Advertisement
ಸುದ್ದಿಗಳು

ಬ್ರೇಕಿಂಗ್‌ ನ್ಯೂಸ್‌ ಸಕಾರಾತ್ಮಕವಾಗಿಸುವುದು ಹೇಗೆ…? | ಅಂಬಿಕಾ ಮಹಾವಿದ್ಯಾಲಯದಲ್ಲಿ ಸಕಾರಾತ್ಮಕ ಪತ್ರಿಕೋದ್ಯಮ ಉಪನ್ಯಾಸ ಸರಣಿ |

Share

ಬ್ರೇಕಿಂಗ್‌ ನ್ಯೂಸ್‌ಗಳು ಅರ್ಥ ಕಳೆದುಕೊಳ್ಳುತ್ತಿದೆ. ಆದರೆ ಈಗಿನ ವಿದ್ಯಾರ್ಥಿಗಳು ಮುಂದಿನ ಪತ್ರಿಕಾರಂಗದಲ್ಲಿ ಬ್ರೇಕಿಂಗ್‌ ನ್ಯೂಸ್‌ ಗಳಿಗೂ ಅರ್ಥ ಬರುವ ಹಾಗೆ ಮಾಡಲು ಸಾಧ್ಯವಿದೆ. ಇದಕ್ಕಾಗಿಯೇ ಸುದ್ದಿ ಸಂಗ್ರಹದೊಂದಿಗೆ ಕಲೆಹಾಕಿದ ಮಾಹಿತಿಗಳ ಸತ್ಯಾಸತ್ಯತೆಗಳನ್ನು ಅರಿತುಕೊಳ್ಳಬೇಕಾದ ಅಗತ್ಯತೆ ಇರುತ್ತದೆ ಎಂದು ಪತ್ರಕರ್ತೆ ಸ್ವಪ್ನ ಮಡಪ್ಪಾಡಿ ಹೇಳಿದರು.

ಅವರು ಪುತ್ತೂರಿನ  ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ರೂರಲ್ ಮಿರರ್ ಡಿಜಿಟಲ್ ಮೀಡಿಯಾ ಜಂಟಿ ಆಶ್ರಯದಲ್ಲಿ ಹಮ್ಮಿಳ್ಳಲಾಗಿರುವ ಸಕಾರಾತ್ಮಕ ಪತ್ರಿಕೋದ್ಯಮ ಉಪನ್ಯಾಸ ಸರಣಿಯಲ್ಲಿ ಭಾಗವಹಿಸಿ ಬ್ರೇಕಿಂಗ್ ನ್ಯೂಸ್ ಅವಾಂತರಗಳು ಹಾಗೂ ಮಾಧ್ಯಮಗಳಲ್ಲಿನ ಅವಕಾಶಗಳ ಕುರಿತು ಶನಿವಾರ ಉಪನ್ಯಾಸ ನೀಡಿದರು.

ದೃಶ್ಯ ಮಾಧ್ಯಮಗಳಲ್ಲಿ ಅತೀ ಕಡಿಮೆ ಸಮಯದಲ್ಲಿ ನಿಖರ ಮಾಹಿತಿ ನೀಡಬೇಕಾದ ಸವಾಲು ಇರುತ್ತದೆ. ಪ್ರತಿಯೊಂದು ಕ್ಷಣವೂ ಅಮೂಲ್ಯವಾಗಿದೆ. ಬ್ರೇಕಿಂಗ್ ನೀಡುವ ಸಂದರ್ಭದಲ್ಲಿ ಆ ಸುದ್ದಿಯ ಗಂಭೀರತೆಯನ್ನು ತಿಳಿದುಕೊಂಡು ನೀಡಬೇಕಿದೆ, ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಸುದ್ದಿಗಳನ್ನೂ ಕೆಲವು ಮಾಧ್ಯಮಗಳಲ್ಲಿ ಬ್ರೇಕಿಂಗ್ ನ್ಯೂಸ್ ಎಂದು ಪ್ರಕಟಿಸಲಾಗುತ್ತಿದೆ ಎಂದರು.

ಪತ್ರಿಕಾರಂಗದಲ್ಲಿ ಅವಕಾಶಗಳಿಂತಲೂ ಸಾಧ್ಯತೆಗಳು ಹೆಚ್ಚಿದೆ. ಎಲ್ಲಾ ಕ್ಷೇತ್ರದಲ್ಲೂ ಬೆಳೆಯಲು ಅವಕಾಶ ಇದೆ. ಎಲ್ಲಾ ಸಮಯದಲ್ಲೂ ಪತ್ರಕರ್ತ ಎನ್ನುವುದು ಕೆಲಸ ಮಾಡದು, ಮಾನವೀಯತೆ ಎನ್ನುವುದು ಎಲ್ಲಾ ಕಡೆ ಕೆಲಸ ಮಾಡುತ್ತಿದೆ. ಇದಕ್ಕಾಗಿಯೇ ಮಾನವೀಯತೆಯೂ ಪತ್ರಕರ್ತನಲ್ಲಿ ಅಗತ್ಯ ಇದೆ. ಯಾವತ್ತೂ ಪಾಸಿಟಿವ್‌ ಸುದ್ದಿಗಳಿಂದ ಬೆಳೆಯಲು ಸಾಧ್ಯವಿದೆ. ಋಣಾತ್ಮಕತೆ ಹೆಚ್ಚು ಹೆಚ್ಚು ಇದ್ದಷ್ಟು ಜೀವನದಲ್ಲಿ , ಕೆಲಸದಲ್ಲೂ ನಿರಾಸಕ್ತಿ ಹೆಚ್ಚಾಗುತ್ತದೆ. ಅದಕ್ಕಾಗಿಯೇ ಸಕಾರಾತ್ಮಕ ಸಂಗತಿಗಳ ಅಗತ್ಯ ಇದೆ ಎಂದು ಸ್ವಪ್ನಾ ಹೇಳಿದರು.

ಕಾಲೇಜು ಹಂತದಲ್ಲಿಯೇ ವರದಿಗಾರಿಕೆಯ ಪಟ್ಟುಗಳನ್ನು ವಿದ್ಯಾರ್ಥಿಗಳು ಅರಿತಾಗ ಮಾಧ್ಯಮ ಜಗತ್ತಿನಲ್ಲಿ ಹೆಚ್ಚು ಗುರುತಿಸಿಕೊಳ್ಳಲು ಸಹಕಾರಿಯಾಗುತ್ತದೆ. ಲೇಖನಗಳನ್ನು ಮಿಂಚಂಚೆ ಮೂಲಕ ಸಮಯ ಸಂದರ್ಭ ಗಮನಿಸಿ ಮಾಧ್ಯಮಗಳಿಗೆ ಕಳುಹಿಸಿದಲ್ಲಿ ಶೀಘ್ರವಾಗಿ ಪ್ರಕಟಗೊಳ್ಳುವ ಸಾಧ್ಯತೆಯಿರುತ್ತದೆ. ಮಾಧ್ಯಮಗಳಲ್ಲಿ ಪ್ರಸ್ತುತ ವಿಫುಲ ಅವಕಾಶಗಳಿದ್ದು ಪತ್ರಿಕೆ, ದೃಶ್ಯ ಮಾಧ್ಯಮ ಹಾಗೂ ವೆಬ್ ಸೈಟ್‍ಗಳಲ್ಲಿ ಉದ್ಯೋಗಗಳಿವೆ. ಆದರೆ ನಾವು ನಮ್ಮನ್ನು ಹೊರಜಗತ್ತಿಗೆ ತೆರೆದುಕೊಂಡು ಸೂಕ್ತ ಪೂರ್ವತಯಾರಿಗಳನ್ನು ನಡೆಸಿಕೊಳ್ಳುವುದು ಅತೀ ಅಗತ್ಯವಾಗಿದೆ ಎಂದರು.

ರೂರಲ್ ಮಿರರ್ ಡಿಜಿಟಲ್ ಮೀಡಿಯಾ ಮುಖ್ಯಸ್ಥ ಮಹೇಶ್ ಪುಚ್ಚಪ್ಪಾಡಿ ಮಾತನಾಡಿ ಸರಣಿ ಕಾರ್ಯಕ್ರಮಗಳಲ್ಲಿ ಈಗಾಗಲೇ ಧನಾತ್ಮಕ ಪತ್ರಿಕೋದ್ಯಮದ ವಿವಿಧ ಮಜಲುಗಳ ಕುರಿತು ಚರ್ಚಿಸಲಾಗಿದೆ. ಮುಂದೆಯೂ ಧನಾತ್ಮಕತೆಯನ್ನು ಬೆಳೆಸುವ ನಿಟ್ಟಿನಲ್ಲಿ ಕೆಲಸ ನಡೆಯಲಿದೆ ಎಂದರು.

ಕಾಲೇಜಿನ ಪ್ರಾಚಾರ್ಯ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ ಕುಮಾರ್ ಕಮ್ಮಜೆ, ಪತ್ರಿಕೋದ್ಯಮ ಉಪನ್ಯಾಸಕ ಹರ್ಷಿತ್ ಪಿಂಡಿವನ, ಅಂಬಿಕಾ ಪದವಿಪೂರ್ವ ವಿದ್ಯಾಲಯದ ಇಂಗ್ಲಿಷ್ ಉಪನ್ಯಾಸಕ ಆಶಿಕ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ನವ್ಯಾ ಸ್ವಾಗತಿಸಿ, ಜಯಶ್ರೀ ವಂದಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

3 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

12 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

18 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

18 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago