ವಿಶೇಷ ವರದಿಗಳು

#Forest | 10 ಸಾವಿರಕ್ಕೂ ಅಧಿಕ ಗಿಡ ನೆಟ್ಟ “ಪವರ್‌ ಮ್ಯಾನ್”‌ | ಮಿಯಾವಾಕಿ ವಿಧಾನದಲ್ಲಿ ಕಾಡು ಬೆಳೆಸುತ್ತಿರುವ ದುರ್ಗಾಸಿಂಗ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗಿಡ ನೆಡುವುದು ಬಿಡಿ, ಗಿಡ ಉಳಿಸುವುದಕ್ಕೂ ಮನಸ್ಸು ಮಾಡದ ಯುಗ ಇದು.ಅಂತಹದ್ದರಲ್ಲಿ ನಿರಂತರ ಗಿಡ ಬೆಳೆಸುತ್ತಿರುವ ಪವರ್‌ಮ್ಯಾನ್‌ ಈಗ ಗಮನ ಸೆಳೆದಿದ್ದಾರೆ. ಸುಮಾರು 10,000 ಗಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ 10 ಕಡೆಗಳಲ್ಲಿ ಬೆಳೆಸುವ ಮೂಲಕ ವಿಶೇಷವಾದ ಪರಿಸರ ಪ್ರೇಮವನ್ನು ಬೆಳೆಸಿದ್ದಾರೆ.

Advertisement

ಅಭಿವೃದ್ಧಿಯ ಹೆಸರಿನಲ್ಲಿ ಸಾಲು ಸಾಲು ಮರಗಳನ್ನು ಕಡಿದು ನಾಶ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎನ್ನುವ ಆರೋಪದ  ನಡುವೆಯೇ  ಸಾಲು ಸಾಲು ಗಿಡಗಳನ್ನು ನೆಟ್ಟು ಅರಣ್ಯೀಕರಣ ಮಾಡಲು ಪಣತೊಟ್ಟಿದ್ದಾರೆ ದುರ್ಗಾಸಿಂಗ್. ಮೆಸ್ಕಾಂ ಇಲಾಖೆಯ ಗೋಳಿತೊಟ್ಟು ವಿಭಾಗದ ಪವರ್ ಮ್ಯಾನ್ ದುರ್ಗಾ ಸಿಂಗ್ ಈ ಸಾಧನೆಯ ರೂವಾರಿ.

ಗಿಡ ನೆಟ್ಟಿರುವ ದುರ್ಗಾಸಿಂಗ್‌ ; Photo Credit : Samarth

ಕೆಲ ವರ್ಷಗಳ ಹಿಂದೆ ವಿದ್ಯುತ್ ಇಲಾಖೆಯಿಂದ ಹೊಸ ತಂತಿಗಳ ಸಂಪರ್ಕದ ಬಗ್ಗೆ ಕಾರ್ಯಗಳು ನಡೆಯುತ್ತಿತ್ತು. ಈ ಸಂದರ್ಭ ಅನೇಕ ಮರಗಳ ತೆರವಿನ ಪರಿಸ್ಥಿತಿ ಎದುರಾಯಿತು. ಆಗ ಮರಗಳ ಅಳಿವಿನ ಬಗ್ಗೆ ಯೋಚಿಸಿದ ಪವರ್ ಮ್ಯಾನ್ ಅವುಗಳನ್ನು ಉಳಿಸುವ ಹಾಗೂ ಹೊಸದಾಗಿ ಸಸಿ ನೆಟ್ಟು ಬೆಳೆಸುವ ಬಗ್ಗೆ ಯೋಚಿಸಿದರು.‌ ಸ್ವತಃ ಇಲಾಖೆಯ ವಿರುದ್ಧವೇ ಕಾದಾಡಿ ಮರಗಳನ್ನು ರಕ್ಷಿಸಿ ವಿದ್ಯುತ್ ಕಂಬಗಳನ್ನು ಮತ್ತು ತಂತಿಗಳನ್ನು ಬೇರೆ ಕಡೆಯಿಂದ ವರ್ಗಾಯಿಸಿಕೊಂಡು ಹೋಗುವಂತೆ ಒತ್ತಾಯಿಸುತ್ತಿದ್ದರು. ಆ ಮೂಲಕ ಅವರ ಪರಿಸರ ಜಾಗೃತಿಯ ಅರಿವನ್ನು ಇತರರಿಗೆ ಮೂಡಿಸುತ್ತಿದ್ದರು. ಆ ಬಳಿಕ ಯೂಟ್ಯೂಬ್ ನಲ್ಲಿ ಮಿಯಾವಾಕಿ ಅರಣ್ಯಗಳ ಬಗ್ಗೆ ಅಧ್ಯಯನ ನಡೆಸಿದರು. ವೃತ್ತಿಯಲ್ಲಿ ಪವರ್ ಮ್ಯಾನ್ ಆಗಿರುವ ಇವರು ತಮ್ಮ ವರ್ಷದ ಆದಾಯದಲ್ಲಿ 30,000 ರೂಪಾಯಿಯನ್ನು ಈ ಪರಿಸರ ರಕ್ಷಣೆಗಾಗಿಯೇ ಮೀಸಲಿಟ್ಟಿದ್ದಾರೆ.

ಇಂದು ಹೆಚ್ಚಿನ ಎಲ್ಲಾ ಕಡೆ ಕಾಡನ್ನು ನಾಶಗೊಳಿಸುವ ವಿಚಾರಗಳೇ ಕೇಳಿ ಬರುತ್ತಿರುವ ನಡುವೆ ದುರ್ಗಾ ಸಿಂಗ್ ಮಾಡುತ್ತಿರುವ ಮಿಯವಾಕಿ ಪದ್ಧತಿಯ ಅರಣ್ಯೀಕರಣ ಮಾದರಿ ಕಾರ್ಯವಾಗಿದೆ. ತಮಗೆ ಲಭ್ಯ ಇರುವ ಜಾಗದಲ್ಲಿ ಅನೇಕ ಪ್ರಭೇದಗಳ ಅತಿ ಹೆಚ್ಚು ಗಿಡಗಳನ್ನು ನೆಟ್ಟು ಮನುಷ್ಯರಿಗೆ ಮಾತ್ರವಲ್ಲದೆ ಪ್ರಾಣಿ ಪಕ್ಷಿ ಕೀಟಗಳಿಗೂ ಆಸರೆಯ ತಾಣವನ್ನು ಸೃಷ್ಟಿ ಮಾಡುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ.

ಮಿಯಾವಕಿ ಮಾದರಿ ಗಿಡಗಳು | Photo Credit : Samarth

ಜಪಾನಿನ ಸಸ್ಯಶಾಸ್ತ್ರಜ್ಞ ಅಭಿವೃದ್ಧಿಪಡಿಸಿದ ಈ ಮಿಯಾವಾಕಿ ವಿಧಾನವು ಸ್ಥಳೀಯ ಪ್ರಭೇದಗಳ ಗಿಡಗಳನ್ನು ನೆಟ್ಟು ಅಲ್ಪಸಮಯದಲ್ಲಿ ಬೆಳೆಸುವ ರೀತಿಯಾಗಿದೆ. ಮಿಯಾವಾಕಿ ವಿಧಾನವು ಸ್ಥಳೀಯ ಸಸ್ಯಗಳ ವೇಗವಾಗಿ ಬೆಳೆಯುವ ತೋಪುಗಳನ್ನು ಬೆಳೆಸಲು ಅರಣ್ಯೀಕರಣದ ತಂತ್ರವಾಗಿದೆ. ಮೂಲತಃ ಜಪಾನಿನ ಪರಿಸರಶಾಸ್ತ್ರಜ್ಞ ಅಕಿರಾ ಮಿಯಾವಾಕಿ ಅವರು ನಿಪ್ಪಾನ್ ಸ್ಟೀಲ್‌ಗಾಗಿ 1970 ರ ದಶಕದ ಆರಂಭದಲ್ಲಿ ಅಭಿವೃದ್ಧಿಪಡಿಸಿದರು, ಈ ವಿಧಾನವನ್ನು ವಿವಿಧ ಜಪಾನಿನ ನಿಗಮಗಳು ಅಳವಡಿಸಿಕೊಂಡಿವೆ.

ಕಡಿಮೆ ಜಾಗದಲ್ಲಿ ಅಕ್ಕ ಪಕ್ಕ ಗಿಡಗಳನ್ನು ನೆಡುವ ಮೂಲಕ ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವ ವಿಧಾನ ಇದಾಗಿದೆ. ನಗರೀಕರಣದ ವ್ಯಾಮೋಹದಲ್ಲಿ ಕಾಡು ನಾಶಗೊಳ್ಳುವ ಪ್ರಸ್ತುತ ಸಮಯದಲ್ಲಿ ಈ ವಿಧಾನದಿಂದಾಗಿ ಪರಿಸರದಲ್ಲಿರುವ ಇಂಗಾಲದ ಡೈ ಆಕ್ಸೈಡ್ ಅನ್ನು ಇಲ್ಲಿರುವ ಗಿಡಗಳು ಬೇಗನೆ ಹೀರಿಕೊಳ್ಳುವ ಸಾಮರ್ಥ್ಯವನ್ನು ಹೊಂದಿದ್ದು, ಆಮ್ಲಜನಕವನ್ನು ಹೊರ ಸೂಸುತ್ತವೆ. ಪರಿಸರ ಸ್ವಚ್ಛತೆಯೊಂದಿಗೆ ಪ್ರಾಣಿ ಪಕ್ಷಿಗಳಿಗೂ ಇಲ್ಲಿನ ಮರಗಳು ಆಹಾರದ ಭದ್ರತೆಯನ್ನು ನೀಡುತ್ತವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…

50 minutes ago

ಹವಾಮಾನ ವರದಿ | 24-04-2025 | ಎ.26 ರಿಂದ ರಾಜ್ಯದ ವಿವಿದೆಡೆ ಮಳೆ ಪ್ರಮಾಣ ಹೆಚ್ಚಳ |

ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.

1 hour ago

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…

16 hours ago

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ…

16 hours ago

ಬದುಕು ಕಲಿಸುವ ಪಾಠಗಳು

ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…

16 hours ago

82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago