ದಕ್ಷಿಣ ಕನ್ನಡ ಜಿಲ್ಲೆಯ ಎಂಡೋಸಂತ್ರಸ್ತರಿಗೆ ಸೂಕ್ತವಾದ ನ್ಯಾಯ, ಪರಿಹಾರ ಇನ್ನೂ ಮರೀಚಿಕೆಯಾಗಿದೆ. ಇದೀಗ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಉಪ್ಪಿನಂಗಡಿಯಲ್ಲಿ ಭಾನುವಾರ ಸಭೆ ನಡೆಯಿತು.
ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಂಗಮ ಕೃಪಾ ಸಭಾಭವನದಲ್ಲಿ ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ ಮಾಸಿಕ ಮಾಸಿಕ ವೇತನವನ್ನು 4 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸುವಂತೆ ಆಗ್ರಹಿಸಲಾಯಿತು. ಇದಕ್ಕಾಗಿ ಎಂಡೋಸಲ್ಫಾನ್ ಸಂತ್ರಸ್ತರು ಹಾಗೂ ಪಾಲಕರು ಪೋಸ್ಟ್ ಕಾರ್ಡ್ ಅಭಿಯಾನ ನಡೆಸಲು ನಿರ್ಧರಿಸಿದರು.
ಪ್ರತಿಯೊಬ್ಬ ಸಂತ್ರಸ್ತರು ಹಾಗೂ ಅವರ ಮನೆಯವರು ( Endosulfan victims and their families) ಸೆ.20 ರಿಂದ 30 ರವರೆಗೆ ಅಂಚೆ ಕಾರ್ಡ್ಗಳನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಬೇಕು ಎಂದು ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೆಂಗುಡೇಲು ಮನವಿ ಮಾಡಿದರು. ಪೌಷ್ಟಿಕ ಆಹಾರ, ಆಧಾರ್ ಕಾರ್ಡ್ಗಳಂತಹ ಇತರ ಬೇಡಿಕೆಗಳನ್ನು ಸಹ ಈಡೇರಿಸಲು ಇದೇ ವೇಳೆ ಒತ್ತಾಯಿಸಲಾಯಿತು. ಈ ಪೋಸ್ಟ್ ಕಾರ್ಡ್ ಅಭಿಯಾನಕ್ಕೆ ಯಾವುದೇ ಪ್ರತಿಕ್ರಿಯೆ ಬಾರದಿದ್ದಲ್ಲಿ ಬೆಂಗಳೂರಿಗೆ ಪಾದಯಾತ್ರೆ ನಡೆಸಲು ಕೂಡಾ ಹಿಂಜರಿಯುವುದಿಲ್ಲ ಎಂದು ಶ್ರೀಧರ ಗೌಡ ಘೋಷಿಸಿದರು.
ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ಸಂಜೀವ ಕಬಕ, ಶಿವು ರಾಠೋಡ್ ಮತ್ತು ತುಕಾರಾಂ ಶೆಟ್ಟಿ ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…