ಅದೆಷ್ಟೋ ಮಕ್ಕಳು ಕೇವಲ ಬಿಸಿಯೂಟದ ಕಾರಣದಿಂದ ಶಾಲೆಗೆ ಬರುವುದು ಇದೆ. ಒಳ್ಳೆ ಊಟ ಸಿಗುತ್ತೆ, ಮೊಟ್ಟೆ ಸಿಗುತ್ತೆ, ಹಾಲು ಸಿಗುತ್ತೆ. ಕೆಲ ಮಕ್ಕಳಿಗೆ ಅದೇನೋ ಸಂಭ್ರಮ. ಆದರೆ ಇಲ್ಲೊಂದು ಶಾಲೆಯಲ್ಲಿ ಕಳೆದ 21 ವರ್ಷಗಳಿಂದ ಮಕ್ಕಳಿಗೆ ಬಿಸಿಯೂಟ ವೇ ಇರಲಿಲ್ಲ. ಸರ್ಕಾರದ ನಿರ್ಲಕ್ಷ್ಯವೂ, ಊರಿನ ಜನರ ಉದ್ದಟತನವೂ ತಿಳಿಯದು. ಆದರೆ ವಂಚಿತರಾಗಿದ್ದು ಶಾಲೆ ಮಕ್ಕಳು. ಇದೀಗ ಮತ್ತೆ ಆ ಶಾಲೆಯ ಮಕ್ಕಳಿಗೆ ಬಿಸಿಯೂಟ ಉಣ್ಣುವ ಭಾಗ್ಯ ಒದಗಿ ಬಂದಿದೆ.
ಯಾದಗಿರಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಬರೋಬ್ಬರಿ 21 ವರ್ಷಗಳ ಬಳಿಕ ಮಕ್ಕಳಿಗೆ ಬಿಸಿಯೂಟದ ಭಾಗ್ಯ ಒದಗಿಸಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಚೆನ್ನೂರ್ ಗ್ರಾಮ ದ ಶಾಲೆಯಲ್ಲಿ ಜಾತಿ ಸಂಘರ್ಷದಿಂದ ಬಿಸಿಯೂಟ ಬಂದ್ ಆಗಿತ್ತು. ಅಧಿಕಾರಿಗಳ ಸಂಧಾನದ ಬಳಿಕ ಬಿಸಿಯೂಟ ಕೊನೆಗೂ ಆರಂಭಗೊಂಡಿದೆ.
2002 ರಲ್ಲಿ ಬಿಸಿಯೂಟ ಸಹಾಯಕಿಯರ ನೇಮಕದ ವಿಚಾರದಲ್ಲಿ ಗಲಾಟೆ ನಡೆದಿತ್ತು. ಮೀಸಲಾತಿ ಪ್ರಕಾರ ಓರ್ವ ದಲಿತ ಮಹಿಳೆಗೆ ಅಡುಗೆ ಸಹಾಯಕಿ ಹುದ್ದೆಗೆ ತೆಗೆದುಕೊಳ್ಳಬೇಕಾಗಿತ್ತು. ಆದರೆ ದಲಿತರು ಮಾಡಿದ ಅಡುಗೆ ನಾವು ತಿನ್ನಬಾರದು ಎಂದು ತಗಾದೆ ತೆಗೆದಿದ್ದರು. ಇದೇ ಕಾರಣಕ್ಕೆ ಅಂದಿನಿಂದ ಶಾಲೆಯಲ್ಲಿ ಬಿಸಿಯೂಟ ಮಾಡಿರಲಿಲ್ಲ!
ಆದರೆ ನಿನ್ನೆ ಜಿಲ್ಲಾ ಅಕ್ಷರದಾಸೋಹದ ಅಧಿಕಾರಿಗಳು ಗ್ರಾಮಕ್ಕೆ ಭೇಡಿ ಎರಡೂ ಕಡೆಯವರಿಗೆ ಮನವೊಲಿಸಿದ್ದಾರೆ. ಬಳಿಕ ನಿನ್ನೆ ಸದ್ಯಕ್ಕೆ ವಿಶ್ವಗಂಗ ಸಂಸ್ಥೆಯ ಮೂಲಕ ಬಿಸಿಯೂಟ ವಿತರಣೆ ಮಾಡಲಾಗಿದೆ. ಮಕ್ಕಳು ಹಾಗೂ ಪೋಷಕರು 21 ವರ್ಷದ ಬಳಿಕ ಶಾಲೆಗೆ ಬಿಸಿಯೂಟ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. 1 ರಿಂದ 5 ನೇ ತರಗತಿ ವರೆಗೆ ಇರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇದಾಗಿದೆ. SDMC ರಚನೆ ಬಳಿಕ SDMC ತೀರ್ಮಾನದಂತೆ ಬಿಸಿಯೂಟ ಸಹಾಯಕಿಯರ ನೇಮಕ ಮಾಡಲಾಗುತ್ತೆ ಎಂದು ತಿಳಿದುಬಂದಿದೆ.
ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್ ಉಚಿತ(Free Current). ಇಂಥ…
ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…
ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…
ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…