Advertisement
MIRROR FOCUS

ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ | ಅಂಚೆ ಇಲಾಖೆಯಿಂದ 6 ವರ್ಷಗಳಿಂದ ಯಶಸ್ವಿ | ದೆಹಲಿಯವರೆಗೂ ಮಾವಿನಹಣ್ಣು ರವಾನೆ |

Share

ಭಾರತೀಯ ಅಂಚೆ ಇಲಾಖೆ, ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮ ನಿಯಮಿತದೊಂದಿಗೆ ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ ಮಾಡುವ ಆರನೇ ವರ್ಷದ ಯೋಜನೆಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಜಿ.ನಾಗರಾಜು  ಬೆಂಗಳೂರಿನಲ್ಲಿ ಚಾಲನೆ ನೀಡಿದರು.…..ಮುಂದೆ ಓದಿ….

ಈ ಸಂದರ್ಭ ಮಾತನಾಡಿದ ಎಸ್.ರಾಜೇಂದ್ರ ಕುಮಾರ್, ರೈತರಿಂದ ನೇರವಾಗಿ ಮಾರಾಟ ಮಾಡುವ ಈ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಈ ವರ್ಷದಿಂದ ಮುಂಬೈ, ದೆಹಲಿ ಇತ್ಯಾದಿ ರಾಜ್ಯಗಳಿಗೂ ವಿಮಾನದ ಮೂಲಕ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.

ಬೆಂಗಳೂರು ಮುಖ್ಯಾಲಯ ಕ್ಷೇತ್ರದ ಅಂಚೆ ಸೇವೆಗಳ ನಿರ್ದೇಶಕಿ ವಿ.ತಾರಾ ಮಾತನಾಡಿ , ಯೋಜನೆಯ ಆರಂಭದಲ್ಲಿ ಹಲವು ಸಮಸ್ಯೆ ಇದ್ದವು. ಈಗ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

“ದ ರೂರಲ್‌ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

ಡಾ.  ಸಿ.ಜಿ.ನಾಗರಾಜು, ರೈತರಿಂದ ನೇರವಾಗಿ ಗ್ರಾಹಕರಿಗೆ ತಾಜಾ ಮಾವಿನ ಹಣ್ಣು ಮಾರಾಟ ಮಾಡುವ ಮೂಲಕ ಬೆಳೆಗಾರರ  ನೆರವಿಗೆ ಬರಬೇಕು ಎನ್ನುವ ಉದ್ದೇಶದಿಂದ ಕಳೆದ ಆರು ವರ್ಷಗಳಿಂದ ನೇರವಾಗಿ  ಗ್ರಾಹಕರಿಗೆ  ಮಾವು ಮಾರಾಟ ಮಾಡುವ ಯೋಜನೆ ಇದಾಗಿದ್ದು, ಈ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ತಿಳಿಸಿದರು.

ಮಾವು ಬೆಳಗಾರರು ಈ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು , ಅಂಚೆ ಇಲಾಖೆ ಅನ್ ಲೈನ್  ಪೋರ್ಟಲ್ ಮೂಲಕ ಆರಂಭಿಸಿರುವ ನೇರ ಮಾರಾಟದಿಂದ ಸಾಕಷ್ಟು ಅನುಕೂಲವಾಗಿದೆ. ಗ್ರಾಹಕರ ಸಂಖ್ಯೆ ದುಪ್ಪಟ್ಟಾಗಿದೆ. ಮಾವಿನ ಹಣ್ಣಿನ ಜೊತೆಗೆ ಹುಣಸೆ ಹಣ್ಣು ಸೇರಿದಂತೆ ವಿವಿಧ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದರು.

“ದ ರೂರಲ್‌ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

2 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

8 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

9 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

17 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

19 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

1 day ago