Advertisement
ಸುದ್ದಿಗಳು

ಬ್ರೇಕಿಂಗ್‌ ನ್ಯೂಸ್‌ ಸಕಾರಾತ್ಮಕವಾಗಿಸುವುದು ಹೇಗೆ…? | ಅಂಬಿಕಾ ಮಹಾವಿದ್ಯಾಲಯದಲ್ಲಿ ಸಕಾರಾತ್ಮಕ ಪತ್ರಿಕೋದ್ಯಮ ಉಪನ್ಯಾಸ ಸರಣಿ |

Share

ಬ್ರೇಕಿಂಗ್‌ ನ್ಯೂಸ್‌ಗಳು ಅರ್ಥ ಕಳೆದುಕೊಳ್ಳುತ್ತಿದೆ. ಆದರೆ ಈಗಿನ ವಿದ್ಯಾರ್ಥಿಗಳು ಮುಂದಿನ ಪತ್ರಿಕಾರಂಗದಲ್ಲಿ ಬ್ರೇಕಿಂಗ್‌ ನ್ಯೂಸ್‌ ಗಳಿಗೂ ಅರ್ಥ ಬರುವ ಹಾಗೆ ಮಾಡಲು ಸಾಧ್ಯವಿದೆ. ಇದಕ್ಕಾಗಿಯೇ ಸುದ್ದಿ ಸಂಗ್ರಹದೊಂದಿಗೆ ಕಲೆಹಾಕಿದ ಮಾಹಿತಿಗಳ ಸತ್ಯಾಸತ್ಯತೆಗಳನ್ನು ಅರಿತುಕೊಳ್ಳಬೇಕಾದ ಅಗತ್ಯತೆ ಇರುತ್ತದೆ ಎಂದು ಪತ್ರಕರ್ತೆ ಸ್ವಪ್ನ ಮಡಪ್ಪಾಡಿ ಹೇಳಿದರು.

ಅವರು ಪುತ್ತೂರಿನ  ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ರೂರಲ್ ಮಿರರ್ ಡಿಜಿಟಲ್ ಮೀಡಿಯಾ ಜಂಟಿ ಆಶ್ರಯದಲ್ಲಿ ಹಮ್ಮಿಳ್ಳಲಾಗಿರುವ ಸಕಾರಾತ್ಮಕ ಪತ್ರಿಕೋದ್ಯಮ ಉಪನ್ಯಾಸ ಸರಣಿಯಲ್ಲಿ ಭಾಗವಹಿಸಿ ಬ್ರೇಕಿಂಗ್ ನ್ಯೂಸ್ ಅವಾಂತರಗಳು ಹಾಗೂ ಮಾಧ್ಯಮಗಳಲ್ಲಿನ ಅವಕಾಶಗಳ ಕುರಿತು ಶನಿವಾರ ಉಪನ್ಯಾಸ ನೀಡಿದರು.

ದೃಶ್ಯ ಮಾಧ್ಯಮಗಳಲ್ಲಿ ಅತೀ ಕಡಿಮೆ ಸಮಯದಲ್ಲಿ ನಿಖರ ಮಾಹಿತಿ ನೀಡಬೇಕಾದ ಸವಾಲು ಇರುತ್ತದೆ. ಪ್ರತಿಯೊಂದು ಕ್ಷಣವೂ ಅಮೂಲ್ಯವಾಗಿದೆ. ಬ್ರೇಕಿಂಗ್ ನೀಡುವ ಸಂದರ್ಭದಲ್ಲಿ ಆ ಸುದ್ದಿಯ ಗಂಭೀರತೆಯನ್ನು ತಿಳಿದುಕೊಂಡು ನೀಡಬೇಕಿದೆ, ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಸುದ್ದಿಗಳನ್ನೂ ಕೆಲವು ಮಾಧ್ಯಮಗಳಲ್ಲಿ ಬ್ರೇಕಿಂಗ್ ನ್ಯೂಸ್ ಎಂದು ಪ್ರಕಟಿಸಲಾಗುತ್ತಿದೆ ಎಂದರು.

ಪತ್ರಿಕಾರಂಗದಲ್ಲಿ ಅವಕಾಶಗಳಿಂತಲೂ ಸಾಧ್ಯತೆಗಳು ಹೆಚ್ಚಿದೆ. ಎಲ್ಲಾ ಕ್ಷೇತ್ರದಲ್ಲೂ ಬೆಳೆಯಲು ಅವಕಾಶ ಇದೆ. ಎಲ್ಲಾ ಸಮಯದಲ್ಲೂ ಪತ್ರಕರ್ತ ಎನ್ನುವುದು ಕೆಲಸ ಮಾಡದು, ಮಾನವೀಯತೆ ಎನ್ನುವುದು ಎಲ್ಲಾ ಕಡೆ ಕೆಲಸ ಮಾಡುತ್ತಿದೆ. ಇದಕ್ಕಾಗಿಯೇ ಮಾನವೀಯತೆಯೂ ಪತ್ರಕರ್ತನಲ್ಲಿ ಅಗತ್ಯ ಇದೆ. ಯಾವತ್ತೂ ಪಾಸಿಟಿವ್‌ ಸುದ್ದಿಗಳಿಂದ ಬೆಳೆಯಲು ಸಾಧ್ಯವಿದೆ. ಋಣಾತ್ಮಕತೆ ಹೆಚ್ಚು ಹೆಚ್ಚು ಇದ್ದಷ್ಟು ಜೀವನದಲ್ಲಿ , ಕೆಲಸದಲ್ಲೂ ನಿರಾಸಕ್ತಿ ಹೆಚ್ಚಾಗುತ್ತದೆ. ಅದಕ್ಕಾಗಿಯೇ ಸಕಾರಾತ್ಮಕ ಸಂಗತಿಗಳ ಅಗತ್ಯ ಇದೆ ಎಂದು ಸ್ವಪ್ನಾ ಹೇಳಿದರು.

ಕಾಲೇಜು ಹಂತದಲ್ಲಿಯೇ ವರದಿಗಾರಿಕೆಯ ಪಟ್ಟುಗಳನ್ನು ವಿದ್ಯಾರ್ಥಿಗಳು ಅರಿತಾಗ ಮಾಧ್ಯಮ ಜಗತ್ತಿನಲ್ಲಿ ಹೆಚ್ಚು ಗುರುತಿಸಿಕೊಳ್ಳಲು ಸಹಕಾರಿಯಾಗುತ್ತದೆ. ಲೇಖನಗಳನ್ನು ಮಿಂಚಂಚೆ ಮೂಲಕ ಸಮಯ ಸಂದರ್ಭ ಗಮನಿಸಿ ಮಾಧ್ಯಮಗಳಿಗೆ ಕಳುಹಿಸಿದಲ್ಲಿ ಶೀಘ್ರವಾಗಿ ಪ್ರಕಟಗೊಳ್ಳುವ ಸಾಧ್ಯತೆಯಿರುತ್ತದೆ. ಮಾಧ್ಯಮಗಳಲ್ಲಿ ಪ್ರಸ್ತುತ ವಿಫುಲ ಅವಕಾಶಗಳಿದ್ದು ಪತ್ರಿಕೆ, ದೃಶ್ಯ ಮಾಧ್ಯಮ ಹಾಗೂ ವೆಬ್ ಸೈಟ್‍ಗಳಲ್ಲಿ ಉದ್ಯೋಗಗಳಿವೆ. ಆದರೆ ನಾವು ನಮ್ಮನ್ನು ಹೊರಜಗತ್ತಿಗೆ ತೆರೆದುಕೊಂಡು ಸೂಕ್ತ ಪೂರ್ವತಯಾರಿಗಳನ್ನು ನಡೆಸಿಕೊಳ್ಳುವುದು ಅತೀ ಅಗತ್ಯವಾಗಿದೆ ಎಂದರು.

ರೂರಲ್ ಮಿರರ್ ಡಿಜಿಟಲ್ ಮೀಡಿಯಾ ಮುಖ್ಯಸ್ಥ ಮಹೇಶ್ ಪುಚ್ಚಪ್ಪಾಡಿ ಮಾತನಾಡಿ ಸರಣಿ ಕಾರ್ಯಕ್ರಮಗಳಲ್ಲಿ ಈಗಾಗಲೇ ಧನಾತ್ಮಕ ಪತ್ರಿಕೋದ್ಯಮದ ವಿವಿಧ ಮಜಲುಗಳ ಕುರಿತು ಚರ್ಚಿಸಲಾಗಿದೆ. ಮುಂದೆಯೂ ಧನಾತ್ಮಕತೆಯನ್ನು ಬೆಳೆಸುವ ನಿಟ್ಟಿನಲ್ಲಿ ಕೆಲಸ ನಡೆಯಲಿದೆ ಎಂದರು.

ಕಾಲೇಜಿನ ಪ್ರಾಚಾರ್ಯ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ ಕುಮಾರ್ ಕಮ್ಮಜೆ, ಪತ್ರಿಕೋದ್ಯಮ ಉಪನ್ಯಾಸಕ ಹರ್ಷಿತ್ ಪಿಂಡಿವನ, ಅಂಬಿಕಾ ಪದವಿಪೂರ್ವ ವಿದ್ಯಾಲಯದ ಇಂಗ್ಲಿಷ್ ಉಪನ್ಯಾಸಕ ಆಶಿಕ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ನವ್ಯಾ ಸ್ವಾಗತಿಸಿ, ಜಯಶ್ರೀ ವಂದಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

23 minutes ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

4 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

9 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

18 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

18 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

19 hours ago