“ಅಂಚೆ ವ್ಯವಸ್ಥೆಯನ್ನು ಗಟ್ಟಿಗೊಳಿಸುವುದು ನಾಗರಿಕರ ಹೊಣೆ” – ನಾ. ಕಾರಂತ ಪೆರಾಜೆ

October 19, 2021
9:55 PM

“ತಂತ್ರಜ್ಞಾನಗಳು ಬೆರಳ ತುದಿಯಲ್ಲಿರುವ ಕಾಲಘಟ್ಟದಲ್ಲಿ ಭಾರತೀಯ ಅಂಚೆ ಸೇವೆಯು ಈಗಲೂ ಜನಪರವಾಗಿ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಪ್ರತಿಯೊಬ್ಬನ ಜೀವನದಲ್ಲಿಯೂ ಒಂದಲ್ಲ ಒಂದು ರೀತಿಯಲ್ಲಿ ಅಂಚೆ ಕಚೇರಿಯ ಸಂಪರ್ಕ, ಸ್ಪಂದನಗಳು ಜೀವಂತವಾಗಿವೆ. ನಗರಕ್ಕೂ ಹಳ್ಳಿಗೂ ಸಂವಹನ ಮಾಧ್ಯಮವಾಗಿ ಅಂಚೆ ಕಚೇರಿಯು ಕಾರ್ಯವೆಸಗುತ್ತಿದೆ. ಹಾಗಾಗಿ ಬದುಕಿನೊಂದಿಗೆ ಹೊಸೆದಿರುವ ಅಂಚೆ ವ್ಯವಸ್ಥೆಯನ್ನು ಪ್ರೋತ್ಸಾಹಿಸುವುದು ನಾಗರಿಕರ ಹೊಣೆಯಾಗಿದೆ,” ಎಂದು ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ. ಕಾರಂತ ಪೆರಾಜೆ ಹೇಳಿದರು.

ಅವರು ಪುತ್ತೂರು ಪ್ರಧಾನ ಅಂಚೆ ಕಚೇರಿಯಲ್ಲಿ ಜರುಗಿದ ‘ಮೆಯಿಲ್ ಡೇ’ ಸಂಭ್ರಮದಲ್ಲಿ ಮಾತನಾಡುತ್ತಾ, “ಸಾಹಿತ್ಯ ಕ್ಷೇತ್ರದ ಹಿರಿಯರಿಗೆಲ್ಲಾ ಅಂಚೆ ಇಲಾಖೆಯ ಸಂಪರ್ಕ ನಿಕಟವಾಗಿದ್ದು, ಸಾಹಿತ್ಯ ಹಾಗೂ ಅಂಚೆ ಒಂದೇ ಮನೆಯ ಸದಸ್ಯರಿದ್ದಂತೆ’ ಎಂದ ಕಳೆದ ಮೂವತ್ತನಾಲ್ಕು ವರುಷದಿಂದ ಅಡಿಕೆ ಪತ್ರಿಕೆ ಮತ್ತು ಅಂಚೆ ಕಚೇರಿಯ ಬಾಂಧವ್ಯವನ್ನು ನೆನಪಿಸಿಕೊಂಡರು.

Advertisement

ಈ ಸಂದರ್ಭದಲ್ಲಿ ‘ಪೂವರಿ’ ತುಳು ಮಾಸಿಕದ ಸಂಪಾದಕ ವಿಜಯಕುಮಾರ್ ಹೆಬ್ಬಾರಬೈಲು ಅವರನ್ನು ಕೂಡಾ ಗೌರವಿಸಲಾಯಿತು. ಅವರು ಅಂಚೆ ಇಲಾಖೆಯ ಕಾರ್ಯತತ್ಪರತೆಯನ್ನು ಶ್ಲಾಘಿಸಿದರು. ಅಂಚೆ ವ್ಯವಸ್ಥೆಯನ್ನು ಅತಿ ಹೆಚ್ಚಾಗಿ ಬಳಸುತ್ತಿರುವ ಎರಡೂ ಪತ್ರಿಕೆಗಳ ಸಂಪಾದಕರುಗಳನ್ನು ಪ್ರಧಾನ ಅಂಚೆ ಪಾಲಕರಾದ ತೀರ್ಥಪ್ರಸಾದ್ ಎಸ್. ಇವರು ಶಾಲು, ಫಲಪುಷ್ಪ ನೀಡಿ ಗೌರವಿಸಿ ಸಂದರ್ಭೋಚಿತವಾಗಿ ಮಾತನಾಡಿದರು.

ಉಪ ಅಂಚೆಪಾಲಕರಾದ ಗಾಯತ್ರೀ ಕೆ. ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿದರು. ಎಲ್ಲಾ ಸಹಾಯಕ ಅಂಚೆಪಾಲಕರು, ಕಚೇರಿ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement

ಬ್ಯಾಂಕಿಂಗ್ ಡೇ ಪ್ರಯುಕ್ತ ಮಹಿಳಾ ಪ್ರಧಾನ ಕ್ಷೇತ್ರಿಯ ಬಚತ್ ಯೋಜನೆಯ ಹಿರಿಯ ಏಜೆಂಟರಾದ  ವಿಜಯಾ ಪೈ ಅವರನ್ನು ಸಂಮಾನಿಸಲಾಗಿತ್ತು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror