ದಕ್ಷಿಣ ಕನ್ನಡ ಜಿಲ್ಲೆಯ ಎಂಡೋಸಂತ್ರಸ್ತರಿಗೆ ಸೂಕ್ತವಾದ ನ್ಯಾಯ, ಪರಿಹಾರ ಇನ್ನೂ ಮರೀಚಿಕೆಯಾಗಿದೆ. ಇದೀಗ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಉಪ್ಪಿನಂಗಡಿಯಲ್ಲಿ ಭಾನುವಾರ ಸಭೆ ನಡೆಯಿತು.
ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಂಗಮ ಕೃಪಾ ಸಭಾಭವನದಲ್ಲಿ ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ ಮಾಸಿಕ ಮಾಸಿಕ ವೇತನವನ್ನು 4 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸುವಂತೆ ಆಗ್ರಹಿಸಲಾಯಿತು. ಇದಕ್ಕಾಗಿ ಎಂಡೋಸಲ್ಫಾನ್ ಸಂತ್ರಸ್ತರು ಹಾಗೂ ಪಾಲಕರು ಪೋಸ್ಟ್ ಕಾರ್ಡ್ ಅಭಿಯಾನ ನಡೆಸಲು ನಿರ್ಧರಿಸಿದರು.
ಪ್ರತಿಯೊಬ್ಬ ಸಂತ್ರಸ್ತರು ಹಾಗೂ ಅವರ ಮನೆಯವರು ( Endosulfan victims and their families) ಸೆ.20 ರಿಂದ 30 ರವರೆಗೆ ಅಂಚೆ ಕಾರ್ಡ್ಗಳನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಬೇಕು ಎಂದು ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೆಂಗುಡೇಲು ಮನವಿ ಮಾಡಿದರು. ಪೌಷ್ಟಿಕ ಆಹಾರ, ಆಧಾರ್ ಕಾರ್ಡ್ಗಳಂತಹ ಇತರ ಬೇಡಿಕೆಗಳನ್ನು ಸಹ ಈಡೇರಿಸಲು ಇದೇ ವೇಳೆ ಒತ್ತಾಯಿಸಲಾಯಿತು. ಈ ಪೋಸ್ಟ್ ಕಾರ್ಡ್ ಅಭಿಯಾನಕ್ಕೆ ಯಾವುದೇ ಪ್ರತಿಕ್ರಿಯೆ ಬಾರದಿದ್ದಲ್ಲಿ ಬೆಂಗಳೂರಿಗೆ ಪಾದಯಾತ್ರೆ ನಡೆಸಲು ಕೂಡಾ ಹಿಂಜರಿಯುವುದಿಲ್ಲ ಎಂದು ಶ್ರೀಧರ ಗೌಡ ಘೋಷಿಸಿದರು.
ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ಸಂಜೀವ ಕಬಕ, ಶಿವು ರಾಠೋಡ್ ಮತ್ತು ತುಕಾರಾಂ ಶೆಟ್ಟಿ ಉಪಸ್ಥಿತರಿದ್ದರು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…