MIRROR FOCUS

ನಾಗ್ಪುರದಲ್ಲಿ ದಾಸ್ತಾನು ಇರಿಸಿದ್ದ ವಿದೇಶಿ ಅಡಿಕೆ ಪತ್ತೆ | 20 ಸಾವಿರ ಕೆಜಿ ಅಡಿಕೆ ವಶಕ್ಕೆ ಪಡೆದ ಪೊಲೀಸರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಾರದ ಹಿಂದೆ ಮುಂದ್ರಾ ಬಂದರಿನಲ್ಲಿ ಎಣ್ಣೆಯ ಹೆಸರಿನಲ್ಲಿ ಆಮದಾಗಿದ್ದ ಅಡಿಕೆ ಪತ್ತೆಯಾಗಿತ್ತು. ಇದೀಗ ನಾಗ್ಪುರದಲ್ಲಿ ದಾಸ್ತಾನು ಇರಿಸಿದ್ದ ಸುಮಾರು 20 ಸಾವಿರ ಕೆಜಿ ಅಡಿಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement
Advertisement

ಕೋಲ್ಡ್ ಸ್ಟೋರೇಜ್‌ನಲ್ಲಿ ದಾಸ್ತಾನು ಇರಿಸಿದ್ದ ಅಡಿಕೆಯನ್ನು ಲೋಡ್ ಮಾಡುತ್ತಿದ್ದ ವೇಳೆ ಪೊಲೀಸರು ಇಪ್ಪತ್ತು ಸಾವಿರ ಕೆಜಿ ತೂಕದ 250 ಮೂಟೆಗಳ ಕಳಪೆ ಗುಣಮಟ್ಟದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸರಕುಗಳನ್ನು  ಆಹಾರ ಮತ್ತು ಔಷಧಿಗಳ ಆಡಳಿತಕ್ಕೆ (ಎಫ್ಡಿಎ) ಹಸ್ತಾಂತರಿಸಲಾಗಿದೆ.

ಮಧ್ಯ ಭಾರತದ ಮಹಾರಾಷ್ಟ್ರದ ನಾಗ್ಪುರ, ಉತ್ತರ ಪ್ರದೇಶ, ಗುಜರಾತ್‌ ಮೊದಲಾದ ಪ್ರದೇಶಗಳು  ಅಡಿಕೆ ಪೂರೈಕೆಯ ಪ್ರಮುಖ ಕೇಂದ್ರಗಳು. ಇಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ವ್ಯವಹಾರ ನಡೆಯುತ್ತದೆ. ಈಚೆಗೆ ಕೆಲವು ವ್ಯಾಪಾರಿಗಳು ವಿದೇಶದ ಅಡಿಕೆಯನ್ನು ಬೃಹತ್‌ ಪ್ರಮಾಣದಲ್ಲಿ ಕಳ್ಳ ದಾರಿಯ ಮೂಲಕ ಅಥವಾ ನಕಲಿ ಹೆಸರಿನಲ್ಲಿ ಅಡಿಕೆ ಆಮದು ಮಾಡುತ್ತಿರುವುದು ಬೆಳೆಕಿಗೆ ಬಂದಿದೆ. ಹೀಗಾಗಿ ತಪಾಸಣೆ ಬಿಗುಗೊಂಡಿದೆ. ಕೆಲವು ವ್ಯಾಪಾರಿಗಳು, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಶ್ರೀಲಂಕಾದಿಂದ ಕಡಿಮೆ ವೆಚ್ಚದಲ್ಲಿ ಕೆಳದರ್ಜೆಯ ಅಡಿಕೆಯನ್ನು ಕಳ್ಳಸಾಗಣೆ ಮಾಡುತ್ತಾರೆ, ಅವುಗಳನ್ನು ರಾಸಾಯನಿಕ ಸಿಹಿಕಾರಕಗಳು ಮತ್ತು ಸುವಾಸನೆಗಳೊಂದಿಗೆ ಸಂಸ್ಕರಿಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ.

ಇದೀಗ ಕಳಪೆ ಗುಣಮಟ್ಟದ ಅಡಿಕೆಯ ಮೇಲೆ ದಾಳಿ ಪ್ರಕ್ರಿಯೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಸುಳಿವಿನ ಮೇರೆಗೆ  ಡಿಸಿಪಿ ನಿಕೇತನ್ ಕದಂ ಅವರ ಮೇಲ್ವಿಚಾರಣೆಯಲ್ಲಿ ಹಿರಿಯ ಇನ್ಸ್‌ಪೆಕ್ಟರ್ ಗೋಕುಲ್ ಮಹಾಜನ್ ಅವರ ಕಲಾಮ್ನಾ ಪೊಲೀಸ್ ತಂಡವು ಕಳಪೆ ಗುಣಮಟ್ಟದ ಅಡಿಕೆ ವಶಪಡಿಸಿಕೊಂಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

11 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

12 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

13 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

14 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

15 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago