ಆಕಾಶವಾಣಿಯೊಂದಿಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಪೊಂಗಲ್ ಹಬ್ಬವು ಕೃಷಿ, ಪ್ರಕೃತಿ ಮತ್ತು ಸಮಾಜದ ನಡುವೆ ಇರುವ ಆಪ್ತ ಸಂಬಂಧವನ್ನು ನೆನಪಿಸುವುದಾಗಿ ಪ್ರಧಾನಿ ಹೇಳಿ, ಹಬ್ಬದ ಸಂಭ್ರಮದೊಂದಿಗೆ ಸುಸ್ಥಿರತೆಯ ಸಂದೇಶವನ್ನೂ ಮನೆಮಾತಾಗಿಸಲು ಕರೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

6 minutes ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

9 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

10 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

14 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

15 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

1 day ago