ಅದೆಷ್ಟೋ ಮಕ್ಕಳು ಕೇವಲ ಬಿಸಿಯೂಟದ ಕಾರಣದಿಂದ ಶಾಲೆಗೆ ಬರುವುದು ಇದೆ. ಒಳ್ಳೆ ಊಟ ಸಿಗುತ್ತೆ, ಮೊಟ್ಟೆ ಸಿಗುತ್ತೆ, ಹಾಲು ಸಿಗುತ್ತೆ. ಕೆಲ ಮಕ್ಕಳಿಗೆ ಅದೇನೋ ಸಂಭ್ರಮ. ಆದರೆ ಇಲ್ಲೊಂದು ಶಾಲೆಯಲ್ಲಿ ಕಳೆದ 21 ವರ್ಷಗಳಿಂದ ಮಕ್ಕಳಿಗೆ ಬಿಸಿಯೂಟ ವೇ ಇರಲಿಲ್ಲ. ಸರ್ಕಾರದ ನಿರ್ಲಕ್ಷ್ಯವೂ, ಊರಿನ ಜನರ ಉದ್ದಟತನವೂ ತಿಳಿಯದು. ಆದರೆ ವಂಚಿತರಾಗಿದ್ದು ಶಾಲೆ ಮಕ್ಕಳು. ಇದೀಗ ಮತ್ತೆ ಆ ಶಾಲೆಯ ಮಕ್ಕಳಿಗೆ ಬಿಸಿಯೂಟ ಉಣ್ಣುವ ಭಾಗ್ಯ ಒದಗಿ ಬಂದಿದೆ.
ಯಾದಗಿರಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಬರೋಬ್ಬರಿ 21 ವರ್ಷಗಳ ಬಳಿಕ ಮಕ್ಕಳಿಗೆ ಬಿಸಿಯೂಟದ ಭಾಗ್ಯ ಒದಗಿಸಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಚೆನ್ನೂರ್ ಗ್ರಾಮ ದ ಶಾಲೆಯಲ್ಲಿ ಜಾತಿ ಸಂಘರ್ಷದಿಂದ ಬಿಸಿಯೂಟ ಬಂದ್ ಆಗಿತ್ತು. ಅಧಿಕಾರಿಗಳ ಸಂಧಾನದ ಬಳಿಕ ಬಿಸಿಯೂಟ ಕೊನೆಗೂ ಆರಂಭಗೊಂಡಿದೆ.
2002 ರಲ್ಲಿ ಬಿಸಿಯೂಟ ಸಹಾಯಕಿಯರ ನೇಮಕದ ವಿಚಾರದಲ್ಲಿ ಗಲಾಟೆ ನಡೆದಿತ್ತು. ಮೀಸಲಾತಿ ಪ್ರಕಾರ ಓರ್ವ ದಲಿತ ಮಹಿಳೆಗೆ ಅಡುಗೆ ಸಹಾಯಕಿ ಹುದ್ದೆಗೆ ತೆಗೆದುಕೊಳ್ಳಬೇಕಾಗಿತ್ತು. ಆದರೆ ದಲಿತರು ಮಾಡಿದ ಅಡುಗೆ ನಾವು ತಿನ್ನಬಾರದು ಎಂದು ತಗಾದೆ ತೆಗೆದಿದ್ದರು. ಇದೇ ಕಾರಣಕ್ಕೆ ಅಂದಿನಿಂದ ಶಾಲೆಯಲ್ಲಿ ಬಿಸಿಯೂಟ ಮಾಡಿರಲಿಲ್ಲ!
ಆದರೆ ನಿನ್ನೆ ಜಿಲ್ಲಾ ಅಕ್ಷರದಾಸೋಹದ ಅಧಿಕಾರಿಗಳು ಗ್ರಾಮಕ್ಕೆ ಭೇಡಿ ಎರಡೂ ಕಡೆಯವರಿಗೆ ಮನವೊಲಿಸಿದ್ದಾರೆ. ಬಳಿಕ ನಿನ್ನೆ ಸದ್ಯಕ್ಕೆ ವಿಶ್ವಗಂಗ ಸಂಸ್ಥೆಯ ಮೂಲಕ ಬಿಸಿಯೂಟ ವಿತರಣೆ ಮಾಡಲಾಗಿದೆ. ಮಕ್ಕಳು ಹಾಗೂ ಪೋಷಕರು 21 ವರ್ಷದ ಬಳಿಕ ಶಾಲೆಗೆ ಬಿಸಿಯೂಟ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. 1 ರಿಂದ 5 ನೇ ತರಗತಿ ವರೆಗೆ ಇರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇದಾಗಿದೆ. SDMC ರಚನೆ ಬಳಿಕ SDMC ತೀರ್ಮಾನದಂತೆ ಬಿಸಿಯೂಟ ಸಹಾಯಕಿಯರ ನೇಮಕ ಮಾಡಲಾಗುತ್ತೆ ಎಂದು ತಿಳಿದುಬಂದಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…