ಸುದ್ದಿಗಳು

ಮುಳ್ಳು ಹಂದಿ ಬೇಟೆ – ಗುಹೆಯೊಳಗೆ ಬಾಕಿಯಾದ ಇಬ್ಬರು ಕೂಲಿಕಾರ್ಮಿಕರು ಸಾವು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೇಟೆಯಾಡೋದು ಕಾನೂನಿಗೆ ವಿರುದ್ಧ ಎಂದು ತಿಳಿದಿದ್ದರು ಕಾಡು ಪ್ರಾಣಿಗಳನ್ನು ಮನಸ್ಸೋ ಇಚ್ಚೆ ಬೇಟೆಯಾಡುವ ಮಂದಿ ಅನೇಕರಿದ್ದಾರೆ. ಹೀಗೆ ಚಿಕ್ಕಮಗಳೂರಿನಲ್ಲಿ ಬೇಟೆಗೆಂದು ತೆರಳಿ ಇಬ್ಬರು ಯುವಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮುಳ್ಳು ಹಂದಿ ಬೇಟೆಗೆ ತೆರಳಿದ್ದ ಇಬ್ಬರು ಕೂಲಿಕಾರ್ಮಿಕರು ಸುರಂಗದೊಳಗೆ ನುಗ್ಗಿದ ಪರಿಣಾಮ  ಸಾವನ್ನಪ್ಪಿದ ಘಟನೆ ವರದಿಯಾಗಿದೆ.

Advertisement
Advertisement

ಚಿಕ್ಕಮಗಳೂರಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುಳ್ಳು ಹಂದಿ ಇದ್ದ ಸುರಂಗಕ್ಕೆ ಶಿಕಾರಿ ಮಾಡಲು ನುಗ್ಗಿ ಇಬ್ಬರು ಕೂಲಿಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಾದ ತಮಿಳುನಾಡು ಮೂಲದ ವಿಜಯ್ (28 ವರ್ಷ), ಶರತ್( 26 ವರ್ಷ) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.

ಚಿಕ್ಕಮಗಳೂರಿಗೆ ಕಾಳು ಮೆಣಸು ಕುಯ್ಯಲು ಬಂದಿದ್ದ ತಮಿಳುನಾಡಿನ ಕಾರ್ಮಿಕರು ಮುಳ್ಳು ಹಂದಿ ಶಿಕಾರಿ ಮಾಡಲು ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಕಾಳಿಕಟ್ಟೆ ಗುಡ್ಡದ ಗವಿಯಲ್ಲಿರುವ ಗುಡ್ಡಕ್ಕೆ ತೆರಳಿದ್ದರು. ಸುರಂಗದ ಪ್ರವೇಶ ದ್ವಾರಕ್ಕೆ ಹೊಗೆ ಹಾಕಿ ಇಬ್ಬರು ಒಳಗೆ ಹೋದಾಗ ಹೊಗೆಯಿಂದಾಗಿ ಉಸಿರಾಡಲು ಸಾಧ್ಯವಾಗದೆ ಗುಹೆಯೊಳಗೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಸುದ್ದಿ ತಿಳಿದು ಬಾಳೂರು ಸಬ್ಇನ್ಸ್ ಪೆಕ್ಟರ್ ಪವನ್ ಕುಮಾರ್ ಅವರು ಸ್ಥಳೀಯರ ನೆರವಿನಿಂದ ಗುಹೆಯೊಳಗೆ ಹೋಗಿ ಶವಗಳನ್ನು ಹೊರತೆಗೆದಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಬಾಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು

ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ,…

2 hours ago

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

21 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

22 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

23 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

1 day ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

1 day ago