ವಾರದ ಹಿಂದೆ ಮುಂದ್ರಾ ಬಂದರಿನಲ್ಲಿ ಎಣ್ಣೆಯ ಹೆಸರಿನಲ್ಲಿ ಆಮದಾಗಿದ್ದ ಅಡಿಕೆ ಪತ್ತೆಯಾಗಿತ್ತು. ಇದೀಗ ನಾಗ್ಪುರದಲ್ಲಿ ದಾಸ್ತಾನು ಇರಿಸಿದ್ದ ಸುಮಾರು 20 ಸಾವಿರ ಕೆಜಿ ಅಡಿಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕೋಲ್ಡ್ ಸ್ಟೋರೇಜ್ನಲ್ಲಿ ದಾಸ್ತಾನು ಇರಿಸಿದ್ದ ಅಡಿಕೆಯನ್ನು ಲೋಡ್ ಮಾಡುತ್ತಿದ್ದ ವೇಳೆ ಪೊಲೀಸರು ಇಪ್ಪತ್ತು ಸಾವಿರ ಕೆಜಿ ತೂಕದ 250 ಮೂಟೆಗಳ ಕಳಪೆ ಗುಣಮಟ್ಟದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸರಕುಗಳನ್ನು ಆಹಾರ ಮತ್ತು ಔಷಧಿಗಳ ಆಡಳಿತಕ್ಕೆ (ಎಫ್ಡಿಎ) ಹಸ್ತಾಂತರಿಸಲಾಗಿದೆ.
ಮಧ್ಯ ಭಾರತದ ಮಹಾರಾಷ್ಟ್ರದ ನಾಗ್ಪುರ, ಉತ್ತರ ಪ್ರದೇಶ, ಗುಜರಾತ್ ಮೊದಲಾದ ಪ್ರದೇಶಗಳು ಅಡಿಕೆ ಪೂರೈಕೆಯ ಪ್ರಮುಖ ಕೇಂದ್ರಗಳು. ಇಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ವ್ಯವಹಾರ ನಡೆಯುತ್ತದೆ. ಈಚೆಗೆ ಕೆಲವು ವ್ಯಾಪಾರಿಗಳು ವಿದೇಶದ ಅಡಿಕೆಯನ್ನು ಬೃಹತ್ ಪ್ರಮಾಣದಲ್ಲಿ ಕಳ್ಳ ದಾರಿಯ ಮೂಲಕ ಅಥವಾ ನಕಲಿ ಹೆಸರಿನಲ್ಲಿ ಅಡಿಕೆ ಆಮದು ಮಾಡುತ್ತಿರುವುದು ಬೆಳೆಕಿಗೆ ಬಂದಿದೆ. ಹೀಗಾಗಿ ತಪಾಸಣೆ ಬಿಗುಗೊಂಡಿದೆ. ಕೆಲವು ವ್ಯಾಪಾರಿಗಳು, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಶ್ರೀಲಂಕಾದಿಂದ ಕಡಿಮೆ ವೆಚ್ಚದಲ್ಲಿ ಕೆಳದರ್ಜೆಯ ಅಡಿಕೆಯನ್ನು ಕಳ್ಳಸಾಗಣೆ ಮಾಡುತ್ತಾರೆ, ಅವುಗಳನ್ನು ರಾಸಾಯನಿಕ ಸಿಹಿಕಾರಕಗಳು ಮತ್ತು ಸುವಾಸನೆಗಳೊಂದಿಗೆ ಸಂಸ್ಕರಿಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ.
ಇದೀಗ ಕಳಪೆ ಗುಣಮಟ್ಟದ ಅಡಿಕೆಯ ಮೇಲೆ ದಾಳಿ ಪ್ರಕ್ರಿಯೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಸುಳಿವಿನ ಮೇರೆಗೆ ಡಿಸಿಪಿ ನಿಕೇತನ್ ಕದಂ ಅವರ ಮೇಲ್ವಿಚಾರಣೆಯಲ್ಲಿ ಹಿರಿಯ ಇನ್ಸ್ಪೆಕ್ಟರ್ ಗೋಕುಲ್ ಮಹಾಜನ್ ಅವರ ಕಲಾಮ್ನಾ ಪೊಲೀಸ್ ತಂಡವು ಕಳಪೆ ಗುಣಮಟ್ಟದ ಅಡಿಕೆ ವಶಪಡಿಸಿಕೊಂಡಿದೆ.
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…