Advertisement
MIRROR FOCUS

ನಾಗ್ಪುರದಲ್ಲಿ ದಾಸ್ತಾನು ಇರಿಸಿದ್ದ ವಿದೇಶಿ ಅಡಿಕೆ ಪತ್ತೆ | 20 ಸಾವಿರ ಕೆಜಿ ಅಡಿಕೆ ವಶಕ್ಕೆ ಪಡೆದ ಪೊಲೀಸರು |

Share

ವಾರದ ಹಿಂದೆ ಮುಂದ್ರಾ ಬಂದರಿನಲ್ಲಿ ಎಣ್ಣೆಯ ಹೆಸರಿನಲ್ಲಿ ಆಮದಾಗಿದ್ದ ಅಡಿಕೆ ಪತ್ತೆಯಾಗಿತ್ತು. ಇದೀಗ ನಾಗ್ಪುರದಲ್ಲಿ ದಾಸ್ತಾನು ಇರಿಸಿದ್ದ ಸುಮಾರು 20 ಸಾವಿರ ಕೆಜಿ ಅಡಿಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕೋಲ್ಡ್ ಸ್ಟೋರೇಜ್‌ನಲ್ಲಿ ದಾಸ್ತಾನು ಇರಿಸಿದ್ದ ಅಡಿಕೆಯನ್ನು ಲೋಡ್ ಮಾಡುತ್ತಿದ್ದ ವೇಳೆ ಪೊಲೀಸರು ಇಪ್ಪತ್ತು ಸಾವಿರ ಕೆಜಿ ತೂಕದ 250 ಮೂಟೆಗಳ ಕಳಪೆ ಗುಣಮಟ್ಟದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸರಕುಗಳನ್ನು  ಆಹಾರ ಮತ್ತು ಔಷಧಿಗಳ ಆಡಳಿತಕ್ಕೆ (ಎಫ್ಡಿಎ) ಹಸ್ತಾಂತರಿಸಲಾಗಿದೆ.

ಮಧ್ಯ ಭಾರತದ ಮಹಾರಾಷ್ಟ್ರದ ನಾಗ್ಪುರ, ಉತ್ತರ ಪ್ರದೇಶ, ಗುಜರಾತ್‌ ಮೊದಲಾದ ಪ್ರದೇಶಗಳು  ಅಡಿಕೆ ಪೂರೈಕೆಯ ಪ್ರಮುಖ ಕೇಂದ್ರಗಳು. ಇಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ವ್ಯವಹಾರ ನಡೆಯುತ್ತದೆ. ಈಚೆಗೆ ಕೆಲವು ವ್ಯಾಪಾರಿಗಳು ವಿದೇಶದ ಅಡಿಕೆಯನ್ನು ಬೃಹತ್‌ ಪ್ರಮಾಣದಲ್ಲಿ ಕಳ್ಳ ದಾರಿಯ ಮೂಲಕ ಅಥವಾ ನಕಲಿ ಹೆಸರಿನಲ್ಲಿ ಅಡಿಕೆ ಆಮದು ಮಾಡುತ್ತಿರುವುದು ಬೆಳೆಕಿಗೆ ಬಂದಿದೆ. ಹೀಗಾಗಿ ತಪಾಸಣೆ ಬಿಗುಗೊಂಡಿದೆ. ಕೆಲವು ವ್ಯಾಪಾರಿಗಳು, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಶ್ರೀಲಂಕಾದಿಂದ ಕಡಿಮೆ ವೆಚ್ಚದಲ್ಲಿ ಕೆಳದರ್ಜೆಯ ಅಡಿಕೆಯನ್ನು ಕಳ್ಳಸಾಗಣೆ ಮಾಡುತ್ತಾರೆ, ಅವುಗಳನ್ನು ರಾಸಾಯನಿಕ ಸಿಹಿಕಾರಕಗಳು ಮತ್ತು ಸುವಾಸನೆಗಳೊಂದಿಗೆ ಸಂಸ್ಕರಿಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ.

ಇದೀಗ ಕಳಪೆ ಗುಣಮಟ್ಟದ ಅಡಿಕೆಯ ಮೇಲೆ ದಾಳಿ ಪ್ರಕ್ರಿಯೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಸುಳಿವಿನ ಮೇರೆಗೆ  ಡಿಸಿಪಿ ನಿಕೇತನ್ ಕದಂ ಅವರ ಮೇಲ್ವಿಚಾರಣೆಯಲ್ಲಿ ಹಿರಿಯ ಇನ್ಸ್‌ಪೆಕ್ಟರ್ ಗೋಕುಲ್ ಮಹಾಜನ್ ಅವರ ಕಲಾಮ್ನಾ ಪೊಲೀಸ್ ತಂಡವು ಕಳಪೆ ಗುಣಮಟ್ಟದ ಅಡಿಕೆ ವಶಪಡಿಸಿಕೊಂಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

6 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

6 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

7 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

15 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

1 day ago