Advertisement
MIRROR FOCUS

ಜಾತಿ ವಿಷಯದಲ್ಲಿ ಬಡವಾದ ಶಾಲಾ ಮಕ್ಕಳು | 21 ವರ್ಷದ ಬಳಿಕ ಗ್ರಾಮೀಣ ಶಾಲೆಗೆ ದಕ್ಕಿದ ಬಿಸಿಯೂಟದ ಭಾಗ್ಯ…!

Share

ಅದೆಷ್ಟೋ ಮಕ್ಕಳು ಕೇವಲ ಬಿಸಿಯೂಟದ ಕಾರಣದಿಂದ ಶಾಲೆಗೆ ಬರುವುದು ಇದೆ. ಒಳ್ಳೆ ಊಟ ಸಿಗುತ್ತೆ, ಮೊಟ್ಟೆ ಸಿಗುತ್ತೆ, ಹಾಲು ಸಿಗುತ್ತೆ. ಕೆಲ ಮಕ್ಕಳಿಗೆ ಅದೇನೋ ಸಂಭ್ರಮ. ಆದರೆ ಇಲ್ಲೊಂದು ಶಾಲೆಯಲ್ಲಿ ಕಳೆದ 21 ವರ್ಷಗಳಿಂದ ಮಕ್ಕಳಿಗೆ ಬಿಸಿಯೂಟ ವೇ ಇರಲಿಲ್ಲ. ಸರ್ಕಾರದ ನಿರ್ಲಕ್ಷ್ಯವೂ, ಊರಿನ ಜನರ ಉದ್ದಟತನವೂ ತಿಳಿಯದು. ಆದರೆ ವಂಚಿತರಾಗಿದ್ದು ಶಾಲೆ ಮಕ್ಕಳು. ಇದೀಗ ಮತ್ತೆ ಆ ಶಾಲೆಯ ಮಕ್ಕಳಿಗೆ ಬಿಸಿಯೂಟ ಉಣ್ಣುವ ಭಾಗ್ಯ ಒದಗಿ ಬಂದಿದೆ.

Advertisement
Advertisement
Advertisement
Advertisement

ಯಾದಗಿರಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಬರೋಬ್ಬರಿ 21 ವರ್ಷಗಳ ಬಳಿಕ ಮಕ್ಕಳಿಗೆ ಬಿಸಿಯೂಟದ ಭಾಗ್ಯ ಒದಗಿಸಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಚೆನ್ನೂರ್ ಗ್ರಾಮ ದ ಶಾಲೆಯಲ್ಲಿ ಜಾತಿ ಸಂಘರ್ಷದಿಂದ ಬಿಸಿಯೂಟ ಬಂದ್ ಆಗಿತ್ತು. ಅಧಿಕಾರಿಗಳ ಸಂಧಾನದ ಬಳಿಕ ಬಿಸಿಯೂಟ ಕೊನೆಗೂ ಆರಂಭಗೊಂಡಿದೆ.

Advertisement

2002 ರಲ್ಲಿ ಬಿಸಿಯೂಟ ಸಹಾಯಕಿಯರ ನೇಮಕದ ವಿಚಾರದಲ್ಲಿ ಗಲಾಟೆ ನಡೆದಿತ್ತು. ಮೀಸಲಾತಿ ಪ್ರಕಾರ ಓರ್ವ ದಲಿತ ಮಹಿಳೆಗೆ ಅಡುಗೆ ಸಹಾಯಕಿ ಹುದ್ದೆಗೆ ತೆಗೆದುಕೊಳ್ಳಬೇಕಾಗಿತ್ತು. ಆದರೆ ದಲಿತರು ಮಾಡಿದ ಅಡುಗೆ ನಾವು ತಿನ್ನಬಾರದು ಎಂದು  ತಗಾದೆ ತೆಗೆದಿದ್ದರು. ಇದೇ ಕಾರಣಕ್ಕೆ ಅಂದಿನಿಂದ ಶಾಲೆಯಲ್ಲಿ ಬಿಸಿಯೂಟ ಮಾಡಿರಲಿಲ್ಲ!

ಆದರೆ ನಿನ್ನೆ ಜಿಲ್ಲಾ ಅಕ್ಷರದಾಸೋಹದ ಅಧಿಕಾರಿಗಳು ಗ್ರಾಮಕ್ಕೆ ಭೇಡಿ ಎರಡೂ ಕಡೆಯವರಿಗೆ ಮನವೊಲಿಸಿದ್ದಾರೆ. ಬಳಿಕ ನಿನ್ನೆ ಸದ್ಯಕ್ಕೆ ವಿಶ್ವಗಂಗ ಸಂಸ್ಥೆಯ ಮೂಲಕ ಬಿಸಿಯೂಟ ವಿತರಣೆ ಮಾಡಲಾಗಿದೆ. ಮಕ್ಕಳು ಹಾಗೂ ಪೋಷಕರು 21 ವರ್ಷದ ಬಳಿಕ ಶಾಲೆಗೆ ಬಿಸಿಯೂಟ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. 1 ರಿಂದ 5 ನೇ ತರಗತಿ ವರೆಗೆ ಇರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇದಾಗಿದೆ. SDMC ರಚನೆ ಬಳಿಕ SDMC ತೀರ್ಮಾನದಂತೆ ಬಿಸಿಯೂಟ ಸಹಾಯಕಿಯರ ನೇಮಕ‌ ಮಾಡಲಾಗುತ್ತೆ ಎಂದು ತಿಳಿದುಬಂದಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

3 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago