Advertisement
ಸುದ್ದಿಗಳು

ಸಕಾರಾತ್ಮಕ ಪತ್ರಿಕೋದ್ಯಮ ಸರಣಿ ಉಪನ್ಯಾಸ | ಕಲಿಕೆಯ ಅವಧಿಯಲ್ಲಿಯೇ ಬ್ರಾಂಡ್ ಆಗಿ ರೂಪುಗೊಳ್ಳಬೇಕು : ಉಮೇಶ್ ಶಿಮ್ಲಡ್ಕ

Share

ಪತ್ರಿಕೋದ್ಯಮ ವಿದ್ಯಾರ್ಥಿಗಳು ಕ್ಷೇತ್ರಕ್ಕೆ ಅಡಿಯಿಡುವ ಪೂರ್ವದಲ್ಲಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿರಬೇಕು. ಕಲಿಕೆಯ ಅವಧಿಯಲ್ಲಿಯೇ ತಮ್ಮನ್ನು ತಾವು ಒಂದು ಬ್ರಾಂಡ್ ಆಗಿ ರೂಪಿಸಿಕೊಳ್ಳುತ್ತಾ ಬೆಳೆಯಬೇಕು. ಉದ್ಯೋಗದಾತರು ಮೊದಲನೋಟದಲ್ಲೇ ಒಪ್ಪಿಕೊಳ್ಳುವಂತಹ ಮುಖಮೌಲ್ಯಗಳನ್ನು ಹೊಂದಿದ್ದಲ್ಲಿ ಉತ್ಕೃಷ್ಟ ಉದ್ಯೋಗಗಳ ಸಾಧ್ಯತೆ ನಮ್ಮದಾಗುತ್ತದೆ ಎಂದು ಹಿರಿಯ ಪತ್ರಕರ್ತ ಉಮೇಶ್ ಶಿಮ್ಲಡ್ಕ ಹೇಳಿದರು.

ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ರೂರಲ್ ಮಿರರ್ ಡಿಜಿಟಲ್ ಮೀಡಿಯಾದ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಸಕಾರಾತ್ಮಕ ಪತ್ರಿಕೋದ್ಯಮ ಸರಣಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಆಧುನಿಕ ದಿನಮಾನಗಳಲ್ಲಿ ನಮ್ಮ ಲೇಖನ – ಬರಹಗಳ ಪ್ರಕಟಣೆಗೆ ಪತ್ರಿಕೆ, ನಿಯತಕಾಲಿಕಗಳನ್ನಷ್ಟೇ ಕಾಯುತ್ತಾ ಕೂರಬೇಕಾಗಿಲ್ಲ. ನಮ್ಮದೇ ಆದ ಸ್ವಂತ ಬ್ಲಾಗ್, ಫೇಸ್ ಬುಕ್ ಪುಟಗಳನ್ನು ಆರಂಭಿಸಬಹುದು. ವೈವಿಧ್ಯಮಯ ವೀಡಿಯೋಗಳನ್ನೂ ರೂಪಿಸಬಹುದು. ಈ ರೀತಿಯಾಗಿ ನಮ್ಮನ್ನು ನಾವು ಪ್ರಸ್ತುತಗೊಳಿಸುತ್ತಾ ಸಾಗುವುದು ಇಂದಿನ ಅನಿವಾರ್ಯತೆಯೂ ಹೌದು. ಮೊದಲೆಲ್ಲಾ ಮಾಧ್ಯಮಗಳಲ್ಲಿ ಒಂದೊಂದು ಕೆಲಸಕ್ಕೆ ಒಬ್ಬೊಬ್ಬರಿರುತ್ತಿದ್ದರು. ಆದರೆ ಈಗ ಯಾವುದೇ ಕೆಲಸವನ್ನು ಮಾಡುವುದಕ್ಕೂ ಪ್ರತಿಯೊಬ್ಬರೂ ತಯಾರಿರಬೇಕು ಎಂದು ನುಡಿದರು.

ತಾವು ಪಡೆಯುವ ವೇತನದಲ್ಲಿ ಶೇಕಡಾ ಇಪ್ಪತ್ತೈದರಷ್ಟು ಮಾತ್ರ ನಮ್ಮ ಕೆಲಸಕ್ಕೆ. ಉಳಿದ ಎಪ್ಪತ್ತೈದು ಭಾಗ ನಮ್ಮ ಆಲೋಚನಾ ವಿಧಾನಕ್ಕೆ ಎಂಬ ಕಲ್ಪನೆ ಪ್ರತಿಯೊಬ್ಬ ಪತ್ರಕರ್ತನಲ್ಲೂ ಇರಬೇಕು. ಆದ್ದರಿಂದ ನಮ್ಮ ಯೋಚನೆ, ಸೃಜನಶೀಲತೆ ಮಾಧ್ಯಮ ಕ್ಷೇತ್ರದಲ್ಲಿ ನಾವು ಬೆಳಗುವಂತೆ ಮಾಡುತ್ತದೆ ಎಂದರಲ್ಲದೆ ಡಿಜಿಟಲ್ ಪತ್ರಿಕೋದ್ಯಮ ಸಾಕಷ್ಟು ಬೆಳೆಯುತ್ತಿದೆ. ಈ ಕ್ಷೇತ್ರ ನೂತನ ಪತ್ರಕರ್ತರಾಗುವವರಿಗೆ ಹೊಸಸಾಧ್ಯತೆಯಾಗಿ ಗೋಚರಿಸಲಾರಂಭಿಸಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರೂರಲ್ ಮಿರರ್ ಡಿಜಿಟಲ್ ಮೀಡಿಯಾದ ಸ್ಥಾಪಕ ಮಹೇಶ್ ಪುಚ್ಚಪ್ಪಾಡಿ ಮಾತನಾಡಿ ಪ್ರತಿಯೊಬ್ಬ ಪತ್ರಕರ್ತರಿಂದಲೂ ಕಲಿಯುವ ವಿಷಯಗಳು ಸಾಕಷ್ಟಿವೆ. ನಮಗೆ ದೊರಕುವ ಮಾಹಿತಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪತ್ರಿಕೋದ್ಯಮದಲ್ಲಿ ಮುಂದುವರಿಯಬೇಕು. ನಾನಾ ಪತ್ರಕರ್ತರ ಅನುಭವಗಳನ್ನು ನಮ್ಮ ಬದುಕಿಗೆ ಪೂರಕವಾಗಿ ಸ್ವೀಕರಿಸಿ ಮುನ್ನಡೆಯಬೇಕು ಎಂದು ಕರೆನೀಡಿದರು.

ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪಂಚಮಿ ಬಾಕಿಲಪದವು ಪ್ರಾರ್ಥಿಸಿದರು. ವಿದ್ಯಾರ್ಥಿ ಗುರುಪ್ರಸಾದ್ ಸ್ವಾಗತಿಸಿದರು. ವಿದ್ಯಾರ್ಥಿ ಅಕ್ಷಿತ್ ರೈ ವಂದಿಸಿದರು. ವಿದ್ಯಾರ್ಥಿನಿ ಶ್ರಾವ್ಯಾ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

5 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

11 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

12 hours ago

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

22 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

23 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

2 days ago