ಭಾರತೀಯ ಅಂಚೆ ಇಲಾಖೆ, ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮ ನಿಯಮಿತದೊಂದಿಗೆ ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ ಮಾಡುವ ಆರನೇ ವರ್ಷದ ಯೋಜನೆಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಜಿ.ನಾಗರಾಜು ಬೆಂಗಳೂರಿನಲ್ಲಿ ಚಾಲನೆ ನೀಡಿದರು.…..ಮುಂದೆ ಓದಿ….
ಈ ಸಂದರ್ಭ ಮಾತನಾಡಿದ ಎಸ್.ರಾಜೇಂದ್ರ ಕುಮಾರ್, ರೈತರಿಂದ ನೇರವಾಗಿ ಮಾರಾಟ ಮಾಡುವ ಈ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಈ ವರ್ಷದಿಂದ ಮುಂಬೈ, ದೆಹಲಿ ಇತ್ಯಾದಿ ರಾಜ್ಯಗಳಿಗೂ ವಿಮಾನದ ಮೂಲಕ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು ಮುಖ್ಯಾಲಯ ಕ್ಷೇತ್ರದ ಅಂಚೆ ಸೇವೆಗಳ ನಿರ್ದೇಶಕಿ ವಿ.ತಾರಾ ಮಾತನಾಡಿ , ಯೋಜನೆಯ ಆರಂಭದಲ್ಲಿ ಹಲವು ಸಮಸ್ಯೆ ಇದ್ದವು. ಈಗ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
“ದ ರೂರಲ್ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ..
ಡಾ. ಸಿ.ಜಿ.ನಾಗರಾಜು, ರೈತರಿಂದ ನೇರವಾಗಿ ಗ್ರಾಹಕರಿಗೆ ತಾಜಾ ಮಾವಿನ ಹಣ್ಣು ಮಾರಾಟ ಮಾಡುವ ಮೂಲಕ ಬೆಳೆಗಾರರ ನೆರವಿಗೆ ಬರಬೇಕು ಎನ್ನುವ ಉದ್ದೇಶದಿಂದ ಕಳೆದ ಆರು ವರ್ಷಗಳಿಂದ ನೇರವಾಗಿ ಗ್ರಾಹಕರಿಗೆ ಮಾವು ಮಾರಾಟ ಮಾಡುವ ಯೋಜನೆ ಇದಾಗಿದ್ದು, ಈ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ತಿಳಿಸಿದರು.
ಮಾವು ಬೆಳಗಾರರು ಈ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು , ಅಂಚೆ ಇಲಾಖೆ ಅನ್ ಲೈನ್ ಪೋರ್ಟಲ್ ಮೂಲಕ ಆರಂಭಿಸಿರುವ ನೇರ ಮಾರಾಟದಿಂದ ಸಾಕಷ್ಟು ಅನುಕೂಲವಾಗಿದೆ. ಗ್ರಾಹಕರ ಸಂಖ್ಯೆ ದುಪ್ಪಟ್ಟಾಗಿದೆ. ಮಾವಿನ ಹಣ್ಣಿನ ಜೊತೆಗೆ ಹುಣಸೆ ಹಣ್ಣು ಸೇರಿದಂತೆ ವಿವಿಧ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದರು.
“ದ ರೂರಲ್ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ..
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…