Advertisement
ಸುದ್ದಿಗಳು

ಮುಳ್ಳು ಹಂದಿ ಬೇಟೆ – ಗುಹೆಯೊಳಗೆ ಬಾಕಿಯಾದ ಇಬ್ಬರು ಕೂಲಿಕಾರ್ಮಿಕರು ಸಾವು

Share

ಬೇಟೆಯಾಡೋದು ಕಾನೂನಿಗೆ ವಿರುದ್ಧ ಎಂದು ತಿಳಿದಿದ್ದರು ಕಾಡು ಪ್ರಾಣಿಗಳನ್ನು ಮನಸ್ಸೋ ಇಚ್ಚೆ ಬೇಟೆಯಾಡುವ ಮಂದಿ ಅನೇಕರಿದ್ದಾರೆ. ಹೀಗೆ ಚಿಕ್ಕಮಗಳೂರಿನಲ್ಲಿ ಬೇಟೆಗೆಂದು ತೆರಳಿ ಇಬ್ಬರು ಯುವಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮುಳ್ಳು ಹಂದಿ ಬೇಟೆಗೆ ತೆರಳಿದ್ದ ಇಬ್ಬರು ಕೂಲಿಕಾರ್ಮಿಕರು ಸುರಂಗದೊಳಗೆ ನುಗ್ಗಿದ ಪರಿಣಾಮ  ಸಾವನ್ನಪ್ಪಿದ ಘಟನೆ ವರದಿಯಾಗಿದೆ.

ಚಿಕ್ಕಮಗಳೂರಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುಳ್ಳು ಹಂದಿ ಇದ್ದ ಸುರಂಗಕ್ಕೆ ಶಿಕಾರಿ ಮಾಡಲು ನುಗ್ಗಿ ಇಬ್ಬರು ಕೂಲಿಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಾದ ತಮಿಳುನಾಡು ಮೂಲದ ವಿಜಯ್ (28 ವರ್ಷ), ಶರತ್( 26 ವರ್ಷ) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.

ಚಿಕ್ಕಮಗಳೂರಿಗೆ ಕಾಳು ಮೆಣಸು ಕುಯ್ಯಲು ಬಂದಿದ್ದ ತಮಿಳುನಾಡಿನ ಕಾರ್ಮಿಕರು ಮುಳ್ಳು ಹಂದಿ ಶಿಕಾರಿ ಮಾಡಲು ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಕಾಳಿಕಟ್ಟೆ ಗುಡ್ಡದ ಗವಿಯಲ್ಲಿರುವ ಗುಡ್ಡಕ್ಕೆ ತೆರಳಿದ್ದರು. ಸುರಂಗದ ಪ್ರವೇಶ ದ್ವಾರಕ್ಕೆ ಹೊಗೆ ಹಾಕಿ ಇಬ್ಬರು ಒಳಗೆ ಹೋದಾಗ ಹೊಗೆಯಿಂದಾಗಿ ಉಸಿರಾಡಲು ಸಾಧ್ಯವಾಗದೆ ಗುಹೆಯೊಳಗೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಸುದ್ದಿ ತಿಳಿದು ಬಾಳೂರು ಸಬ್ಇನ್ಸ್ ಪೆಕ್ಟರ್ ಪವನ್ ಕುಮಾರ್ ಅವರು ಸ್ಥಳೀಯರ ನೆರವಿನಿಂದ ಗುಹೆಯೊಳಗೆ ಹೋಗಿ ಶವಗಳನ್ನು ಹೊರತೆಗೆದಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಬಾಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

5 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

13 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

13 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

13 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

23 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

23 hours ago