Advertisement
ಸುದ್ದಿಗಳು

#PositiveJournalism | ಪತ್ರಕರ್ತ ಯೋಚಿಸುವ ರೀತಿ ಸಮಾಜಮುಖಿಯಾಗಿರಬೇಕು | ಉಮೇಶ್‌ ಕುಮಾರ್‌ ಶಿಮ್ಲಡ್ಕ

Share

ಸಮಾಜದಲ್ಲಿ ಜನಸಾಮಾನ್ಯ ಜನರು ಯೋಚಿಸುವ ರೀತಿಗೂ, ಪತ್ರಕರ್ತ ಯೋಚಿಸುವ ರೀತಿಗೂ ವ್ಯತ್ಯಾಸ ಇರುತ್ತದೆ. ಪತ್ರಕರ್ತ ಸಮಾಜದಲ್ಲಿನ ಒಳ್ಳೆಯ ಅಂಶಗಳ ಕಡೆಗೆ ಗಮನಹರಿಸಬೇಕಾಗಿದೆ, ಸಮಾಜಮುಖಿ ಸ್ಪಂದನೆಯ ಕಡೆಗೆ ಯೋಚಿಸಬೇಕು ಎಂದು ಹಿಂದುಸ್ತಾನ್‌ ಟೈಮ್ಸ್‌ನ ಸುದ್ದಿ ಸಂಪಾದಕ ಉಮೇಶ್‌ ಕುಮಾರ್‌ ಶಿಮ್ಲಡ್ಕ ಹೇಳಿದರು.

ರೂರಲ್‌ ಮಿರರ್‌ ಡಿಜಿಟಲ್‌ ಮೀಡಿಯಾ ಹಾಗೂ ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಸಹಯೋಗದೊಂದಿಗೆ ನಡೆಯುವ ಸಕಾರಾತ್ಮಕ ಪತ್ರಿಕೋದ್ಯಮದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗ ಪತ್ರಿಕಾ ಕಚೇರಿಗಳಲ್ಲಿಯೂ ಪತ್ರಕರ್ತನ ಯೋಚನೆಗಳಿಗೆ , ಸ್ಕಿಲ್‌ ಗಳಿಗೇ ಮಾನ್ಯತೆ ಇದೆ. ಮಾಧ್ಯಮ ಕ್ಷೇತ್ರ ಹತ್ತಾರು ವಿಭಾಗಗಳಲ್ಲಿ ಬೆಳೆದಿದೆ.ಪತ್ರಿಕಾ ಕಚೇರಿಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಮಾತ್ರವೇ ಇಂದು ಉದ್ಯೋಗ ಎಂಬ ಭಾವನೆ ಬೇಕಾಗಿಲ್ಲ. ಡಿಜಿಟಲ್ ಮಾಧ್ಯಮ, ಪೊಡಾಕಾಸ್ಟ್ , ರೀಸರ್ಚ್ ಜರ್ನಲಿಸಂ, ಡಾಟಾ ಜರ್ನಲಿಸ್ಟ ಹೀಗೇ ಹತ್ತಾರು ವಿಭಾಗದಲ್ಲಿ ಬೆಳೆದಿದೆ. ವಿದ್ಯಾರ್ಥಿಗಳು ತನ್ನ ಸ್ಕಿಲ್‌ ಬೆಳೆಸಿಕೊಂಡು ತಾನೇ ಒಂದು ಬ್ರಾಂಡ್‌ ಆಗಿದ್ದಾಗ ಅವಕಾಶಗಳು ಲಭಿಸುತ್ತದೆ ಎಂದರು. ಸಕಾರಾತ್ಮಕವಾದ ಭಾವನೆ ಇದ್ದರೆ ಮಾತ್ರವೇ ವಿದ್ಯಾರ್ಥಿಗಳು ತನ್ನನ್ನು ಬ್ರಾಂಡ್‌ ಮಾಡಿಕೊಳ್ಳಲು, ಕೇಳಿಸಿಕೊಳ್ಳುವ ಪ್ರವೃತ್ತಿ ಬೆಳೆಯುತ್ತದೆ ಎಂದು  ಉಮೇಶ್‌ ಹೇಳಿದರು.

ರೂರಲ್‌ ಮಿರರ್‌ ಡಿಜಿಟಲ್‌ ಮೀಡಿಯಾ ಸ್ಥಾಪಕ ಮಹೇಶ್‌ ಪುಚ್ಚಪ್ಪಾಡಿ, ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪ್ರಾಂಶುಪಾಲ ರಾಕೇಶ್‌ ಕುಮಾರ್‌ ಕಮ್ಮಜೆ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

14 hours ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

20 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

20 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

1 day ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

1 day ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

2 days ago