ಸಕಾರಾತ್ಮಕ ಪತ್ರಿಕೋದ್ಯಮ ಸರಣಿ ಉಪನ್ಯಾಸ | ಕಲಿಕೆಯ ಅವಧಿಯಲ್ಲಿಯೇ ಬ್ರಾಂಡ್ ಆಗಿ ರೂಪುಗೊಳ್ಳಬೇಕು : ಉಮೇಶ್ ಶಿಮ್ಲಡ್ಕ

October 9, 2023
1:56 PM

ಪತ್ರಿಕೋದ್ಯಮ ವಿದ್ಯಾರ್ಥಿಗಳು ಕ್ಷೇತ್ರಕ್ಕೆ ಅಡಿಯಿಡುವ ಪೂರ್ವದಲ್ಲಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿರಬೇಕು. ಕಲಿಕೆಯ ಅವಧಿಯಲ್ಲಿಯೇ ತಮ್ಮನ್ನು ತಾವು ಒಂದು ಬ್ರಾಂಡ್ ಆಗಿ ರೂಪಿಸಿಕೊಳ್ಳುತ್ತಾ ಬೆಳೆಯಬೇಕು. ಉದ್ಯೋಗದಾತರು ಮೊದಲನೋಟದಲ್ಲೇ ಒಪ್ಪಿಕೊಳ್ಳುವಂತಹ ಮುಖಮೌಲ್ಯಗಳನ್ನು ಹೊಂದಿದ್ದಲ್ಲಿ ಉತ್ಕೃಷ್ಟ ಉದ್ಯೋಗಗಳ ಸಾಧ್ಯತೆ ನಮ್ಮದಾಗುತ್ತದೆ ಎಂದು ಹಿರಿಯ ಪತ್ರಕರ್ತ ಉಮೇಶ್ ಶಿಮ್ಲಡ್ಕ ಹೇಳಿದರು.

Advertisement
Advertisement

ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ರೂರಲ್ ಮಿರರ್ ಡಿಜಿಟಲ್ ಮೀಡಿಯಾದ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಸಕಾರಾತ್ಮಕ ಪತ್ರಿಕೋದ್ಯಮ ಸರಣಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

Advertisement

ಆಧುನಿಕ ದಿನಮಾನಗಳಲ್ಲಿ ನಮ್ಮ ಲೇಖನ – ಬರಹಗಳ ಪ್ರಕಟಣೆಗೆ ಪತ್ರಿಕೆ, ನಿಯತಕಾಲಿಕಗಳನ್ನಷ್ಟೇ ಕಾಯುತ್ತಾ ಕೂರಬೇಕಾಗಿಲ್ಲ. ನಮ್ಮದೇ ಆದ ಸ್ವಂತ ಬ್ಲಾಗ್, ಫೇಸ್ ಬುಕ್ ಪುಟಗಳನ್ನು ಆರಂಭಿಸಬಹುದು. ವೈವಿಧ್ಯಮಯ ವೀಡಿಯೋಗಳನ್ನೂ ರೂಪಿಸಬಹುದು. ಈ ರೀತಿಯಾಗಿ ನಮ್ಮನ್ನು ನಾವು ಪ್ರಸ್ತುತಗೊಳಿಸುತ್ತಾ ಸಾಗುವುದು ಇಂದಿನ ಅನಿವಾರ್ಯತೆಯೂ ಹೌದು. ಮೊದಲೆಲ್ಲಾ ಮಾಧ್ಯಮಗಳಲ್ಲಿ ಒಂದೊಂದು ಕೆಲಸಕ್ಕೆ ಒಬ್ಬೊಬ್ಬರಿರುತ್ತಿದ್ದರು. ಆದರೆ ಈಗ ಯಾವುದೇ ಕೆಲಸವನ್ನು ಮಾಡುವುದಕ್ಕೂ ಪ್ರತಿಯೊಬ್ಬರೂ ತಯಾರಿರಬೇಕು ಎಂದು ನುಡಿದರು.

ತಾವು ಪಡೆಯುವ ವೇತನದಲ್ಲಿ ಶೇಕಡಾ ಇಪ್ಪತ್ತೈದರಷ್ಟು ಮಾತ್ರ ನಮ್ಮ ಕೆಲಸಕ್ಕೆ. ಉಳಿದ ಎಪ್ಪತ್ತೈದು ಭಾಗ ನಮ್ಮ ಆಲೋಚನಾ ವಿಧಾನಕ್ಕೆ ಎಂಬ ಕಲ್ಪನೆ ಪ್ರತಿಯೊಬ್ಬ ಪತ್ರಕರ್ತನಲ್ಲೂ ಇರಬೇಕು. ಆದ್ದರಿಂದ ನಮ್ಮ ಯೋಚನೆ, ಸೃಜನಶೀಲತೆ ಮಾಧ್ಯಮ ಕ್ಷೇತ್ರದಲ್ಲಿ ನಾವು ಬೆಳಗುವಂತೆ ಮಾಡುತ್ತದೆ ಎಂದರಲ್ಲದೆ ಡಿಜಿಟಲ್ ಪತ್ರಿಕೋದ್ಯಮ ಸಾಕಷ್ಟು ಬೆಳೆಯುತ್ತಿದೆ. ಈ ಕ್ಷೇತ್ರ ನೂತನ ಪತ್ರಕರ್ತರಾಗುವವರಿಗೆ ಹೊಸಸಾಧ್ಯತೆಯಾಗಿ ಗೋಚರಿಸಲಾರಂಭಿಸಿದೆ ಎಂದು ಅಭಿಪ್ರಾಯಪಟ್ಟರು.

Advertisement

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರೂರಲ್ ಮಿರರ್ ಡಿಜಿಟಲ್ ಮೀಡಿಯಾದ ಸ್ಥಾಪಕ ಮಹೇಶ್ ಪುಚ್ಚಪ್ಪಾಡಿ ಮಾತನಾಡಿ ಪ್ರತಿಯೊಬ್ಬ ಪತ್ರಕರ್ತರಿಂದಲೂ ಕಲಿಯುವ ವಿಷಯಗಳು ಸಾಕಷ್ಟಿವೆ. ನಮಗೆ ದೊರಕುವ ಮಾಹಿತಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪತ್ರಿಕೋದ್ಯಮದಲ್ಲಿ ಮುಂದುವರಿಯಬೇಕು. ನಾನಾ ಪತ್ರಕರ್ತರ ಅನುಭವಗಳನ್ನು ನಮ್ಮ ಬದುಕಿಗೆ ಪೂರಕವಾಗಿ ಸ್ವೀಕರಿಸಿ ಮುನ್ನಡೆಯಬೇಕು ಎಂದು ಕರೆನೀಡಿದರು.

ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪಂಚಮಿ ಬಾಕಿಲಪದವು ಪ್ರಾರ್ಥಿಸಿದರು. ವಿದ್ಯಾರ್ಥಿ ಗುರುಪ್ರಸಾದ್ ಸ್ವಾಗತಿಸಿದರು. ವಿದ್ಯಾರ್ಥಿ ಅಕ್ಷಿತ್ ರೈ ವಂದಿಸಿದರು. ವಿದ್ಯಾರ್ಥಿನಿ ಶ್ರಾವ್ಯಾ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror