Advertisement
ರಾಜ್ಯ

ಎಂಡೋ ಸಂತ್ರಸ್ತರ ಅಳಲು | ಪೋಸ್ಟ್‌ ಕಾರ್ಡ್‌ ಅಭಿಯಾನ | ರಾಜಧಾನಿಗೆ ಪಾದಯಾತ್ರೆಗೂ ಸಿದ್ಧ |

Share

ದಕ್ಷಿಣ ಕನ್ನಡ ಜಿಲ್ಲೆಯ ಎಂಡೋಸಂತ್ರಸ್ತರಿಗೆ ಸೂಕ್ತವಾದ ನ್ಯಾಯ, ಪರಿಹಾರ ಇನ್ನೂ ಮರೀಚಿಕೆಯಾಗಿದೆ. ಇದೀಗ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಉಪ್ಪಿನಂಗಡಿಯಲ್ಲಿ ಭಾನುವಾರ ಸಭೆ ನಡೆಯಿತು. 

ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಂಗಮ ಕೃಪಾ ಸಭಾಭವನದಲ್ಲಿ ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ ಮಾಸಿಕ ಮಾಸಿಕ ವೇತನವನ್ನು 4 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸುವಂತೆ ಆಗ್ರಹಿಸಲಾಯಿತು. ಇದಕ್ಕಾಗಿ ಎಂಡೋಸಲ್ಫಾನ್ ಸಂತ್ರಸ್ತರು ಹಾಗೂ ಪಾಲಕರು ಪೋಸ್ಟ್ ಕಾರ್ಡ್ ಅಭಿಯಾನ ನಡೆಸಲು ನಿರ್ಧರಿಸಿದರು.

ಪ್ರತಿಯೊಬ್ಬ ಸಂತ್ರಸ್ತರು ಹಾಗೂ ಅವರ ಮನೆಯವರು ( Endosulfan victims and their families) ಸೆ.20 ರಿಂದ 30 ರವರೆಗೆ ಅಂಚೆ ಕಾರ್ಡ್‌ಗಳನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಬೇಕು ಎಂದು ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೆಂಗುಡೇಲು ಮನವಿ ಮಾಡಿದರು. ಪೌಷ್ಟಿಕ ಆಹಾರ, ಆಧಾರ್ ಕಾರ್ಡ್‌ಗಳಂತಹ ಇತರ ಬೇಡಿಕೆಗಳನ್ನು ಸಹ‌ ಈಡೇರಿಸಲು ಇದೇ ವೇಳೆ ಒತ್ತಾಯಿಸಲಾಯಿತು. ಈ ಪೋಸ್ಟ್‌ ಕಾರ್ಡ್‌ ಅಭಿಯಾನಕ್ಕೆ ಯಾವುದೇ ಪ್ರತಿಕ್ರಿಯೆ ಬಾರದಿದ್ದಲ್ಲಿ ಬೆಂಗಳೂರಿಗೆ ಪಾದಯಾತ್ರೆ ನಡೆಸಲು ಕೂಡಾ ಹಿಂಜರಿಯುವುದಿಲ್ಲ ಎಂದು ಶ್ರೀಧರ ಗೌಡ ಘೋಷಿಸಿದರು.

ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ಸಂಜೀವ ಕಬಕ, ಶಿವು ರಾಠೋಡ್ ಮತ್ತು ತುಕಾರಾಂ ಶೆಟ್ಟಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

9 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

11 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

12 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

12 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

12 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

21 hours ago