ಸುದ್ದಿಗಳು

“ಅಂಚೆ ವ್ಯವಸ್ಥೆಯನ್ನು ಗಟ್ಟಿಗೊಳಿಸುವುದು ನಾಗರಿಕರ ಹೊಣೆ” – ನಾ. ಕಾರಂತ ಪೆರಾಜೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

“ತಂತ್ರಜ್ಞಾನಗಳು ಬೆರಳ ತುದಿಯಲ್ಲಿರುವ ಕಾಲಘಟ್ಟದಲ್ಲಿ ಭಾರತೀಯ ಅಂಚೆ ಸೇವೆಯು ಈಗಲೂ ಜನಪರವಾಗಿ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಪ್ರತಿಯೊಬ್ಬನ ಜೀವನದಲ್ಲಿಯೂ ಒಂದಲ್ಲ ಒಂದು ರೀತಿಯಲ್ಲಿ ಅಂಚೆ ಕಚೇರಿಯ ಸಂಪರ್ಕ, ಸ್ಪಂದನಗಳು ಜೀವಂತವಾಗಿವೆ. ನಗರಕ್ಕೂ ಹಳ್ಳಿಗೂ ಸಂವಹನ ಮಾಧ್ಯಮವಾಗಿ ಅಂಚೆ ಕಚೇರಿಯು ಕಾರ್ಯವೆಸಗುತ್ತಿದೆ. ಹಾಗಾಗಿ ಬದುಕಿನೊಂದಿಗೆ ಹೊಸೆದಿರುವ ಅಂಚೆ ವ್ಯವಸ್ಥೆಯನ್ನು ಪ್ರೋತ್ಸಾಹಿಸುವುದು ನಾಗರಿಕರ ಹೊಣೆಯಾಗಿದೆ,” ಎಂದು ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ. ಕಾರಂತ ಪೆರಾಜೆ ಹೇಳಿದರು.

Advertisement

ಅವರು ಪುತ್ತೂರು ಪ್ರಧಾನ ಅಂಚೆ ಕಚೇರಿಯಲ್ಲಿ ಜರುಗಿದ ‘ಮೆಯಿಲ್ ಡೇ’ ಸಂಭ್ರಮದಲ್ಲಿ ಮಾತನಾಡುತ್ತಾ, “ಸಾಹಿತ್ಯ ಕ್ಷೇತ್ರದ ಹಿರಿಯರಿಗೆಲ್ಲಾ ಅಂಚೆ ಇಲಾಖೆಯ ಸಂಪರ್ಕ ನಿಕಟವಾಗಿದ್ದು, ಸಾಹಿತ್ಯ ಹಾಗೂ ಅಂಚೆ ಒಂದೇ ಮನೆಯ ಸದಸ್ಯರಿದ್ದಂತೆ’ ಎಂದ ಕಳೆದ ಮೂವತ್ತನಾಲ್ಕು ವರುಷದಿಂದ ಅಡಿಕೆ ಪತ್ರಿಕೆ ಮತ್ತು ಅಂಚೆ ಕಚೇರಿಯ ಬಾಂಧವ್ಯವನ್ನು ನೆನಪಿಸಿಕೊಂಡರು.

ಈ ಸಂದರ್ಭದಲ್ಲಿ ‘ಪೂವರಿ’ ತುಳು ಮಾಸಿಕದ ಸಂಪಾದಕ ವಿಜಯಕುಮಾರ್ ಹೆಬ್ಬಾರಬೈಲು ಅವರನ್ನು ಕೂಡಾ ಗೌರವಿಸಲಾಯಿತು. ಅವರು ಅಂಚೆ ಇಲಾಖೆಯ ಕಾರ್ಯತತ್ಪರತೆಯನ್ನು ಶ್ಲಾಘಿಸಿದರು. ಅಂಚೆ ವ್ಯವಸ್ಥೆಯನ್ನು ಅತಿ ಹೆಚ್ಚಾಗಿ ಬಳಸುತ್ತಿರುವ ಎರಡೂ ಪತ್ರಿಕೆಗಳ ಸಂಪಾದಕರುಗಳನ್ನು ಪ್ರಧಾನ ಅಂಚೆ ಪಾಲಕರಾದ ತೀರ್ಥಪ್ರಸಾದ್ ಎಸ್. ಇವರು ಶಾಲು, ಫಲಪುಷ್ಪ ನೀಡಿ ಗೌರವಿಸಿ ಸಂದರ್ಭೋಚಿತವಾಗಿ ಮಾತನಾಡಿದರು.

ಉಪ ಅಂಚೆಪಾಲಕರಾದ ಗಾಯತ್ರೀ ಕೆ. ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿದರು. ಎಲ್ಲಾ ಸಹಾಯಕ ಅಂಚೆಪಾಲಕರು, ಕಚೇರಿ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬ್ಯಾಂಕಿಂಗ್ ಡೇ ಪ್ರಯುಕ್ತ ಮಹಿಳಾ ಪ್ರಧಾನ ಕ್ಷೇತ್ರಿಯ ಬಚತ್ ಯೋಜನೆಯ ಹಿರಿಯ ಏಜೆಂಟರಾದ  ವಿಜಯಾ ಪೈ ಅವರನ್ನು ಸಂಮಾನಿಸಲಾಗಿತ್ತು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

54 minutes ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

1 hour ago

ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಹೊಸರುಚಿ | ಗುಜ್ಜೆ ಸುಕ್ಕಾ

ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ ಚಿಕ್ಕ ದಾಗಿ ಕಟ್…

3 hours ago

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

1 day ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

1 day ago