ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ | ಅಂಚೆ ಇಲಾಖೆಯಿಂದ 6 ವರ್ಷಗಳಿಂದ ಯಶಸ್ವಿ | ದೆಹಲಿಯವರೆಗೂ ಮಾವಿನಹಣ್ಣು ರವಾನೆ |

April 23, 2025
11:24 AM
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.

ಭಾರತೀಯ ಅಂಚೆ ಇಲಾಖೆ, ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮ ನಿಯಮಿತದೊಂದಿಗೆ ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ ಮಾಡುವ ಆರನೇ ವರ್ಷದ ಯೋಜನೆಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಜಿ.ನಾಗರಾಜು  ಬೆಂಗಳೂರಿನಲ್ಲಿ ಚಾಲನೆ ನೀಡಿದರು.…..ಮುಂದೆ ಓದಿ….

ಈ ಸಂದರ್ಭ ಮಾತನಾಡಿದ ಎಸ್.ರಾಜೇಂದ್ರ ಕುಮಾರ್, ರೈತರಿಂದ ನೇರವಾಗಿ ಮಾರಾಟ ಮಾಡುವ ಈ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಈ ವರ್ಷದಿಂದ ಮುಂಬೈ, ದೆಹಲಿ ಇತ್ಯಾದಿ ರಾಜ್ಯಗಳಿಗೂ ವಿಮಾನದ ಮೂಲಕ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.

ಬೆಂಗಳೂರು ಮುಖ್ಯಾಲಯ ಕ್ಷೇತ್ರದ ಅಂಚೆ ಸೇವೆಗಳ ನಿರ್ದೇಶಕಿ ವಿ.ತಾರಾ ಮಾತನಾಡಿ , ಯೋಜನೆಯ ಆರಂಭದಲ್ಲಿ ಹಲವು ಸಮಸ್ಯೆ ಇದ್ದವು. ಈಗ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

“ದ ರೂರಲ್‌ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

ಡಾ.  ಸಿ.ಜಿ.ನಾಗರಾಜು, ರೈತರಿಂದ ನೇರವಾಗಿ ಗ್ರಾಹಕರಿಗೆ ತಾಜಾ ಮಾವಿನ ಹಣ್ಣು ಮಾರಾಟ ಮಾಡುವ ಮೂಲಕ ಬೆಳೆಗಾರರ  ನೆರವಿಗೆ ಬರಬೇಕು ಎನ್ನುವ ಉದ್ದೇಶದಿಂದ ಕಳೆದ ಆರು ವರ್ಷಗಳಿಂದ ನೇರವಾಗಿ  ಗ್ರಾಹಕರಿಗೆ  ಮಾವು ಮಾರಾಟ ಮಾಡುವ ಯೋಜನೆ ಇದಾಗಿದ್ದು, ಈ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ತಿಳಿಸಿದರು.

ಮಾವು ಬೆಳಗಾರರು ಈ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು , ಅಂಚೆ ಇಲಾಖೆ ಅನ್ ಲೈನ್  ಪೋರ್ಟಲ್ ಮೂಲಕ ಆರಂಭಿಸಿರುವ ನೇರ ಮಾರಾಟದಿಂದ ಸಾಕಷ್ಟು ಅನುಕೂಲವಾಗಿದೆ. ಗ್ರಾಹಕರ ಸಂಖ್ಯೆ ದುಪ್ಪಟ್ಟಾಗಿದೆ. ಮಾವಿನ ಹಣ್ಣಿನ ಜೊತೆಗೆ ಹುಣಸೆ ಹಣ್ಣು ಸೇರಿದಂತೆ ವಿವಿಧ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದರು.

“ದ ರೂರಲ್‌ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror