ಇದೇ ಮೊದಲ ಬಾರಿಗೆ ಸಂಜೆ ಅಂಚೆ ಕಚೇರಿ ಆರಂಭವಾಗಿದೆ. ರಾತ್ರಿ 9 ಗಂಟೆ ವರೆಗೆ ಆಧಾರ್ ತಿದ್ದುಪಡಿ ಸೇರಿದಂತೆ ಅಂಚೆ ಸೇವೆಗಳು ಲಭ್ಯ ಇರುತ್ತವೆ. ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿ ಸಂಜೆ ಅಂಚೆ ಕಚೇರಿ ಆರಂಭಿಸಲಾಗಿದ್ದು, ಉದ್ಯೋಗಕ್ಕೆ ತೆರಳುವವರಿಗೆ ಸಂಜೆ ಅಂಚೆ ಕಚೇರಿಯಿಂದ ಅನುಕೂಲವಾಗುತ್ತದೆ.
ಕಳೆದ ನವೆಂಬರ್ ನಲ್ಲಿ ಪ್ರಾಯೋಗಿಕವಾಗಿ ಧಾರವಾಡದಲ್ಲಿ ರಾಜ್ಯದ ಮೊದಲ ಸಂಜೆ ಅಂಚೆ ಕಚೇರಿ ಆರಂಭಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಯೂ ಆರಂಭಿಸಲಾಗಿದೆ. ಅಂಚೆ ಕಚೇರಿಗಳು ಸಾಮಾನ್ಯವಾಗಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3:30ರ ವರೆಗೆ ಮಾತ್ರ ಸೇವೆ ನೀಡಲಿದ್ದು, ಸಂಜೆ ಅಂಚೆ ಕಚೇರಿ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ.
ಬೆಂಗಳೂರಿನಲ್ಲಿ ಮಧ್ಯಾಹ್ನ 3:30ಕ್ಕೆ ಅಂಚೆ ಸೇವೆ ಸ್ಥಗಿತಗೊಂಡ ನಂತರ ಸ್ಪೀಡ್ ಪೋಸ್ಟ್ ಗೆ ರಾಜಭವನ ರಸ್ತೆಯ ಜಿಪಿಓ ಗೆ ತೆರಳಬೇಕಿತ್ತು. ರಿಜಿಸ್ಟ್ರಾರ್ ಪೋಸ್ಟ್ ಮಾಡಲು ರೈಲ್ವೆ ನಿಲ್ದಾಣದ ಆರ್ಎಂಎಸ್ಗೆ ಹೋಗಬೇಕಾಗಿತ್ತು. ಸಂಜೆ ಅಂಚೆ ಕಚೇರಿಯಲ್ಲಿ ಸ್ಪೀಡ್ ಪೋಸ್ಟ್, ರಿಜಿಸ್ಟ್ರಾರ್ ಪೋಸ್ಟ್, ಪಾರ್ಸೆಲ್ ಸೇವೆ ಫಿಲಾಟಲಿ ಸೇಲ್ಸ್, ಆಧಾರ್ ತಿದ್ದುಪಡಿ ಸೇವೆ ನೀಡಲಾಗುತ್ತದೆ.
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.
ರಾಜಕಾರಣದಲ್ಲಿ ನೈತಿಕ ಮೌಲ್ಯ ತುಂಬಬೇಕಾದ್ದು ಏಕೆ ? ಸಮಾಜದಲ್ಲಿ ಸಾಮರಸ್ಯ ಮೂಡಲು ಏನು…
ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.
ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…