Advertisement
MIRROR FOCUS

ನಾಗ್ಪುರದಲ್ಲಿ ದಾಸ್ತಾನು ಇರಿಸಿದ್ದ ವಿದೇಶಿ ಅಡಿಕೆ ಪತ್ತೆ | 20 ಸಾವಿರ ಕೆಜಿ ಅಡಿಕೆ ವಶಕ್ಕೆ ಪಡೆದ ಪೊಲೀಸರು |

Share

ವಾರದ ಹಿಂದೆ ಮುಂದ್ರಾ ಬಂದರಿನಲ್ಲಿ ಎಣ್ಣೆಯ ಹೆಸರಿನಲ್ಲಿ ಆಮದಾಗಿದ್ದ ಅಡಿಕೆ ಪತ್ತೆಯಾಗಿತ್ತು. ಇದೀಗ ನಾಗ್ಪುರದಲ್ಲಿ ದಾಸ್ತಾನು ಇರಿಸಿದ್ದ ಸುಮಾರು 20 ಸಾವಿರ ಕೆಜಿ ಅಡಿಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕೋಲ್ಡ್ ಸ್ಟೋರೇಜ್‌ನಲ್ಲಿ ದಾಸ್ತಾನು ಇರಿಸಿದ್ದ ಅಡಿಕೆಯನ್ನು ಲೋಡ್ ಮಾಡುತ್ತಿದ್ದ ವೇಳೆ ಪೊಲೀಸರು ಇಪ್ಪತ್ತು ಸಾವಿರ ಕೆಜಿ ತೂಕದ 250 ಮೂಟೆಗಳ ಕಳಪೆ ಗುಣಮಟ್ಟದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸರಕುಗಳನ್ನು  ಆಹಾರ ಮತ್ತು ಔಷಧಿಗಳ ಆಡಳಿತಕ್ಕೆ (ಎಫ್ಡಿಎ) ಹಸ್ತಾಂತರಿಸಲಾಗಿದೆ.

ಮಧ್ಯ ಭಾರತದ ಮಹಾರಾಷ್ಟ್ರದ ನಾಗ್ಪುರ, ಉತ್ತರ ಪ್ರದೇಶ, ಗುಜರಾತ್‌ ಮೊದಲಾದ ಪ್ರದೇಶಗಳು  ಅಡಿಕೆ ಪೂರೈಕೆಯ ಪ್ರಮುಖ ಕೇಂದ್ರಗಳು. ಇಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ವ್ಯವಹಾರ ನಡೆಯುತ್ತದೆ. ಈಚೆಗೆ ಕೆಲವು ವ್ಯಾಪಾರಿಗಳು ವಿದೇಶದ ಅಡಿಕೆಯನ್ನು ಬೃಹತ್‌ ಪ್ರಮಾಣದಲ್ಲಿ ಕಳ್ಳ ದಾರಿಯ ಮೂಲಕ ಅಥವಾ ನಕಲಿ ಹೆಸರಿನಲ್ಲಿ ಅಡಿಕೆ ಆಮದು ಮಾಡುತ್ತಿರುವುದು ಬೆಳೆಕಿಗೆ ಬಂದಿದೆ. ಹೀಗಾಗಿ ತಪಾಸಣೆ ಬಿಗುಗೊಂಡಿದೆ. ಕೆಲವು ವ್ಯಾಪಾರಿಗಳು, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಶ್ರೀಲಂಕಾದಿಂದ ಕಡಿಮೆ ವೆಚ್ಚದಲ್ಲಿ ಕೆಳದರ್ಜೆಯ ಅಡಿಕೆಯನ್ನು ಕಳ್ಳಸಾಗಣೆ ಮಾಡುತ್ತಾರೆ, ಅವುಗಳನ್ನು ರಾಸಾಯನಿಕ ಸಿಹಿಕಾರಕಗಳು ಮತ್ತು ಸುವಾಸನೆಗಳೊಂದಿಗೆ ಸಂಸ್ಕರಿಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ.

ಇದೀಗ ಕಳಪೆ ಗುಣಮಟ್ಟದ ಅಡಿಕೆಯ ಮೇಲೆ ದಾಳಿ ಪ್ರಕ್ರಿಯೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಸುಳಿವಿನ ಮೇರೆಗೆ  ಡಿಸಿಪಿ ನಿಕೇತನ್ ಕದಂ ಅವರ ಮೇಲ್ವಿಚಾರಣೆಯಲ್ಲಿ ಹಿರಿಯ ಇನ್ಸ್‌ಪೆಕ್ಟರ್ ಗೋಕುಲ್ ಮಹಾಜನ್ ಅವರ ಕಲಾಮ್ನಾ ಪೊಲೀಸ್ ತಂಡವು ಕಳಪೆ ಗುಣಮಟ್ಟದ ಅಡಿಕೆ ವಶಪಡಿಸಿಕೊಂಡಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

13 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

19 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago