Advertisement
MIRROR FOCUS

ಜಾತಿ ವಿಷಯದಲ್ಲಿ ಬಡವಾದ ಶಾಲಾ ಮಕ್ಕಳು | 21 ವರ್ಷದ ಬಳಿಕ ಗ್ರಾಮೀಣ ಶಾಲೆಗೆ ದಕ್ಕಿದ ಬಿಸಿಯೂಟದ ಭಾಗ್ಯ…!

Share

ಅದೆಷ್ಟೋ ಮಕ್ಕಳು ಕೇವಲ ಬಿಸಿಯೂಟದ ಕಾರಣದಿಂದ ಶಾಲೆಗೆ ಬರುವುದು ಇದೆ. ಒಳ್ಳೆ ಊಟ ಸಿಗುತ್ತೆ, ಮೊಟ್ಟೆ ಸಿಗುತ್ತೆ, ಹಾಲು ಸಿಗುತ್ತೆ. ಕೆಲ ಮಕ್ಕಳಿಗೆ ಅದೇನೋ ಸಂಭ್ರಮ. ಆದರೆ ಇಲ್ಲೊಂದು ಶಾಲೆಯಲ್ಲಿ ಕಳೆದ 21 ವರ್ಷಗಳಿಂದ ಮಕ್ಕಳಿಗೆ ಬಿಸಿಯೂಟ ವೇ ಇರಲಿಲ್ಲ. ಸರ್ಕಾರದ ನಿರ್ಲಕ್ಷ್ಯವೂ, ಊರಿನ ಜನರ ಉದ್ದಟತನವೂ ತಿಳಿಯದು. ಆದರೆ ವಂಚಿತರಾಗಿದ್ದು ಶಾಲೆ ಮಕ್ಕಳು. ಇದೀಗ ಮತ್ತೆ ಆ ಶಾಲೆಯ ಮಕ್ಕಳಿಗೆ ಬಿಸಿಯೂಟ ಉಣ್ಣುವ ಭಾಗ್ಯ ಒದಗಿ ಬಂದಿದೆ.

ಯಾದಗಿರಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಬರೋಬ್ಬರಿ 21 ವರ್ಷಗಳ ಬಳಿಕ ಮಕ್ಕಳಿಗೆ ಬಿಸಿಯೂಟದ ಭಾಗ್ಯ ಒದಗಿಸಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಚೆನ್ನೂರ್ ಗ್ರಾಮ ದ ಶಾಲೆಯಲ್ಲಿ ಜಾತಿ ಸಂಘರ್ಷದಿಂದ ಬಿಸಿಯೂಟ ಬಂದ್ ಆಗಿತ್ತು. ಅಧಿಕಾರಿಗಳ ಸಂಧಾನದ ಬಳಿಕ ಬಿಸಿಯೂಟ ಕೊನೆಗೂ ಆರಂಭಗೊಂಡಿದೆ.

2002 ರಲ್ಲಿ ಬಿಸಿಯೂಟ ಸಹಾಯಕಿಯರ ನೇಮಕದ ವಿಚಾರದಲ್ಲಿ ಗಲಾಟೆ ನಡೆದಿತ್ತು. ಮೀಸಲಾತಿ ಪ್ರಕಾರ ಓರ್ವ ದಲಿತ ಮಹಿಳೆಗೆ ಅಡುಗೆ ಸಹಾಯಕಿ ಹುದ್ದೆಗೆ ತೆಗೆದುಕೊಳ್ಳಬೇಕಾಗಿತ್ತು. ಆದರೆ ದಲಿತರು ಮಾಡಿದ ಅಡುಗೆ ನಾವು ತಿನ್ನಬಾರದು ಎಂದು  ತಗಾದೆ ತೆಗೆದಿದ್ದರು. ಇದೇ ಕಾರಣಕ್ಕೆ ಅಂದಿನಿಂದ ಶಾಲೆಯಲ್ಲಿ ಬಿಸಿಯೂಟ ಮಾಡಿರಲಿಲ್ಲ!

ಆದರೆ ನಿನ್ನೆ ಜಿಲ್ಲಾ ಅಕ್ಷರದಾಸೋಹದ ಅಧಿಕಾರಿಗಳು ಗ್ರಾಮಕ್ಕೆ ಭೇಡಿ ಎರಡೂ ಕಡೆಯವರಿಗೆ ಮನವೊಲಿಸಿದ್ದಾರೆ. ಬಳಿಕ ನಿನ್ನೆ ಸದ್ಯಕ್ಕೆ ವಿಶ್ವಗಂಗ ಸಂಸ್ಥೆಯ ಮೂಲಕ ಬಿಸಿಯೂಟ ವಿತರಣೆ ಮಾಡಲಾಗಿದೆ. ಮಕ್ಕಳು ಹಾಗೂ ಪೋಷಕರು 21 ವರ್ಷದ ಬಳಿಕ ಶಾಲೆಗೆ ಬಿಸಿಯೂಟ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. 1 ರಿಂದ 5 ನೇ ತರಗತಿ ವರೆಗೆ ಇರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇದಾಗಿದೆ. SDMC ರಚನೆ ಬಳಿಕ SDMC ತೀರ್ಮಾನದಂತೆ ಬಿಸಿಯೂಟ ಸಹಾಯಕಿಯರ ನೇಮಕ‌ ಮಾಡಲಾಗುತ್ತೆ ಎಂದು ತಿಳಿದುಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

11 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

13 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

14 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

16 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago