Advertisement
ಸುದ್ದಿಗಳು

ಆ.25 ರಿಂದ ಅಮೆರಿಕಾಕ್ಕೆ ಅಂಚೆ ಸೇವೆ  ಸ್ಥಗಿತ

Share

ಭಾರತೀಯ ಅಂಚೆ ಇಲಾಖೆ ಆ. 25 ರಿಂದ ಅಮೆರಿಕಾಕ್ಕೆ ಅಂಚೆ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ.  ಅಂತಾರಾಷ್ಟ್ರೀಯ ಸಾಗಣೆ ಮೇಲೆ ಅಮೇರಿಕಾ ಹೊಸ ಸೀಮಾಸುಂಕಗಳನ್ನು ಪರಿಚಯಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಅಮೇರಿಕಾದ ಆಡಳಿತವು  800 ಯುಎಸ್‌ ಡಾಲರ್‌ವರೆಗಿನ ಸರಕುಗಳಿಗೆ ಸುಂಕ-ಮುಕ್ತ ಡಿ ಮಿನಿಮಿಸ್ ವಿನಾಯಿತಿಯನ್ನು ತೆಗೆದುಹಾಕುವುದಾಗಿ ಜುಲೈ 30 ರಂದು ಆದೇಶ ಹೊರಡಿಸಿತ್ತು. 100 ಯುಎಸ್ ಡಾಲರ್‌ವರೆಗಿನ ಉಡುಗೊರೆ ವಸ್ತುಗಳನ್ನು ಹೊರತುಪಡಿಸಿ ಎಲ್ಲಾ ಅಂಚೆ ವಸ್ತುಗಳೂ ಈ ಹೊಸ ಸೀಮಾಸುಂಕಗಳಿಗೆ ಒಳಪಡಲಿವೆ. ಈ ಆದೇಶ ಆಗಸ್ಟ್ 29 ರಿಂದ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಅಂಚೆ ಇಲಾಖೆ ಅಮೇರಿಕಾಕ್ಕೆ ತಾತ್ಕಾಲಿಕವಾಗಿ ಅಂಚೆ ಸೇವೆ ಸ್ಥಗಿತಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಪರಿಸ್ಥಿತಿಯನ್ನು ಅಂಚೆ ಇಲಾಖೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಆದಷ್ಟು ಬೇಗ ಈ ಸೇವೆಗಳನ್ನು ಸರಾಗಗೊಳಿಸಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಈಗಾಗಲೇ ಅಮೇರಿಕಾಕ್ಕೆ ಅಂಚೆಯನ್ನು ಕಳುಹಿಸಲು ಪಾವತಿ ಮಾಡಿರುವ ಗ್ರಾಹಕರು ಮರುಪಾವತಿಯನ್ನು ಪಡೆಯಬಹುದು, ಉಂಟಾದ ಈ ಅನಾನುಕೂಲತೆಯ ಬಗ್ಗೆ ಅಂಚೆ ಇಲಾಖೆ ವಿಷಾದ ವ್ಯಕ್ತಪಡಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

3 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

3 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago