ಭಾರತೀಯ ಅಂಚೆ ಇಲಾಖೆ, ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮ ನಿಯಮಿತದೊಂದಿಗೆ ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ ಮಾಡುವ ಆರನೇ ವರ್ಷದ ಯೋಜನೆಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಜಿ.ನಾಗರಾಜು ಬೆಂಗಳೂರಿನಲ್ಲಿ ಚಾಲನೆ ನೀಡಿದರು.…..ಮುಂದೆ ಓದಿ….
ಈ ಸಂದರ್ಭ ಮಾತನಾಡಿದ ಎಸ್.ರಾಜೇಂದ್ರ ಕುಮಾರ್, ರೈತರಿಂದ ನೇರವಾಗಿ ಮಾರಾಟ ಮಾಡುವ ಈ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಈ ವರ್ಷದಿಂದ ಮುಂಬೈ, ದೆಹಲಿ ಇತ್ಯಾದಿ ರಾಜ್ಯಗಳಿಗೂ ವಿಮಾನದ ಮೂಲಕ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು ಮುಖ್ಯಾಲಯ ಕ್ಷೇತ್ರದ ಅಂಚೆ ಸೇವೆಗಳ ನಿರ್ದೇಶಕಿ ವಿ.ತಾರಾ ಮಾತನಾಡಿ , ಯೋಜನೆಯ ಆರಂಭದಲ್ಲಿ ಹಲವು ಸಮಸ್ಯೆ ಇದ್ದವು. ಈಗ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
“ದ ರೂರಲ್ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ..
ಡಾ. ಸಿ.ಜಿ.ನಾಗರಾಜು, ರೈತರಿಂದ ನೇರವಾಗಿ ಗ್ರಾಹಕರಿಗೆ ತಾಜಾ ಮಾವಿನ ಹಣ್ಣು ಮಾರಾಟ ಮಾಡುವ ಮೂಲಕ ಬೆಳೆಗಾರರ ನೆರವಿಗೆ ಬರಬೇಕು ಎನ್ನುವ ಉದ್ದೇಶದಿಂದ ಕಳೆದ ಆರು ವರ್ಷಗಳಿಂದ ನೇರವಾಗಿ ಗ್ರಾಹಕರಿಗೆ ಮಾವು ಮಾರಾಟ ಮಾಡುವ ಯೋಜನೆ ಇದಾಗಿದ್ದು, ಈ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ತಿಳಿಸಿದರು.
ಮಾವು ಬೆಳಗಾರರು ಈ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು , ಅಂಚೆ ಇಲಾಖೆ ಅನ್ ಲೈನ್ ಪೋರ್ಟಲ್ ಮೂಲಕ ಆರಂಭಿಸಿರುವ ನೇರ ಮಾರಾಟದಿಂದ ಸಾಕಷ್ಟು ಅನುಕೂಲವಾಗಿದೆ. ಗ್ರಾಹಕರ ಸಂಖ್ಯೆ ದುಪ್ಪಟ್ಟಾಗಿದೆ. ಮಾವಿನ ಹಣ್ಣಿನ ಜೊತೆಗೆ ಹುಣಸೆ ಹಣ್ಣು ಸೇರಿದಂತೆ ವಿವಿಧ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದರು.
“ದ ರೂರಲ್ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ..
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…