Advertisement
ಸುದ್ದಿಗಳು

“ಅಂಚೆ ವ್ಯವಸ್ಥೆಯನ್ನು ಗಟ್ಟಿಗೊಳಿಸುವುದು ನಾಗರಿಕರ ಹೊಣೆ” – ನಾ. ಕಾರಂತ ಪೆರಾಜೆ

Share

“ತಂತ್ರಜ್ಞಾನಗಳು ಬೆರಳ ತುದಿಯಲ್ಲಿರುವ ಕಾಲಘಟ್ಟದಲ್ಲಿ ಭಾರತೀಯ ಅಂಚೆ ಸೇವೆಯು ಈಗಲೂ ಜನಪರವಾಗಿ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಪ್ರತಿಯೊಬ್ಬನ ಜೀವನದಲ್ಲಿಯೂ ಒಂದಲ್ಲ ಒಂದು ರೀತಿಯಲ್ಲಿ ಅಂಚೆ ಕಚೇರಿಯ ಸಂಪರ್ಕ, ಸ್ಪಂದನಗಳು ಜೀವಂತವಾಗಿವೆ. ನಗರಕ್ಕೂ ಹಳ್ಳಿಗೂ ಸಂವಹನ ಮಾಧ್ಯಮವಾಗಿ ಅಂಚೆ ಕಚೇರಿಯು ಕಾರ್ಯವೆಸಗುತ್ತಿದೆ. ಹಾಗಾಗಿ ಬದುಕಿನೊಂದಿಗೆ ಹೊಸೆದಿರುವ ಅಂಚೆ ವ್ಯವಸ್ಥೆಯನ್ನು ಪ್ರೋತ್ಸಾಹಿಸುವುದು ನಾಗರಿಕರ ಹೊಣೆಯಾಗಿದೆ,” ಎಂದು ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ. ಕಾರಂತ ಪೆರಾಜೆ ಹೇಳಿದರು.

ಅವರು ಪುತ್ತೂರು ಪ್ರಧಾನ ಅಂಚೆ ಕಚೇರಿಯಲ್ಲಿ ಜರುಗಿದ ‘ಮೆಯಿಲ್ ಡೇ’ ಸಂಭ್ರಮದಲ್ಲಿ ಮಾತನಾಡುತ್ತಾ, “ಸಾಹಿತ್ಯ ಕ್ಷೇತ್ರದ ಹಿರಿಯರಿಗೆಲ್ಲಾ ಅಂಚೆ ಇಲಾಖೆಯ ಸಂಪರ್ಕ ನಿಕಟವಾಗಿದ್ದು, ಸಾಹಿತ್ಯ ಹಾಗೂ ಅಂಚೆ ಒಂದೇ ಮನೆಯ ಸದಸ್ಯರಿದ್ದಂತೆ’ ಎಂದ ಕಳೆದ ಮೂವತ್ತನಾಲ್ಕು ವರುಷದಿಂದ ಅಡಿಕೆ ಪತ್ರಿಕೆ ಮತ್ತು ಅಂಚೆ ಕಚೇರಿಯ ಬಾಂಧವ್ಯವನ್ನು ನೆನಪಿಸಿಕೊಂಡರು.

ಈ ಸಂದರ್ಭದಲ್ಲಿ ‘ಪೂವರಿ’ ತುಳು ಮಾಸಿಕದ ಸಂಪಾದಕ ವಿಜಯಕುಮಾರ್ ಹೆಬ್ಬಾರಬೈಲು ಅವರನ್ನು ಕೂಡಾ ಗೌರವಿಸಲಾಯಿತು. ಅವರು ಅಂಚೆ ಇಲಾಖೆಯ ಕಾರ್ಯತತ್ಪರತೆಯನ್ನು ಶ್ಲಾಘಿಸಿದರು. ಅಂಚೆ ವ್ಯವಸ್ಥೆಯನ್ನು ಅತಿ ಹೆಚ್ಚಾಗಿ ಬಳಸುತ್ತಿರುವ ಎರಡೂ ಪತ್ರಿಕೆಗಳ ಸಂಪಾದಕರುಗಳನ್ನು ಪ್ರಧಾನ ಅಂಚೆ ಪಾಲಕರಾದ ತೀರ್ಥಪ್ರಸಾದ್ ಎಸ್. ಇವರು ಶಾಲು, ಫಲಪುಷ್ಪ ನೀಡಿ ಗೌರವಿಸಿ ಸಂದರ್ಭೋಚಿತವಾಗಿ ಮಾತನಾಡಿದರು.

ಉಪ ಅಂಚೆಪಾಲಕರಾದ ಗಾಯತ್ರೀ ಕೆ. ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿದರು. ಎಲ್ಲಾ ಸಹಾಯಕ ಅಂಚೆಪಾಲಕರು, ಕಚೇರಿ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬ್ಯಾಂಕಿಂಗ್ ಡೇ ಪ್ರಯುಕ್ತ ಮಹಿಳಾ ಪ್ರಧಾನ ಕ್ಷೇತ್ರಿಯ ಬಚತ್ ಯೋಜನೆಯ ಹಿರಿಯ ಏಜೆಂಟರಾದ  ವಿಜಯಾ ಪೈ ಅವರನ್ನು ಸಂಮಾನಿಸಲಾಗಿತ್ತು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

17 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

21 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago