ಸಮಾಜದಲ್ಲಿ ಜನಸಾಮಾನ್ಯ ಜನರು ಯೋಚಿಸುವ ರೀತಿಗೂ, ಪತ್ರಕರ್ತ ಯೋಚಿಸುವ ರೀತಿಗೂ ವ್ಯತ್ಯಾಸ ಇರುತ್ತದೆ. ಪತ್ರಕರ್ತ ಸಮಾಜದಲ್ಲಿನ ಒಳ್ಳೆಯ ಅಂಶಗಳ ಕಡೆಗೆ ಗಮನಹರಿಸಬೇಕಾಗಿದೆ, ಸಮಾಜಮುಖಿ ಸ್ಪಂದನೆಯ ಕಡೆಗೆ ಯೋಚಿಸಬೇಕು ಎಂದು ಹಿಂದುಸ್ತಾನ್ ಟೈಮ್ಸ್ನ ಸುದ್ದಿ ಸಂಪಾದಕ ಉಮೇಶ್ ಕುಮಾರ್ ಶಿಮ್ಲಡ್ಕ ಹೇಳಿದರು.
ರೂರಲ್ ಮಿರರ್ ಡಿಜಿಟಲ್ ಮೀಡಿಯಾ ಹಾಗೂ ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಸಹಯೋಗದೊಂದಿಗೆ ನಡೆಯುವ ಸಕಾರಾತ್ಮಕ ಪತ್ರಿಕೋದ್ಯಮದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗ ಪತ್ರಿಕಾ ಕಚೇರಿಗಳಲ್ಲಿಯೂ ಪತ್ರಕರ್ತನ ಯೋಚನೆಗಳಿಗೆ , ಸ್ಕಿಲ್ ಗಳಿಗೇ ಮಾನ್ಯತೆ ಇದೆ. ಮಾಧ್ಯಮ ಕ್ಷೇತ್ರ ಹತ್ತಾರು ವಿಭಾಗಗಳಲ್ಲಿ ಬೆಳೆದಿದೆ.ಪತ್ರಿಕಾ ಕಚೇರಿಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಮಾತ್ರವೇ ಇಂದು ಉದ್ಯೋಗ ಎಂಬ ಭಾವನೆ ಬೇಕಾಗಿಲ್ಲ. ಡಿಜಿಟಲ್ ಮಾಧ್ಯಮ, ಪೊಡಾಕಾಸ್ಟ್ , ರೀಸರ್ಚ್ ಜರ್ನಲಿಸಂ, ಡಾಟಾ ಜರ್ನಲಿಸ್ಟ ಹೀಗೇ ಹತ್ತಾರು ವಿಭಾಗದಲ್ಲಿ ಬೆಳೆದಿದೆ. ವಿದ್ಯಾರ್ಥಿಗಳು ತನ್ನ ಸ್ಕಿಲ್ ಬೆಳೆಸಿಕೊಂಡು ತಾನೇ ಒಂದು ಬ್ರಾಂಡ್ ಆಗಿದ್ದಾಗ ಅವಕಾಶಗಳು ಲಭಿಸುತ್ತದೆ ಎಂದರು. ಸಕಾರಾತ್ಮಕವಾದ ಭಾವನೆ ಇದ್ದರೆ ಮಾತ್ರವೇ ವಿದ್ಯಾರ್ಥಿಗಳು ತನ್ನನ್ನು ಬ್ರಾಂಡ್ ಮಾಡಿಕೊಳ್ಳಲು, ಕೇಳಿಸಿಕೊಳ್ಳುವ ಪ್ರವೃತ್ತಿ ಬೆಳೆಯುತ್ತದೆ ಎಂದು ಉಮೇಶ್ ಹೇಳಿದರು.
ರೂರಲ್ ಮಿರರ್ ಡಿಜಿಟಲ್ ಮೀಡಿಯಾ ಸ್ಥಾಪಕ ಮಹೇಶ್ ಪುಚ್ಚಪ್ಪಾಡಿ, ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪ್ರಾಂಶುಪಾಲ ರಾಕೇಶ್ ಕುಮಾರ್ ಕಮ್ಮಜೆ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…