ಭಾರತೀಯ ಅಂಚೆ ಇಲಾಖೆ, ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮ ನಿಯಮಿತದೊಂದಿಗೆ ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ ಮಾಡುವ ಆರನೇ ವರ್ಷದ ಯೋಜನೆಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಜಿ.ನಾಗರಾಜು ಬೆಂಗಳೂರಿನಲ್ಲಿ ಚಾಲನೆ ನೀಡಿದರು.…..ಮುಂದೆ ಓದಿ….
ಈ ಸಂದರ್ಭ ಮಾತನಾಡಿದ ಎಸ್.ರಾಜೇಂದ್ರ ಕುಮಾರ್, ರೈತರಿಂದ ನೇರವಾಗಿ ಮಾರಾಟ ಮಾಡುವ ಈ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಈ ವರ್ಷದಿಂದ ಮುಂಬೈ, ದೆಹಲಿ ಇತ್ಯಾದಿ ರಾಜ್ಯಗಳಿಗೂ ವಿಮಾನದ ಮೂಲಕ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು ಮುಖ್ಯಾಲಯ ಕ್ಷೇತ್ರದ ಅಂಚೆ ಸೇವೆಗಳ ನಿರ್ದೇಶಕಿ ವಿ.ತಾರಾ ಮಾತನಾಡಿ , ಯೋಜನೆಯ ಆರಂಭದಲ್ಲಿ ಹಲವು ಸಮಸ್ಯೆ ಇದ್ದವು. ಈಗ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
“ದ ರೂರಲ್ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ..
ಡಾ. ಸಿ.ಜಿ.ನಾಗರಾಜು, ರೈತರಿಂದ ನೇರವಾಗಿ ಗ್ರಾಹಕರಿಗೆ ತಾಜಾ ಮಾವಿನ ಹಣ್ಣು ಮಾರಾಟ ಮಾಡುವ ಮೂಲಕ ಬೆಳೆಗಾರರ ನೆರವಿಗೆ ಬರಬೇಕು ಎನ್ನುವ ಉದ್ದೇಶದಿಂದ ಕಳೆದ ಆರು ವರ್ಷಗಳಿಂದ ನೇರವಾಗಿ ಗ್ರಾಹಕರಿಗೆ ಮಾವು ಮಾರಾಟ ಮಾಡುವ ಯೋಜನೆ ಇದಾಗಿದ್ದು, ಈ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ತಿಳಿಸಿದರು.
ಮಾವು ಬೆಳಗಾರರು ಈ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು , ಅಂಚೆ ಇಲಾಖೆ ಅನ್ ಲೈನ್ ಪೋರ್ಟಲ್ ಮೂಲಕ ಆರಂಭಿಸಿರುವ ನೇರ ಮಾರಾಟದಿಂದ ಸಾಕಷ್ಟು ಅನುಕೂಲವಾಗಿದೆ. ಗ್ರಾಹಕರ ಸಂಖ್ಯೆ ದುಪ್ಪಟ್ಟಾಗಿದೆ. ಮಾವಿನ ಹಣ್ಣಿನ ಜೊತೆಗೆ ಹುಣಸೆ ಹಣ್ಣು ಸೇರಿದಂತೆ ವಿವಿಧ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದರು.
“ದ ರೂರಲ್ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ..
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…