The Rural Mirror ವಾರದ ವಿಶೇಷ

ಕುಮಾರಪರ್ವತದಲ್ಲಿ ಪೂಜೆ | ಪರ್ವತದ ತುತ್ತತುದಿಯಲ್ಲಿ ನಡೆದ ಪೂಜೆ | ಕಾರ್ತಿಕೇಯನ ಮಹಿಮೆಯ ಬಗ್ಗೆ ಸದ್ಗುರು ಹೇಳುವುದು ಹೀಗೆ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಮಾರಪರ್ವತದ ತುತ್ತ ತುದಿಯಲ್ಲಿರುವ ಕುಮಾರಪಾದ ಮತ್ತು  ವಾಸುಕಿಗೆ ಕುಕ್ಕೆಸುಬ್ರಹ್ಮಣ್ಯ ದೇವಳದ ವತಿಯಿಂದ  ಪೂಜೆ  ನಡೆಯಿತು. ಸಮುದ್ರ ಮಟ್ಟದಿಂದ ಸುಮಾರು 4000 ಅಡಿ ಎತ್ತರವಿರುವ  ಕುಮಾರಪರ್ವತದ ತುತ್ತ ತುದಿಯಲ್ಲಿ ಈ ಪೂಜೆ ನಡೆಯಿತು.ಚಂಪಾ ಷಷ್ಠಿ ನಡೆದ ಬಳಿಕದ ಕೃಷ್ಣ ಪಕ್ಷದ ಷಷ್ಠಿಯಿಂದ ಈ ಪೂಜೆ ನಡೆಯುತ್ತದೆ. ಸುಮಾರು 200 ಕ್ಕೂ ಅಧಿಕ ಭಕ್ತರು ಭಾಗವಹಿಸಿದರು.

Advertisement
Advertisement

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಕುಮಾರಪರ್ವತಕ್ಕೆ  ಸಂಬಂಧವಿದೆ. ಕುಮಾರಪರ್ವತದ ತುತ್ತ ತುದಿಯಲ್ಲಿನ ಶಿಲೆಯಲ್ಲಿ ಕುಮಾರಸ್ವಾಮಿಯ ಪಾದಗಳ ಪಡಿಯಚ್ಚು ಇದೆ. ಇದರ ಪಕ್ಕದಲ್ಲಿ ವಾಸುಕಿ ನೆಲೆಯಾಗಿದ್ದಾರೆ. ಇಲ್ಲಿ  ದೇವಳದ  ಅರ್ಚಕರೇ ತೆರಳಿ ಕುಮಾರ ಪಾದಗಳಿಗೆ ಮತ್ತು ವಾಸುಕಿಗೆ ಅಭಿಷೇಕ ನೆರವೇರಿಸಿ ಪೂಜೆ ಮಾಡುವುದು ಸಂಪ್ರದಾಯ.

ಕುಮಾರಪರ್ವತದಲ್ಲಿ ಕುಮಾರಸ್ವಾಮಿಯು ತಾರಕಾದಿ ರಾಕ್ಷಸರನ್ನು ಕೊಂದು ಕತ್ತಿಯ ಅಲಗನ್ನು ಕುಮಾರಪರ್ವತದಲ್ಲಿ ಹುಟ್ಟುವ ಕುಮಾರಧಾರೆಯಲ್ಲಿ ತೊಳೆದ. ಬಳಿಕ ಷಣ್ಮುಖನು ವಾಸುಕಿಯೊಂದಿಗೆ ಕುಕ್ಕೆ ಕ್ಷೇತ್ರದಲ್ಲಿ ನೆಲೆಯಾದ ಎಂದು ಕ್ಷೇತ್ರ ಪುರಾಣ ಉಲ್ಲೇಖಿಸಿದೆ.

ಈ ನಡುವೆ ಸದ್ಗುರು ಜಗ್ಗಿ ವಾಸುದೇವ ಅವರು ಅಗಸ್ತ್ಯ ಮುನಿಗಳ ಬಗ್ಗೆ ಮಾತನಾಡುತ್ತಾ, ಕಾರ್ತಿಕೇಯನ ಕೋಪವನ್ನೂ ಅಗಸ್ತ್ಯರು ಇಳಿಸಿದ್ದಾರೆ ಎಂದು ಉಲ್ಲೇಖಿಸುತ್ತಾರೆ. ಅವರು ಉಲ್ಲೇಖಿಸುವಂತೆ, ಕಾರ್ತಿಕೇಯ ಶಿವನ ಮಗ. ಕಾರ್ತಿಕೇಯನಿಗೆ ಕೋಪ ಬಂದು ತಂದೆಯಿಂದ ದೂರ ಹೋಗಲು ಬಯಸಿದ. ಹೀಗಾಗಿ ಆತ ದೂರ ಬರುತ್ತಾ, ದಕ್ಷಿಣ ಕಡೆಗೆ ಹೋಗಿ ಉತ್ತಮ ಯೋಧನಾದ. ಎಲ್ಲರನ್ನೂ ಗೆದ್ದ. ಗೆದ್ದಿರುವುದು ಆಡಳಿತ ನಡೆಸಲು ಅಲ್ಲ. ಅನ್ಯಾಯ ಕಂಡಾಗ ಸಾಯಿಸುತ್ತಾ ಬಂದ. ನ್ಯಾಯ ಸ್ಥಾಪಿಸಲು ಬಯಸಿ ಈ ಯುದ್ಧಗಳನ್ನು ಮಾಡಿದ. ಕೋಪ ಇದ್ದಾಗ ಎಲ್ಲವೂ ಅನ್ಯಾಯ ಇದ್ದ ಹಾಗೆ ಕಾಣುತ್ತದೆ. ಹೀಗಾಗಿ ತುಂಬಾ ಜನರನ್ನು ಕಾರ್ತಿಕೇಯ ಕೊಂದ.

Advertisement

ದಕ್ಷಿಣಕ್ಕೆ ಬಂದ ಅಗಸ್ತ್ಯರು ಕಾರ್ತಿಕೇಯನ ಈ ಕೋಪವನ್ನು ತಣಿಸಲು ಜ್ಞಾನೋದಯದ ಮಾರ್ಗ ಬಳಸಿದರು. ಹೀಗಾಗಿ ಕಾರ್ತಿಕೇಯ ಶಾಂತನಾದ್ದು ಸುಬ್ರಹ್ಮಣ್ಯದಲ್ಲಿ. ಅಲ್ಲೇ ಆತ ಖಡ್ಗವನ್ನು ತೊಳೆದ. ಬಳಿಕ ಕೆಲ ಕಾಲ ಅಲ್ಲೇ ಇದ್ದು ಕುಮಾರ ಪರ್ವತಕ್ಕೆ ಹೋಗಿ ನಿಂತ ಭಂಗಿಯಲ್ಲಿ ಸಮಾಧಿಯನ್ನು ಪಡೆದ ಎಂದು ಉಲ್ಲೇಖಿಸುತ್ತಾರೆ ಸದ್ಗುರು.

Pooja was performed by Kukke subrahmanya temple to Kumarapada and Vasuki at the top of Kumara Parvatha. Every year this puja takes place after Champa Shashti. Thus Kukke Subrahmanya Temple and Kumar Parvata have a religious connection.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

1 hour ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

2 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

2 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

2 days ago