Advertisement
ಸುದ್ದಿಗಳು

ಸಕಾರಾತ್ಮಕ ಪತ್ರಿಕೋದ್ಯಮ ಸರಣಿ ಉಪನ್ಯಾಸ | ಕಲಿಕೆಯ ಅವಧಿಯಲ್ಲಿಯೇ ಬ್ರಾಂಡ್ ಆಗಿ ರೂಪುಗೊಳ್ಳಬೇಕು : ಉಮೇಶ್ ಶಿಮ್ಲಡ್ಕ

Share

ಪತ್ರಿಕೋದ್ಯಮ ವಿದ್ಯಾರ್ಥಿಗಳು ಕ್ಷೇತ್ರಕ್ಕೆ ಅಡಿಯಿಡುವ ಪೂರ್ವದಲ್ಲಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿರಬೇಕು. ಕಲಿಕೆಯ ಅವಧಿಯಲ್ಲಿಯೇ ತಮ್ಮನ್ನು ತಾವು ಒಂದು ಬ್ರಾಂಡ್ ಆಗಿ ರೂಪಿಸಿಕೊಳ್ಳುತ್ತಾ ಬೆಳೆಯಬೇಕು. ಉದ್ಯೋಗದಾತರು ಮೊದಲನೋಟದಲ್ಲೇ ಒಪ್ಪಿಕೊಳ್ಳುವಂತಹ ಮುಖಮೌಲ್ಯಗಳನ್ನು ಹೊಂದಿದ್ದಲ್ಲಿ ಉತ್ಕೃಷ್ಟ ಉದ್ಯೋಗಗಳ ಸಾಧ್ಯತೆ ನಮ್ಮದಾಗುತ್ತದೆ ಎಂದು ಹಿರಿಯ ಪತ್ರಕರ್ತ ಉಮೇಶ್ ಶಿಮ್ಲಡ್ಕ ಹೇಳಿದರು.

ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ರೂರಲ್ ಮಿರರ್ ಡಿಜಿಟಲ್ ಮೀಡಿಯಾದ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಸಕಾರಾತ್ಮಕ ಪತ್ರಿಕೋದ್ಯಮ ಸರಣಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಆಧುನಿಕ ದಿನಮಾನಗಳಲ್ಲಿ ನಮ್ಮ ಲೇಖನ – ಬರಹಗಳ ಪ್ರಕಟಣೆಗೆ ಪತ್ರಿಕೆ, ನಿಯತಕಾಲಿಕಗಳನ್ನಷ್ಟೇ ಕಾಯುತ್ತಾ ಕೂರಬೇಕಾಗಿಲ್ಲ. ನಮ್ಮದೇ ಆದ ಸ್ವಂತ ಬ್ಲಾಗ್, ಫೇಸ್ ಬುಕ್ ಪುಟಗಳನ್ನು ಆರಂಭಿಸಬಹುದು. ವೈವಿಧ್ಯಮಯ ವೀಡಿಯೋಗಳನ್ನೂ ರೂಪಿಸಬಹುದು. ಈ ರೀತಿಯಾಗಿ ನಮ್ಮನ್ನು ನಾವು ಪ್ರಸ್ತುತಗೊಳಿಸುತ್ತಾ ಸಾಗುವುದು ಇಂದಿನ ಅನಿವಾರ್ಯತೆಯೂ ಹೌದು. ಮೊದಲೆಲ್ಲಾ ಮಾಧ್ಯಮಗಳಲ್ಲಿ ಒಂದೊಂದು ಕೆಲಸಕ್ಕೆ ಒಬ್ಬೊಬ್ಬರಿರುತ್ತಿದ್ದರು. ಆದರೆ ಈಗ ಯಾವುದೇ ಕೆಲಸವನ್ನು ಮಾಡುವುದಕ್ಕೂ ಪ್ರತಿಯೊಬ್ಬರೂ ತಯಾರಿರಬೇಕು ಎಂದು ನುಡಿದರು.

ತಾವು ಪಡೆಯುವ ವೇತನದಲ್ಲಿ ಶೇಕಡಾ ಇಪ್ಪತ್ತೈದರಷ್ಟು ಮಾತ್ರ ನಮ್ಮ ಕೆಲಸಕ್ಕೆ. ಉಳಿದ ಎಪ್ಪತ್ತೈದು ಭಾಗ ನಮ್ಮ ಆಲೋಚನಾ ವಿಧಾನಕ್ಕೆ ಎಂಬ ಕಲ್ಪನೆ ಪ್ರತಿಯೊಬ್ಬ ಪತ್ರಕರ್ತನಲ್ಲೂ ಇರಬೇಕು. ಆದ್ದರಿಂದ ನಮ್ಮ ಯೋಚನೆ, ಸೃಜನಶೀಲತೆ ಮಾಧ್ಯಮ ಕ್ಷೇತ್ರದಲ್ಲಿ ನಾವು ಬೆಳಗುವಂತೆ ಮಾಡುತ್ತದೆ ಎಂದರಲ್ಲದೆ ಡಿಜಿಟಲ್ ಪತ್ರಿಕೋದ್ಯಮ ಸಾಕಷ್ಟು ಬೆಳೆಯುತ್ತಿದೆ. ಈ ಕ್ಷೇತ್ರ ನೂತನ ಪತ್ರಕರ್ತರಾಗುವವರಿಗೆ ಹೊಸಸಾಧ್ಯತೆಯಾಗಿ ಗೋಚರಿಸಲಾರಂಭಿಸಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರೂರಲ್ ಮಿರರ್ ಡಿಜಿಟಲ್ ಮೀಡಿಯಾದ ಸ್ಥಾಪಕ ಮಹೇಶ್ ಪುಚ್ಚಪ್ಪಾಡಿ ಮಾತನಾಡಿ ಪ್ರತಿಯೊಬ್ಬ ಪತ್ರಕರ್ತರಿಂದಲೂ ಕಲಿಯುವ ವಿಷಯಗಳು ಸಾಕಷ್ಟಿವೆ. ನಮಗೆ ದೊರಕುವ ಮಾಹಿತಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪತ್ರಿಕೋದ್ಯಮದಲ್ಲಿ ಮುಂದುವರಿಯಬೇಕು. ನಾನಾ ಪತ್ರಕರ್ತರ ಅನುಭವಗಳನ್ನು ನಮ್ಮ ಬದುಕಿಗೆ ಪೂರಕವಾಗಿ ಸ್ವೀಕರಿಸಿ ಮುನ್ನಡೆಯಬೇಕು ಎಂದು ಕರೆನೀಡಿದರು.

ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪಂಚಮಿ ಬಾಕಿಲಪದವು ಪ್ರಾರ್ಥಿಸಿದರು. ವಿದ್ಯಾರ್ಥಿ ಗುರುಪ್ರಸಾದ್ ಸ್ವಾಗತಿಸಿದರು. ವಿದ್ಯಾರ್ಥಿ ಅಕ್ಷಿತ್ ರೈ ವಂದಿಸಿದರು. ವಿದ್ಯಾರ್ಥಿನಿ ಶ್ರಾವ್ಯಾ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

4 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

9 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

16 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

17 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

17 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago