Advertisement
ಸುದ್ದಿಗಳು

#PositiveJournalism | ಪತ್ರಕರ್ತ ಯೋಚಿಸುವ ರೀತಿ ಸಮಾಜಮುಖಿಯಾಗಿರಬೇಕು | ಉಮೇಶ್‌ ಕುಮಾರ್‌ ಶಿಮ್ಲಡ್ಕ

Share

ಸಮಾಜದಲ್ಲಿ ಜನಸಾಮಾನ್ಯ ಜನರು ಯೋಚಿಸುವ ರೀತಿಗೂ, ಪತ್ರಕರ್ತ ಯೋಚಿಸುವ ರೀತಿಗೂ ವ್ಯತ್ಯಾಸ ಇರುತ್ತದೆ. ಪತ್ರಕರ್ತ ಸಮಾಜದಲ್ಲಿನ ಒಳ್ಳೆಯ ಅಂಶಗಳ ಕಡೆಗೆ ಗಮನಹರಿಸಬೇಕಾಗಿದೆ, ಸಮಾಜಮುಖಿ ಸ್ಪಂದನೆಯ ಕಡೆಗೆ ಯೋಚಿಸಬೇಕು ಎಂದು ಹಿಂದುಸ್ತಾನ್‌ ಟೈಮ್ಸ್‌ನ ಸುದ್ದಿ ಸಂಪಾದಕ ಉಮೇಶ್‌ ಕುಮಾರ್‌ ಶಿಮ್ಲಡ್ಕ ಹೇಳಿದರು.

ರೂರಲ್‌ ಮಿರರ್‌ ಡಿಜಿಟಲ್‌ ಮೀಡಿಯಾ ಹಾಗೂ ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಸಹಯೋಗದೊಂದಿಗೆ ನಡೆಯುವ ಸಕಾರಾತ್ಮಕ ಪತ್ರಿಕೋದ್ಯಮದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗ ಪತ್ರಿಕಾ ಕಚೇರಿಗಳಲ್ಲಿಯೂ ಪತ್ರಕರ್ತನ ಯೋಚನೆಗಳಿಗೆ , ಸ್ಕಿಲ್‌ ಗಳಿಗೇ ಮಾನ್ಯತೆ ಇದೆ. ಮಾಧ್ಯಮ ಕ್ಷೇತ್ರ ಹತ್ತಾರು ವಿಭಾಗಗಳಲ್ಲಿ ಬೆಳೆದಿದೆ.ಪತ್ರಿಕಾ ಕಚೇರಿಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಮಾತ್ರವೇ ಇಂದು ಉದ್ಯೋಗ ಎಂಬ ಭಾವನೆ ಬೇಕಾಗಿಲ್ಲ. ಡಿಜಿಟಲ್ ಮಾಧ್ಯಮ, ಪೊಡಾಕಾಸ್ಟ್ , ರೀಸರ್ಚ್ ಜರ್ನಲಿಸಂ, ಡಾಟಾ ಜರ್ನಲಿಸ್ಟ ಹೀಗೇ ಹತ್ತಾರು ವಿಭಾಗದಲ್ಲಿ ಬೆಳೆದಿದೆ. ವಿದ್ಯಾರ್ಥಿಗಳು ತನ್ನ ಸ್ಕಿಲ್‌ ಬೆಳೆಸಿಕೊಂಡು ತಾನೇ ಒಂದು ಬ್ರಾಂಡ್‌ ಆಗಿದ್ದಾಗ ಅವಕಾಶಗಳು ಲಭಿಸುತ್ತದೆ ಎಂದರು. ಸಕಾರಾತ್ಮಕವಾದ ಭಾವನೆ ಇದ್ದರೆ ಮಾತ್ರವೇ ವಿದ್ಯಾರ್ಥಿಗಳು ತನ್ನನ್ನು ಬ್ರಾಂಡ್‌ ಮಾಡಿಕೊಳ್ಳಲು, ಕೇಳಿಸಿಕೊಳ್ಳುವ ಪ್ರವೃತ್ತಿ ಬೆಳೆಯುತ್ತದೆ ಎಂದು  ಉಮೇಶ್‌ ಹೇಳಿದರು.

ರೂರಲ್‌ ಮಿರರ್‌ ಡಿಜಿಟಲ್‌ ಮೀಡಿಯಾ ಸ್ಥಾಪಕ ಮಹೇಶ್‌ ಪುಚ್ಚಪ್ಪಾಡಿ, ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪ್ರಾಂಶುಪಾಲ ರಾಕೇಶ್‌ ಕುಮಾರ್‌ ಕಮ್ಮಜೆ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago