ದಕ್ಷಿಣ ಕನ್ನಡ ಜಿಲ್ಲೆಯ ಎಂಡೋಸಂತ್ರಸ್ತರಿಗೆ ಸೂಕ್ತವಾದ ನ್ಯಾಯ, ಪರಿಹಾರ ಇನ್ನೂ ಮರೀಚಿಕೆಯಾಗಿದೆ. ಇದೀಗ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಉಪ್ಪಿನಂಗಡಿಯಲ್ಲಿ ಭಾನುವಾರ ಸಭೆ ನಡೆಯಿತು.
ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಂಗಮ ಕೃಪಾ ಸಭಾಭವನದಲ್ಲಿ ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ ಮಾಸಿಕ ಮಾಸಿಕ ವೇತನವನ್ನು 4 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸುವಂತೆ ಆಗ್ರಹಿಸಲಾಯಿತು. ಇದಕ್ಕಾಗಿ ಎಂಡೋಸಲ್ಫಾನ್ ಸಂತ್ರಸ್ತರು ಹಾಗೂ ಪಾಲಕರು ಪೋಸ್ಟ್ ಕಾರ್ಡ್ ಅಭಿಯಾನ ನಡೆಸಲು ನಿರ್ಧರಿಸಿದರು.
ಪ್ರತಿಯೊಬ್ಬ ಸಂತ್ರಸ್ತರು ಹಾಗೂ ಅವರ ಮನೆಯವರು ( Endosulfan victims and their families) ಸೆ.20 ರಿಂದ 30 ರವರೆಗೆ ಅಂಚೆ ಕಾರ್ಡ್ಗಳನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಬೇಕು ಎಂದು ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೆಂಗುಡೇಲು ಮನವಿ ಮಾಡಿದರು. ಪೌಷ್ಟಿಕ ಆಹಾರ, ಆಧಾರ್ ಕಾರ್ಡ್ಗಳಂತಹ ಇತರ ಬೇಡಿಕೆಗಳನ್ನು ಸಹ ಈಡೇರಿಸಲು ಇದೇ ವೇಳೆ ಒತ್ತಾಯಿಸಲಾಯಿತು. ಈ ಪೋಸ್ಟ್ ಕಾರ್ಡ್ ಅಭಿಯಾನಕ್ಕೆ ಯಾವುದೇ ಪ್ರತಿಕ್ರಿಯೆ ಬಾರದಿದ್ದಲ್ಲಿ ಬೆಂಗಳೂರಿಗೆ ಪಾದಯಾತ್ರೆ ನಡೆಸಲು ಕೂಡಾ ಹಿಂಜರಿಯುವುದಿಲ್ಲ ಎಂದು ಶ್ರೀಧರ ಗೌಡ ಘೋಷಿಸಿದರು.
ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ಸಂಜೀವ ಕಬಕ, ಶಿವು ರಾಠೋಡ್ ಮತ್ತು ತುಕಾರಾಂ ಶೆಟ್ಟಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…