Advertisement
ಸುದ್ದಿಗಳು

ಆ.25 ರಿಂದ ಅಮೆರಿಕಾಕ್ಕೆ ಅಂಚೆ ಸೇವೆ  ಸ್ಥಗಿತ

Share

ಭಾರತೀಯ ಅಂಚೆ ಇಲಾಖೆ ಆ. 25 ರಿಂದ ಅಮೆರಿಕಾಕ್ಕೆ ಅಂಚೆ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ.  ಅಂತಾರಾಷ್ಟ್ರೀಯ ಸಾಗಣೆ ಮೇಲೆ ಅಮೇರಿಕಾ ಹೊಸ ಸೀಮಾಸುಂಕಗಳನ್ನು ಪರಿಚಯಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಅಮೇರಿಕಾದ ಆಡಳಿತವು  800 ಯುಎಸ್‌ ಡಾಲರ್‌ವರೆಗಿನ ಸರಕುಗಳಿಗೆ ಸುಂಕ-ಮುಕ್ತ ಡಿ ಮಿನಿಮಿಸ್ ವಿನಾಯಿತಿಯನ್ನು ತೆಗೆದುಹಾಕುವುದಾಗಿ ಜುಲೈ 30 ರಂದು ಆದೇಶ ಹೊರಡಿಸಿತ್ತು. 100 ಯುಎಸ್ ಡಾಲರ್‌ವರೆಗಿನ ಉಡುಗೊರೆ ವಸ್ತುಗಳನ್ನು ಹೊರತುಪಡಿಸಿ ಎಲ್ಲಾ ಅಂಚೆ ವಸ್ತುಗಳೂ ಈ ಹೊಸ ಸೀಮಾಸುಂಕಗಳಿಗೆ ಒಳಪಡಲಿವೆ. ಈ ಆದೇಶ ಆಗಸ್ಟ್ 29 ರಿಂದ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಅಂಚೆ ಇಲಾಖೆ ಅಮೇರಿಕಾಕ್ಕೆ ತಾತ್ಕಾಲಿಕವಾಗಿ ಅಂಚೆ ಸೇವೆ ಸ್ಥಗಿತಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಪರಿಸ್ಥಿತಿಯನ್ನು ಅಂಚೆ ಇಲಾಖೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಆದಷ್ಟು ಬೇಗ ಈ ಸೇವೆಗಳನ್ನು ಸರಾಗಗೊಳಿಸಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಈಗಾಗಲೇ ಅಮೇರಿಕಾಕ್ಕೆ ಅಂಚೆಯನ್ನು ಕಳುಹಿಸಲು ಪಾವತಿ ಮಾಡಿರುವ ಗ್ರಾಹಕರು ಮರುಪಾವತಿಯನ್ನು ಪಡೆಯಬಹುದು, ಉಂಟಾದ ಈ ಅನಾನುಕೂಲತೆಯ ಬಗ್ಗೆ ಅಂಚೆ ಇಲಾಖೆ ವಿಷಾದ ವ್ಯಕ್ತಪಡಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

4 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

4 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

13 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

21 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago