Advertisement
MIRROR FOCUS

ನಾಗ್ಪುರದಲ್ಲಿ ದಾಸ್ತಾನು ಇರಿಸಿದ್ದ ವಿದೇಶಿ ಅಡಿಕೆ ಪತ್ತೆ | 20 ಸಾವಿರ ಕೆಜಿ ಅಡಿಕೆ ವಶಕ್ಕೆ ಪಡೆದ ಪೊಲೀಸರು |

Share

ವಾರದ ಹಿಂದೆ ಮುಂದ್ರಾ ಬಂದರಿನಲ್ಲಿ ಎಣ್ಣೆಯ ಹೆಸರಿನಲ್ಲಿ ಆಮದಾಗಿದ್ದ ಅಡಿಕೆ ಪತ್ತೆಯಾಗಿತ್ತು. ಇದೀಗ ನಾಗ್ಪುರದಲ್ಲಿ ದಾಸ್ತಾನು ಇರಿಸಿದ್ದ ಸುಮಾರು 20 ಸಾವಿರ ಕೆಜಿ ಅಡಿಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕೋಲ್ಡ್ ಸ್ಟೋರೇಜ್‌ನಲ್ಲಿ ದಾಸ್ತಾನು ಇರಿಸಿದ್ದ ಅಡಿಕೆಯನ್ನು ಲೋಡ್ ಮಾಡುತ್ತಿದ್ದ ವೇಳೆ ಪೊಲೀಸರು ಇಪ್ಪತ್ತು ಸಾವಿರ ಕೆಜಿ ತೂಕದ 250 ಮೂಟೆಗಳ ಕಳಪೆ ಗುಣಮಟ್ಟದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸರಕುಗಳನ್ನು  ಆಹಾರ ಮತ್ತು ಔಷಧಿಗಳ ಆಡಳಿತಕ್ಕೆ (ಎಫ್ಡಿಎ) ಹಸ್ತಾಂತರಿಸಲಾಗಿದೆ.

ಮಧ್ಯ ಭಾರತದ ಮಹಾರಾಷ್ಟ್ರದ ನಾಗ್ಪುರ, ಉತ್ತರ ಪ್ರದೇಶ, ಗುಜರಾತ್‌ ಮೊದಲಾದ ಪ್ರದೇಶಗಳು  ಅಡಿಕೆ ಪೂರೈಕೆಯ ಪ್ರಮುಖ ಕೇಂದ್ರಗಳು. ಇಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ವ್ಯವಹಾರ ನಡೆಯುತ್ತದೆ. ಈಚೆಗೆ ಕೆಲವು ವ್ಯಾಪಾರಿಗಳು ವಿದೇಶದ ಅಡಿಕೆಯನ್ನು ಬೃಹತ್‌ ಪ್ರಮಾಣದಲ್ಲಿ ಕಳ್ಳ ದಾರಿಯ ಮೂಲಕ ಅಥವಾ ನಕಲಿ ಹೆಸರಿನಲ್ಲಿ ಅಡಿಕೆ ಆಮದು ಮಾಡುತ್ತಿರುವುದು ಬೆಳೆಕಿಗೆ ಬಂದಿದೆ. ಹೀಗಾಗಿ ತಪಾಸಣೆ ಬಿಗುಗೊಂಡಿದೆ. ಕೆಲವು ವ್ಯಾಪಾರಿಗಳು, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಶ್ರೀಲಂಕಾದಿಂದ ಕಡಿಮೆ ವೆಚ್ಚದಲ್ಲಿ ಕೆಳದರ್ಜೆಯ ಅಡಿಕೆಯನ್ನು ಕಳ್ಳಸಾಗಣೆ ಮಾಡುತ್ತಾರೆ, ಅವುಗಳನ್ನು ರಾಸಾಯನಿಕ ಸಿಹಿಕಾರಕಗಳು ಮತ್ತು ಸುವಾಸನೆಗಳೊಂದಿಗೆ ಸಂಸ್ಕರಿಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ.

ಇದೀಗ ಕಳಪೆ ಗುಣಮಟ್ಟದ ಅಡಿಕೆಯ ಮೇಲೆ ದಾಳಿ ಪ್ರಕ್ರಿಯೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಸುಳಿವಿನ ಮೇರೆಗೆ  ಡಿಸಿಪಿ ನಿಕೇತನ್ ಕದಂ ಅವರ ಮೇಲ್ವಿಚಾರಣೆಯಲ್ಲಿ ಹಿರಿಯ ಇನ್ಸ್‌ಪೆಕ್ಟರ್ ಗೋಕುಲ್ ಮಹಾಜನ್ ಅವರ ಕಲಾಮ್ನಾ ಪೊಲೀಸ್ ತಂಡವು ಕಳಪೆ ಗುಣಮಟ್ಟದ ಅಡಿಕೆ ವಶಪಡಿಸಿಕೊಂಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

14 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago