ವಾರದ ಹಿಂದೆ ಮುಂದ್ರಾ ಬಂದರಿನಲ್ಲಿ ಎಣ್ಣೆಯ ಹೆಸರಿನಲ್ಲಿ ಆಮದಾಗಿದ್ದ ಅಡಿಕೆ ಪತ್ತೆಯಾಗಿತ್ತು. ಇದೀಗ ನಾಗ್ಪುರದಲ್ಲಿ ದಾಸ್ತಾನು ಇರಿಸಿದ್ದ ಸುಮಾರು 20 ಸಾವಿರ ಕೆಜಿ ಅಡಿಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕೋಲ್ಡ್ ಸ್ಟೋರೇಜ್ನಲ್ಲಿ ದಾಸ್ತಾನು ಇರಿಸಿದ್ದ ಅಡಿಕೆಯನ್ನು ಲೋಡ್ ಮಾಡುತ್ತಿದ್ದ ವೇಳೆ ಪೊಲೀಸರು ಇಪ್ಪತ್ತು ಸಾವಿರ ಕೆಜಿ ತೂಕದ 250 ಮೂಟೆಗಳ ಕಳಪೆ ಗುಣಮಟ್ಟದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸರಕುಗಳನ್ನು ಆಹಾರ ಮತ್ತು ಔಷಧಿಗಳ ಆಡಳಿತಕ್ಕೆ (ಎಫ್ಡಿಎ) ಹಸ್ತಾಂತರಿಸಲಾಗಿದೆ.
ಮಧ್ಯ ಭಾರತದ ಮಹಾರಾಷ್ಟ್ರದ ನಾಗ್ಪುರ, ಉತ್ತರ ಪ್ರದೇಶ, ಗುಜರಾತ್ ಮೊದಲಾದ ಪ್ರದೇಶಗಳು ಅಡಿಕೆ ಪೂರೈಕೆಯ ಪ್ರಮುಖ ಕೇಂದ್ರಗಳು. ಇಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ವ್ಯವಹಾರ ನಡೆಯುತ್ತದೆ. ಈಚೆಗೆ ಕೆಲವು ವ್ಯಾಪಾರಿಗಳು ವಿದೇಶದ ಅಡಿಕೆಯನ್ನು ಬೃಹತ್ ಪ್ರಮಾಣದಲ್ಲಿ ಕಳ್ಳ ದಾರಿಯ ಮೂಲಕ ಅಥವಾ ನಕಲಿ ಹೆಸರಿನಲ್ಲಿ ಅಡಿಕೆ ಆಮದು ಮಾಡುತ್ತಿರುವುದು ಬೆಳೆಕಿಗೆ ಬಂದಿದೆ. ಹೀಗಾಗಿ ತಪಾಸಣೆ ಬಿಗುಗೊಂಡಿದೆ. ಕೆಲವು ವ್ಯಾಪಾರಿಗಳು, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಶ್ರೀಲಂಕಾದಿಂದ ಕಡಿಮೆ ವೆಚ್ಚದಲ್ಲಿ ಕೆಳದರ್ಜೆಯ ಅಡಿಕೆಯನ್ನು ಕಳ್ಳಸಾಗಣೆ ಮಾಡುತ್ತಾರೆ, ಅವುಗಳನ್ನು ರಾಸಾಯನಿಕ ಸಿಹಿಕಾರಕಗಳು ಮತ್ತು ಸುವಾಸನೆಗಳೊಂದಿಗೆ ಸಂಸ್ಕರಿಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ.
ಇದೀಗ ಕಳಪೆ ಗುಣಮಟ್ಟದ ಅಡಿಕೆಯ ಮೇಲೆ ದಾಳಿ ಪ್ರಕ್ರಿಯೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಸುಳಿವಿನ ಮೇರೆಗೆ ಡಿಸಿಪಿ ನಿಕೇತನ್ ಕದಂ ಅವರ ಮೇಲ್ವಿಚಾರಣೆಯಲ್ಲಿ ಹಿರಿಯ ಇನ್ಸ್ಪೆಕ್ಟರ್ ಗೋಕುಲ್ ಮಹಾಜನ್ ಅವರ ಕಲಾಮ್ನಾ ಪೊಲೀಸ್ ತಂಡವು ಕಳಪೆ ಗುಣಮಟ್ಟದ ಅಡಿಕೆ ವಶಪಡಿಸಿಕೊಂಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…