Advertisement
MIRROR FOCUS

ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ | ಅಂಚೆ ಇಲಾಖೆಯಿಂದ 6 ವರ್ಷಗಳಿಂದ ಯಶಸ್ವಿ | ದೆಹಲಿಯವರೆಗೂ ಮಾವಿನಹಣ್ಣು ರವಾನೆ |

Share

ಭಾರತೀಯ ಅಂಚೆ ಇಲಾಖೆ, ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮ ನಿಯಮಿತದೊಂದಿಗೆ ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ ಮಾಡುವ ಆರನೇ ವರ್ಷದ ಯೋಜನೆಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಜಿ.ನಾಗರಾಜು  ಬೆಂಗಳೂರಿನಲ್ಲಿ ಚಾಲನೆ ನೀಡಿದರು.…..ಮುಂದೆ ಓದಿ….

ಈ ಸಂದರ್ಭ ಮಾತನಾಡಿದ ಎಸ್.ರಾಜೇಂದ್ರ ಕುಮಾರ್, ರೈತರಿಂದ ನೇರವಾಗಿ ಮಾರಾಟ ಮಾಡುವ ಈ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಈ ವರ್ಷದಿಂದ ಮುಂಬೈ, ದೆಹಲಿ ಇತ್ಯಾದಿ ರಾಜ್ಯಗಳಿಗೂ ವಿಮಾನದ ಮೂಲಕ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.

ಬೆಂಗಳೂರು ಮುಖ್ಯಾಲಯ ಕ್ಷೇತ್ರದ ಅಂಚೆ ಸೇವೆಗಳ ನಿರ್ದೇಶಕಿ ವಿ.ತಾರಾ ಮಾತನಾಡಿ , ಯೋಜನೆಯ ಆರಂಭದಲ್ಲಿ ಹಲವು ಸಮಸ್ಯೆ ಇದ್ದವು. ಈಗ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

“ದ ರೂರಲ್‌ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

ಡಾ.  ಸಿ.ಜಿ.ನಾಗರಾಜು, ರೈತರಿಂದ ನೇರವಾಗಿ ಗ್ರಾಹಕರಿಗೆ ತಾಜಾ ಮಾವಿನ ಹಣ್ಣು ಮಾರಾಟ ಮಾಡುವ ಮೂಲಕ ಬೆಳೆಗಾರರ  ನೆರವಿಗೆ ಬರಬೇಕು ಎನ್ನುವ ಉದ್ದೇಶದಿಂದ ಕಳೆದ ಆರು ವರ್ಷಗಳಿಂದ ನೇರವಾಗಿ  ಗ್ರಾಹಕರಿಗೆ  ಮಾವು ಮಾರಾಟ ಮಾಡುವ ಯೋಜನೆ ಇದಾಗಿದ್ದು, ಈ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ತಿಳಿಸಿದರು.

ಮಾವು ಬೆಳಗಾರರು ಈ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು , ಅಂಚೆ ಇಲಾಖೆ ಅನ್ ಲೈನ್  ಪೋರ್ಟಲ್ ಮೂಲಕ ಆರಂಭಿಸಿರುವ ನೇರ ಮಾರಾಟದಿಂದ ಸಾಕಷ್ಟು ಅನುಕೂಲವಾಗಿದೆ. ಗ್ರಾಹಕರ ಸಂಖ್ಯೆ ದುಪ್ಪಟ್ಟಾಗಿದೆ. ಮಾವಿನ ಹಣ್ಣಿನ ಜೊತೆಗೆ ಹುಣಸೆ ಹಣ್ಣು ಸೇರಿದಂತೆ ವಿವಿಧ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದರು.

“ದ ರೂರಲ್‌ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

19 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

22 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

23 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

1 day ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

1 day ago