Advertisement
ವಿಶೇಷ ವರದಿಗಳು

#Forest | 10 ಸಾವಿರಕ್ಕೂ ಅಧಿಕ ಗಿಡ ನೆಟ್ಟ “ಪವರ್‌ ಮ್ಯಾನ್”‌ | ಮಿಯಾವಾಕಿ ವಿಧಾನದಲ್ಲಿ ಕಾಡು ಬೆಳೆಸುತ್ತಿರುವ ದುರ್ಗಾಸಿಂಗ್‌ |

Share

ಗಿಡ ನೆಡುವುದು ಬಿಡಿ, ಗಿಡ ಉಳಿಸುವುದಕ್ಕೂ ಮನಸ್ಸು ಮಾಡದ ಯುಗ ಇದು.ಅಂತಹದ್ದರಲ್ಲಿ ನಿರಂತರ ಗಿಡ ಬೆಳೆಸುತ್ತಿರುವ ಪವರ್‌ಮ್ಯಾನ್‌ ಈಗ ಗಮನ ಸೆಳೆದಿದ್ದಾರೆ. ಸುಮಾರು 10,000 ಗಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ 10 ಕಡೆಗಳಲ್ಲಿ ಬೆಳೆಸುವ ಮೂಲಕ ವಿಶೇಷವಾದ ಪರಿಸರ ಪ್ರೇಮವನ್ನು ಬೆಳೆಸಿದ್ದಾರೆ.

ಅಭಿವೃದ್ಧಿಯ ಹೆಸರಿನಲ್ಲಿ ಸಾಲು ಸಾಲು ಮರಗಳನ್ನು ಕಡಿದು ನಾಶ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎನ್ನುವ ಆರೋಪದ  ನಡುವೆಯೇ  ಸಾಲು ಸಾಲು ಗಿಡಗಳನ್ನು ನೆಟ್ಟು ಅರಣ್ಯೀಕರಣ ಮಾಡಲು ಪಣತೊಟ್ಟಿದ್ದಾರೆ ದುರ್ಗಾಸಿಂಗ್. ಮೆಸ್ಕಾಂ ಇಲಾಖೆಯ ಗೋಳಿತೊಟ್ಟು ವಿಭಾಗದ ಪವರ್ ಮ್ಯಾನ್ ದುರ್ಗಾ ಸಿಂಗ್ ಈ ಸಾಧನೆಯ ರೂವಾರಿ.

ಗಿಡ ನೆಟ್ಟಿರುವ ದುರ್ಗಾಸಿಂಗ್‌ ; Photo Credit : Samarth

ಕೆಲ ವರ್ಷಗಳ ಹಿಂದೆ ವಿದ್ಯುತ್ ಇಲಾಖೆಯಿಂದ ಹೊಸ ತಂತಿಗಳ ಸಂಪರ್ಕದ ಬಗ್ಗೆ ಕಾರ್ಯಗಳು ನಡೆಯುತ್ತಿತ್ತು. ಈ ಸಂದರ್ಭ ಅನೇಕ ಮರಗಳ ತೆರವಿನ ಪರಿಸ್ಥಿತಿ ಎದುರಾಯಿತು. ಆಗ ಮರಗಳ ಅಳಿವಿನ ಬಗ್ಗೆ ಯೋಚಿಸಿದ ಪವರ್ ಮ್ಯಾನ್ ಅವುಗಳನ್ನು ಉಳಿಸುವ ಹಾಗೂ ಹೊಸದಾಗಿ ಸಸಿ ನೆಟ್ಟು ಬೆಳೆಸುವ ಬಗ್ಗೆ ಯೋಚಿಸಿದರು.‌ ಸ್ವತಃ ಇಲಾಖೆಯ ವಿರುದ್ಧವೇ ಕಾದಾಡಿ ಮರಗಳನ್ನು ರಕ್ಷಿಸಿ ವಿದ್ಯುತ್ ಕಂಬಗಳನ್ನು ಮತ್ತು ತಂತಿಗಳನ್ನು ಬೇರೆ ಕಡೆಯಿಂದ ವರ್ಗಾಯಿಸಿಕೊಂಡು ಹೋಗುವಂತೆ ಒತ್ತಾಯಿಸುತ್ತಿದ್ದರು. ಆ ಮೂಲಕ ಅವರ ಪರಿಸರ ಜಾಗೃತಿಯ ಅರಿವನ್ನು ಇತರರಿಗೆ ಮೂಡಿಸುತ್ತಿದ್ದರು. ಆ ಬಳಿಕ ಯೂಟ್ಯೂಬ್ ನಲ್ಲಿ ಮಿಯಾವಾಕಿ ಅರಣ್ಯಗಳ ಬಗ್ಗೆ ಅಧ್ಯಯನ ನಡೆಸಿದರು. ವೃತ್ತಿಯಲ್ಲಿ ಪವರ್ ಮ್ಯಾನ್ ಆಗಿರುವ ಇವರು ತಮ್ಮ ವರ್ಷದ ಆದಾಯದಲ್ಲಿ 30,000 ರೂಪಾಯಿಯನ್ನು ಈ ಪರಿಸರ ರಕ್ಷಣೆಗಾಗಿಯೇ ಮೀಸಲಿಟ್ಟಿದ್ದಾರೆ.

ಇಂದು ಹೆಚ್ಚಿನ ಎಲ್ಲಾ ಕಡೆ ಕಾಡನ್ನು ನಾಶಗೊಳಿಸುವ ವಿಚಾರಗಳೇ ಕೇಳಿ ಬರುತ್ತಿರುವ ನಡುವೆ ದುರ್ಗಾ ಸಿಂಗ್ ಮಾಡುತ್ತಿರುವ ಮಿಯವಾಕಿ ಪದ್ಧತಿಯ ಅರಣ್ಯೀಕರಣ ಮಾದರಿ ಕಾರ್ಯವಾಗಿದೆ. ತಮಗೆ ಲಭ್ಯ ಇರುವ ಜಾಗದಲ್ಲಿ ಅನೇಕ ಪ್ರಭೇದಗಳ ಅತಿ ಹೆಚ್ಚು ಗಿಡಗಳನ್ನು ನೆಟ್ಟು ಮನುಷ್ಯರಿಗೆ ಮಾತ್ರವಲ್ಲದೆ ಪ್ರಾಣಿ ಪಕ್ಷಿ ಕೀಟಗಳಿಗೂ ಆಸರೆಯ ತಾಣವನ್ನು ಸೃಷ್ಟಿ ಮಾಡುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ.

ಮಿಯಾವಕಿ ಮಾದರಿ ಗಿಡಗಳು | Photo Credit : Samarth

ಜಪಾನಿನ ಸಸ್ಯಶಾಸ್ತ್ರಜ್ಞ ಅಭಿವೃದ್ಧಿಪಡಿಸಿದ ಈ ಮಿಯಾವಾಕಿ ವಿಧಾನವು ಸ್ಥಳೀಯ ಪ್ರಭೇದಗಳ ಗಿಡಗಳನ್ನು ನೆಟ್ಟು ಅಲ್ಪಸಮಯದಲ್ಲಿ ಬೆಳೆಸುವ ರೀತಿಯಾಗಿದೆ. ಮಿಯಾವಾಕಿ ವಿಧಾನವು ಸ್ಥಳೀಯ ಸಸ್ಯಗಳ ವೇಗವಾಗಿ ಬೆಳೆಯುವ ತೋಪುಗಳನ್ನು ಬೆಳೆಸಲು ಅರಣ್ಯೀಕರಣದ ತಂತ್ರವಾಗಿದೆ. ಮೂಲತಃ ಜಪಾನಿನ ಪರಿಸರಶಾಸ್ತ್ರಜ್ಞ ಅಕಿರಾ ಮಿಯಾವಾಕಿ ಅವರು ನಿಪ್ಪಾನ್ ಸ್ಟೀಲ್‌ಗಾಗಿ 1970 ರ ದಶಕದ ಆರಂಭದಲ್ಲಿ ಅಭಿವೃದ್ಧಿಪಡಿಸಿದರು, ಈ ವಿಧಾನವನ್ನು ವಿವಿಧ ಜಪಾನಿನ ನಿಗಮಗಳು ಅಳವಡಿಸಿಕೊಂಡಿವೆ.

ಕಡಿಮೆ ಜಾಗದಲ್ಲಿ ಅಕ್ಕ ಪಕ್ಕ ಗಿಡಗಳನ್ನು ನೆಡುವ ಮೂಲಕ ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವ ವಿಧಾನ ಇದಾಗಿದೆ. ನಗರೀಕರಣದ ವ್ಯಾಮೋಹದಲ್ಲಿ ಕಾಡು ನಾಶಗೊಳ್ಳುವ ಪ್ರಸ್ತುತ ಸಮಯದಲ್ಲಿ ಈ ವಿಧಾನದಿಂದಾಗಿ ಪರಿಸರದಲ್ಲಿರುವ ಇಂಗಾಲದ ಡೈ ಆಕ್ಸೈಡ್ ಅನ್ನು ಇಲ್ಲಿರುವ ಗಿಡಗಳು ಬೇಗನೆ ಹೀರಿಕೊಳ್ಳುವ ಸಾಮರ್ಥ್ಯವನ್ನು ಹೊಂದಿದ್ದು, ಆಮ್ಲಜನಕವನ್ನು ಹೊರ ಸೂಸುತ್ತವೆ. ಪರಿಸರ ಸ್ವಚ್ಛತೆಯೊಂದಿಗೆ ಪ್ರಾಣಿ ಪಕ್ಷಿಗಳಿಗೂ ಇಲ್ಲಿನ ಮರಗಳು ಆಹಾರದ ಭದ್ರತೆಯನ್ನು ನೀಡುತ್ತವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago