ಸುದ್ದಿಗಳು

ಸಕಾರಾತ್ಮಕ ಪತ್ರಿಕೋದ್ಯಮ ಸರಣಿ ಉಪನ್ಯಾಸ | ಕಲಿಕೆಯ ಅವಧಿಯಲ್ಲಿಯೇ ಬ್ರಾಂಡ್ ಆಗಿ ರೂಪುಗೊಳ್ಳಬೇಕು : ಉಮೇಶ್ ಶಿಮ್ಲಡ್ಕ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪತ್ರಿಕೋದ್ಯಮ ವಿದ್ಯಾರ್ಥಿಗಳು ಕ್ಷೇತ್ರಕ್ಕೆ ಅಡಿಯಿಡುವ ಪೂರ್ವದಲ್ಲಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿರಬೇಕು. ಕಲಿಕೆಯ ಅವಧಿಯಲ್ಲಿಯೇ ತಮ್ಮನ್ನು ತಾವು ಒಂದು ಬ್ರಾಂಡ್ ಆಗಿ ರೂಪಿಸಿಕೊಳ್ಳುತ್ತಾ ಬೆಳೆಯಬೇಕು. ಉದ್ಯೋಗದಾತರು ಮೊದಲನೋಟದಲ್ಲೇ ಒಪ್ಪಿಕೊಳ್ಳುವಂತಹ ಮುಖಮೌಲ್ಯಗಳನ್ನು ಹೊಂದಿದ್ದಲ್ಲಿ ಉತ್ಕೃಷ್ಟ ಉದ್ಯೋಗಗಳ ಸಾಧ್ಯತೆ ನಮ್ಮದಾಗುತ್ತದೆ ಎಂದು ಹಿರಿಯ ಪತ್ರಕರ್ತ ಉಮೇಶ್ ಶಿಮ್ಲಡ್ಕ ಹೇಳಿದರು.

Advertisement
Advertisement

ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ರೂರಲ್ ಮಿರರ್ ಡಿಜಿಟಲ್ ಮೀಡಿಯಾದ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಸಕಾರಾತ್ಮಕ ಪತ್ರಿಕೋದ್ಯಮ ಸರಣಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಆಧುನಿಕ ದಿನಮಾನಗಳಲ್ಲಿ ನಮ್ಮ ಲೇಖನ – ಬರಹಗಳ ಪ್ರಕಟಣೆಗೆ ಪತ್ರಿಕೆ, ನಿಯತಕಾಲಿಕಗಳನ್ನಷ್ಟೇ ಕಾಯುತ್ತಾ ಕೂರಬೇಕಾಗಿಲ್ಲ. ನಮ್ಮದೇ ಆದ ಸ್ವಂತ ಬ್ಲಾಗ್, ಫೇಸ್ ಬುಕ್ ಪುಟಗಳನ್ನು ಆರಂಭಿಸಬಹುದು. ವೈವಿಧ್ಯಮಯ ವೀಡಿಯೋಗಳನ್ನೂ ರೂಪಿಸಬಹುದು. ಈ ರೀತಿಯಾಗಿ ನಮ್ಮನ್ನು ನಾವು ಪ್ರಸ್ತುತಗೊಳಿಸುತ್ತಾ ಸಾಗುವುದು ಇಂದಿನ ಅನಿವಾರ್ಯತೆಯೂ ಹೌದು. ಮೊದಲೆಲ್ಲಾ ಮಾಧ್ಯಮಗಳಲ್ಲಿ ಒಂದೊಂದು ಕೆಲಸಕ್ಕೆ ಒಬ್ಬೊಬ್ಬರಿರುತ್ತಿದ್ದರು. ಆದರೆ ಈಗ ಯಾವುದೇ ಕೆಲಸವನ್ನು ಮಾಡುವುದಕ್ಕೂ ಪ್ರತಿಯೊಬ್ಬರೂ ತಯಾರಿರಬೇಕು ಎಂದು ನುಡಿದರು.

ತಾವು ಪಡೆಯುವ ವೇತನದಲ್ಲಿ ಶೇಕಡಾ ಇಪ್ಪತ್ತೈದರಷ್ಟು ಮಾತ್ರ ನಮ್ಮ ಕೆಲಸಕ್ಕೆ. ಉಳಿದ ಎಪ್ಪತ್ತೈದು ಭಾಗ ನಮ್ಮ ಆಲೋಚನಾ ವಿಧಾನಕ್ಕೆ ಎಂಬ ಕಲ್ಪನೆ ಪ್ರತಿಯೊಬ್ಬ ಪತ್ರಕರ್ತನಲ್ಲೂ ಇರಬೇಕು. ಆದ್ದರಿಂದ ನಮ್ಮ ಯೋಚನೆ, ಸೃಜನಶೀಲತೆ ಮಾಧ್ಯಮ ಕ್ಷೇತ್ರದಲ್ಲಿ ನಾವು ಬೆಳಗುವಂತೆ ಮಾಡುತ್ತದೆ ಎಂದರಲ್ಲದೆ ಡಿಜಿಟಲ್ ಪತ್ರಿಕೋದ್ಯಮ ಸಾಕಷ್ಟು ಬೆಳೆಯುತ್ತಿದೆ. ಈ ಕ್ಷೇತ್ರ ನೂತನ ಪತ್ರಕರ್ತರಾಗುವವರಿಗೆ ಹೊಸಸಾಧ್ಯತೆಯಾಗಿ ಗೋಚರಿಸಲಾರಂಭಿಸಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರೂರಲ್ ಮಿರರ್ ಡಿಜಿಟಲ್ ಮೀಡಿಯಾದ ಸ್ಥಾಪಕ ಮಹೇಶ್ ಪುಚ್ಚಪ್ಪಾಡಿ ಮಾತನಾಡಿ ಪ್ರತಿಯೊಬ್ಬ ಪತ್ರಕರ್ತರಿಂದಲೂ ಕಲಿಯುವ ವಿಷಯಗಳು ಸಾಕಷ್ಟಿವೆ. ನಮಗೆ ದೊರಕುವ ಮಾಹಿತಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪತ್ರಿಕೋದ್ಯಮದಲ್ಲಿ ಮುಂದುವರಿಯಬೇಕು. ನಾನಾ ಪತ್ರಕರ್ತರ ಅನುಭವಗಳನ್ನು ನಮ್ಮ ಬದುಕಿಗೆ ಪೂರಕವಾಗಿ ಸ್ವೀಕರಿಸಿ ಮುನ್ನಡೆಯಬೇಕು ಎಂದು ಕರೆನೀಡಿದರು.

Advertisement

ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪಂಚಮಿ ಬಾಕಿಲಪದವು ಪ್ರಾರ್ಥಿಸಿದರು. ವಿದ್ಯಾರ್ಥಿ ಗುರುಪ್ರಸಾದ್ ಸ್ವಾಗತಿಸಿದರು. ವಿದ್ಯಾರ್ಥಿ ಅಕ್ಷಿತ್ ರೈ ವಂದಿಸಿದರು. ವಿದ್ಯಾರ್ಥಿನಿ ಶ್ರಾವ್ಯಾ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

7 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

1 day ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

1 day ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

1 day ago