Advertisement
MIRROR FOCUS

ಜಾತಿ ವಿಷಯದಲ್ಲಿ ಬಡವಾದ ಶಾಲಾ ಮಕ್ಕಳು | 21 ವರ್ಷದ ಬಳಿಕ ಗ್ರಾಮೀಣ ಶಾಲೆಗೆ ದಕ್ಕಿದ ಬಿಸಿಯೂಟದ ಭಾಗ್ಯ…!

Share

ಅದೆಷ್ಟೋ ಮಕ್ಕಳು ಕೇವಲ ಬಿಸಿಯೂಟದ ಕಾರಣದಿಂದ ಶಾಲೆಗೆ ಬರುವುದು ಇದೆ. ಒಳ್ಳೆ ಊಟ ಸಿಗುತ್ತೆ, ಮೊಟ್ಟೆ ಸಿಗುತ್ತೆ, ಹಾಲು ಸಿಗುತ್ತೆ. ಕೆಲ ಮಕ್ಕಳಿಗೆ ಅದೇನೋ ಸಂಭ್ರಮ. ಆದರೆ ಇಲ್ಲೊಂದು ಶಾಲೆಯಲ್ಲಿ ಕಳೆದ 21 ವರ್ಷಗಳಿಂದ ಮಕ್ಕಳಿಗೆ ಬಿಸಿಯೂಟ ವೇ ಇರಲಿಲ್ಲ. ಸರ್ಕಾರದ ನಿರ್ಲಕ್ಷ್ಯವೂ, ಊರಿನ ಜನರ ಉದ್ದಟತನವೂ ತಿಳಿಯದು. ಆದರೆ ವಂಚಿತರಾಗಿದ್ದು ಶಾಲೆ ಮಕ್ಕಳು. ಇದೀಗ ಮತ್ತೆ ಆ ಶಾಲೆಯ ಮಕ್ಕಳಿಗೆ ಬಿಸಿಯೂಟ ಉಣ್ಣುವ ಭಾಗ್ಯ ಒದಗಿ ಬಂದಿದೆ.

ಯಾದಗಿರಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಬರೋಬ್ಬರಿ 21 ವರ್ಷಗಳ ಬಳಿಕ ಮಕ್ಕಳಿಗೆ ಬಿಸಿಯೂಟದ ಭಾಗ್ಯ ಒದಗಿಸಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಚೆನ್ನೂರ್ ಗ್ರಾಮ ದ ಶಾಲೆಯಲ್ಲಿ ಜಾತಿ ಸಂಘರ್ಷದಿಂದ ಬಿಸಿಯೂಟ ಬಂದ್ ಆಗಿತ್ತು. ಅಧಿಕಾರಿಗಳ ಸಂಧಾನದ ಬಳಿಕ ಬಿಸಿಯೂಟ ಕೊನೆಗೂ ಆರಂಭಗೊಂಡಿದೆ.

2002 ರಲ್ಲಿ ಬಿಸಿಯೂಟ ಸಹಾಯಕಿಯರ ನೇಮಕದ ವಿಚಾರದಲ್ಲಿ ಗಲಾಟೆ ನಡೆದಿತ್ತು. ಮೀಸಲಾತಿ ಪ್ರಕಾರ ಓರ್ವ ದಲಿತ ಮಹಿಳೆಗೆ ಅಡುಗೆ ಸಹಾಯಕಿ ಹುದ್ದೆಗೆ ತೆಗೆದುಕೊಳ್ಳಬೇಕಾಗಿತ್ತು. ಆದರೆ ದಲಿತರು ಮಾಡಿದ ಅಡುಗೆ ನಾವು ತಿನ್ನಬಾರದು ಎಂದು  ತಗಾದೆ ತೆಗೆದಿದ್ದರು. ಇದೇ ಕಾರಣಕ್ಕೆ ಅಂದಿನಿಂದ ಶಾಲೆಯಲ್ಲಿ ಬಿಸಿಯೂಟ ಮಾಡಿರಲಿಲ್ಲ!

ಆದರೆ ನಿನ್ನೆ ಜಿಲ್ಲಾ ಅಕ್ಷರದಾಸೋಹದ ಅಧಿಕಾರಿಗಳು ಗ್ರಾಮಕ್ಕೆ ಭೇಡಿ ಎರಡೂ ಕಡೆಯವರಿಗೆ ಮನವೊಲಿಸಿದ್ದಾರೆ. ಬಳಿಕ ನಿನ್ನೆ ಸದ್ಯಕ್ಕೆ ವಿಶ್ವಗಂಗ ಸಂಸ್ಥೆಯ ಮೂಲಕ ಬಿಸಿಯೂಟ ವಿತರಣೆ ಮಾಡಲಾಗಿದೆ. ಮಕ್ಕಳು ಹಾಗೂ ಪೋಷಕರು 21 ವರ್ಷದ ಬಳಿಕ ಶಾಲೆಗೆ ಬಿಸಿಯೂಟ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. 1 ರಿಂದ 5 ನೇ ತರಗತಿ ವರೆಗೆ ಇರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇದಾಗಿದೆ. SDMC ರಚನೆ ಬಳಿಕ SDMC ತೀರ್ಮಾನದಂತೆ ಬಿಸಿಯೂಟ ಸಹಾಯಕಿಯರ ನೇಮಕ‌ ಮಾಡಲಾಗುತ್ತೆ ಎಂದು ತಿಳಿದುಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

18 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

18 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

22 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

22 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

23 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 days ago