Advertisement
ಸುದ್ದಿಗಳು

“ಅಂಚೆ ವ್ಯವಸ್ಥೆಯನ್ನು ಗಟ್ಟಿಗೊಳಿಸುವುದು ನಾಗರಿಕರ ಹೊಣೆ” – ನಾ. ಕಾರಂತ ಪೆರಾಜೆ

Share

“ತಂತ್ರಜ್ಞಾನಗಳು ಬೆರಳ ತುದಿಯಲ್ಲಿರುವ ಕಾಲಘಟ್ಟದಲ್ಲಿ ಭಾರತೀಯ ಅಂಚೆ ಸೇವೆಯು ಈಗಲೂ ಜನಪರವಾಗಿ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಪ್ರತಿಯೊಬ್ಬನ ಜೀವನದಲ್ಲಿಯೂ ಒಂದಲ್ಲ ಒಂದು ರೀತಿಯಲ್ಲಿ ಅಂಚೆ ಕಚೇರಿಯ ಸಂಪರ್ಕ, ಸ್ಪಂದನಗಳು ಜೀವಂತವಾಗಿವೆ. ನಗರಕ್ಕೂ ಹಳ್ಳಿಗೂ ಸಂವಹನ ಮಾಧ್ಯಮವಾಗಿ ಅಂಚೆ ಕಚೇರಿಯು ಕಾರ್ಯವೆಸಗುತ್ತಿದೆ. ಹಾಗಾಗಿ ಬದುಕಿನೊಂದಿಗೆ ಹೊಸೆದಿರುವ ಅಂಚೆ ವ್ಯವಸ್ಥೆಯನ್ನು ಪ್ರೋತ್ಸಾಹಿಸುವುದು ನಾಗರಿಕರ ಹೊಣೆಯಾಗಿದೆ,” ಎಂದು ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ. ಕಾರಂತ ಪೆರಾಜೆ ಹೇಳಿದರು.

Advertisement
Advertisement

ಅವರು ಪುತ್ತೂರು ಪ್ರಧಾನ ಅಂಚೆ ಕಚೇರಿಯಲ್ಲಿ ಜರುಗಿದ ‘ಮೆಯಿಲ್ ಡೇ’ ಸಂಭ್ರಮದಲ್ಲಿ ಮಾತನಾಡುತ್ತಾ, “ಸಾಹಿತ್ಯ ಕ್ಷೇತ್ರದ ಹಿರಿಯರಿಗೆಲ್ಲಾ ಅಂಚೆ ಇಲಾಖೆಯ ಸಂಪರ್ಕ ನಿಕಟವಾಗಿದ್ದು, ಸಾಹಿತ್ಯ ಹಾಗೂ ಅಂಚೆ ಒಂದೇ ಮನೆಯ ಸದಸ್ಯರಿದ್ದಂತೆ’ ಎಂದ ಕಳೆದ ಮೂವತ್ತನಾಲ್ಕು ವರುಷದಿಂದ ಅಡಿಕೆ ಪತ್ರಿಕೆ ಮತ್ತು ಅಂಚೆ ಕಚೇರಿಯ ಬಾಂಧವ್ಯವನ್ನು ನೆನಪಿಸಿಕೊಂಡರು.

Advertisement

ಈ ಸಂದರ್ಭದಲ್ಲಿ ‘ಪೂವರಿ’ ತುಳು ಮಾಸಿಕದ ಸಂಪಾದಕ ವಿಜಯಕುಮಾರ್ ಹೆಬ್ಬಾರಬೈಲು ಅವರನ್ನು ಕೂಡಾ ಗೌರವಿಸಲಾಯಿತು. ಅವರು ಅಂಚೆ ಇಲಾಖೆಯ ಕಾರ್ಯತತ್ಪರತೆಯನ್ನು ಶ್ಲಾಘಿಸಿದರು. ಅಂಚೆ ವ್ಯವಸ್ಥೆಯನ್ನು ಅತಿ ಹೆಚ್ಚಾಗಿ ಬಳಸುತ್ತಿರುವ ಎರಡೂ ಪತ್ರಿಕೆಗಳ ಸಂಪಾದಕರುಗಳನ್ನು ಪ್ರಧಾನ ಅಂಚೆ ಪಾಲಕರಾದ ತೀರ್ಥಪ್ರಸಾದ್ ಎಸ್. ಇವರು ಶಾಲು, ಫಲಪುಷ್ಪ ನೀಡಿ ಗೌರವಿಸಿ ಸಂದರ್ಭೋಚಿತವಾಗಿ ಮಾತನಾಡಿದರು.

ಉಪ ಅಂಚೆಪಾಲಕರಾದ ಗಾಯತ್ರೀ ಕೆ. ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿದರು. ಎಲ್ಲಾ ಸಹಾಯಕ ಅಂಚೆಪಾಲಕರು, ಕಚೇರಿ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement

ಬ್ಯಾಂಕಿಂಗ್ ಡೇ ಪ್ರಯುಕ್ತ ಮಹಿಳಾ ಪ್ರಧಾನ ಕ್ಷೇತ್ರಿಯ ಬಚತ್ ಯೋಜನೆಯ ಹಿರಿಯ ಏಜೆಂಟರಾದ  ವಿಜಯಾ ಪೈ ಅವರನ್ನು ಸಂಮಾನಿಸಲಾಗಿತ್ತು

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

45 mins ago

ವಾರದ ಅತಿಥಿ | ರಾಜಕಾರಣದಲ್ಲಿ “ನೈತಿಕ ಮೌಲ್ಯ” ತುಂಬಬೇಕು | ಸಮಾಜದಲ್ಲಿ”ಅನೇಕಾಂತವಾದ” ಬೆಳೆಯಬೇಕು |

ರಾಜಕಾರಣದಲ್ಲಿ ನೈತಿಕ ಮೌಲ್ಯ ತುಂಬಬೇಕಾದ್ದು ಏಕೆ ? ಸಮಾಜದಲ್ಲಿ ಸಾಮರಸ್ಯ ಮೂಡಲು ಏನು…

2 hours ago

ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ

ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.

3 hours ago

Karnataka Weather | 28-04-2024 | ರಾಜ್ಯದಲ್ಲಿ ಒಣ ಹವೆ | ಕರಾವಳಿ ಜಿಲ್ಲೆಗಳಲ್ಲಿ ಮೋಡ |

ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.

4 hours ago

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

18 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

1 day ago