ಭಾರತೀಯ ಅಂಚೆ ಇಲಾಖೆ, ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮ ನಿಯಮಿತದೊಂದಿಗೆ ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ ಮಾಡುವ ಆರನೇ ವರ್ಷದ ಯೋಜನೆಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಜಿ.ನಾಗರಾಜು ಬೆಂಗಳೂರಿನಲ್ಲಿ ಚಾಲನೆ ನೀಡಿದರು.…..ಮುಂದೆ ಓದಿ….
ಈ ಸಂದರ್ಭ ಮಾತನಾಡಿದ ಎಸ್.ರಾಜೇಂದ್ರ ಕುಮಾರ್, ರೈತರಿಂದ ನೇರವಾಗಿ ಮಾರಾಟ ಮಾಡುವ ಈ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಈ ವರ್ಷದಿಂದ ಮುಂಬೈ, ದೆಹಲಿ ಇತ್ಯಾದಿ ರಾಜ್ಯಗಳಿಗೂ ವಿಮಾನದ ಮೂಲಕ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು ಮುಖ್ಯಾಲಯ ಕ್ಷೇತ್ರದ ಅಂಚೆ ಸೇವೆಗಳ ನಿರ್ದೇಶಕಿ ವಿ.ತಾರಾ ಮಾತನಾಡಿ , ಯೋಜನೆಯ ಆರಂಭದಲ್ಲಿ ಹಲವು ಸಮಸ್ಯೆ ಇದ್ದವು. ಈಗ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
“ದ ರೂರಲ್ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ..
ಡಾ. ಸಿ.ಜಿ.ನಾಗರಾಜು, ರೈತರಿಂದ ನೇರವಾಗಿ ಗ್ರಾಹಕರಿಗೆ ತಾಜಾ ಮಾವಿನ ಹಣ್ಣು ಮಾರಾಟ ಮಾಡುವ ಮೂಲಕ ಬೆಳೆಗಾರರ ನೆರವಿಗೆ ಬರಬೇಕು ಎನ್ನುವ ಉದ್ದೇಶದಿಂದ ಕಳೆದ ಆರು ವರ್ಷಗಳಿಂದ ನೇರವಾಗಿ ಗ್ರಾಹಕರಿಗೆ ಮಾವು ಮಾರಾಟ ಮಾಡುವ ಯೋಜನೆ ಇದಾಗಿದ್ದು, ಈ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ತಿಳಿಸಿದರು.
ಮಾವು ಬೆಳಗಾರರು ಈ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು , ಅಂಚೆ ಇಲಾಖೆ ಅನ್ ಲೈನ್ ಪೋರ್ಟಲ್ ಮೂಲಕ ಆರಂಭಿಸಿರುವ ನೇರ ಮಾರಾಟದಿಂದ ಸಾಕಷ್ಟು ಅನುಕೂಲವಾಗಿದೆ. ಗ್ರಾಹಕರ ಸಂಖ್ಯೆ ದುಪ್ಪಟ್ಟಾಗಿದೆ. ಮಾವಿನ ಹಣ್ಣಿನ ಜೊತೆಗೆ ಹುಣಸೆ ಹಣ್ಣು ಸೇರಿದಂತೆ ವಿವಿಧ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದರು.
“ದ ರೂರಲ್ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ..
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…