Advertisement
MIRROR FOCUS

ಉಚಿತ ವಿದ್ಯುತ್ ಬೆನ್ನಲ್ಲೆ ರೈತರಿಗೆ ಪವರ್ ಶಾಕ್ | ಲಕ್ಷ ಲಕ್ಷ ಬಿಲ್ ನೀಡಿದ ವಿದ್ಯುತ್ ಇಲಾಖೆ

Share

ಒಂದೆಡೆ ಉಚಿತ ವಿದ್ಯುತ್ ( free electricity) ನೀಡುತ್ತಿದ್ದೇವೆ ಎನ್ನುತ್ತಿರುವ ಸರ್ಕಾರ ಮತ್ತೊಂದೆಡೆ ರೈತರಿಂದ ದುಪ್ಪಟ್ಟು ವಿದ್ಯುತ್ ಬಿಲ್ ( current bill) ವಸೂಲಿಗೆ ಇಳಿದಿದೆ.ಏನಿದು ಕತೆ.. ಇಲ್ಲಿದೆ ಓದಿ…

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗೃಹಜ್ಯೋತಿ ಯೋಜನೆ(gruhajyothi scheme) ಜಾರಿಗೊಳಿಸಿ 200 ಯೂನಿಟ್‍ವರೆಗೆ ಉಚಿತ ಕರೆಂಟ್ ನೀಡುವ ಕೊಟ್ಟ ಭರವಸೆ ಈಡೇರಿಸಿದೆ. ಆದ್ರೆ ಗ್ರಾಮೀಣ ಭಾಗಗಳಲ್ಲಿ ಬೇರೆ ರೀತಿಯ ಚಿತ್ರಣವಿದೆ. ತೀವ್ರ ಬರಗಾಲದಿಂದ ಬೆಳೆಗಳೆಲ್ಲಾ ನಾಶವಾಗಿ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಈ ನಡುವೆ ಉಳಿದಿರೋ ಅಲ್ಪಸ್ವಲ್ಪ ಬೆಳೆಗಳನ್ನು ಉಳಿಸಿಕೊಳ್ಳಲು ಪಂಪ್‍ಸೆಟ್ ಹೊಂದಿರುವ ರೈತರು, ವಿದ್ಯುತ್ ಇಲಾಖೆ ನೀಡ್ತಿರೋ ಒಂದೆರಡು ಗಂಟೆ ಕರೆಂಟ್‍ನಲ್ಲೇ ಬೆಳೆಗಳಿಗೆ ನೀರು ಹಾಯಿಸುತ್ತಿದ್ದಾರೆ. ಪಂಪ್‍ಸೆಟ್‍ಗಳನ್ನು ಹೊಂದಿರುವ ರೈತರಿಗೆ ವಿದ್ಯುತ್ ಇಲಾಖೆ ಶಾಕ್ ನೀಡಿದೆ. ಲಕ್ಷ ಲಕ್ಷ ಮೊತ್ತದ ಕರೆಂಟ್ ಬಿಲ್ ನೀಡಿದ್ದು, ಇನ್ನು 15 ದಿನಗಳಲ್ಲಿ ಬಿಲ್ ಪಾವತಿ ಮಾಡಬೇಕು ಎಂದು ವಾರ್ನಿಂಗ್ ನೀಡಿದೆ.
ಹಾಸನ (Hassan) ಜಿಲ್ಲೆಯಲ್ಲಿ ರೈತರು ಬಳಸುವ ಒಂದೂವರೆ ಲಕ್ಷಕ್ಕೂ ಅಧಿಕ ಪಂಪ್‍ಸೆಟ್‍ಗಳಿಗೆ ಸರ್ಕಾರ ಕರೆಂಟ್ ನೀಡುತ್ತಿದೆ. ಇದುವರೆಗೂ ಬಹುತೇಕ ಸರ್ಕಾರಗಳು ರೈತರ ಬೆಳೆಗಳಿಗೆ ಬಳಸುವ ವಿದ್ಯುತ್‍ಗೆ ಬಿಲ್ ನೀಡಿರಲಿಲ್ಲ. ಅದರಲ್ಲೂ ಕೃಷಿ ಬಳಕೆ ಪಂಪ್‍ಸೆಟ್‍ಗಳಿಗೆ ರೈತರು ಉಚಿತವಾಗಿಯೇ ಕರೆಂಟ್ ಬಳಕೆ ಮಾಡಿಕೊಳ್ಳುತ್ತಿದ್ದರು. ಕೆಲವು ರೈತರು ಇನ್ನೂ ಮೀಟರ್ ಅಳವಡಿಕೆ ಮಾಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಗೃಹಜ್ಯೋತಿ ಜಾರಿ ಮಾಡಿರುವ ಸರ್ಕಾರ ಸಣ್ಣ, ಅತಿಸಣ್ಣ ರೈತರು ತಮ್ಮ ಕೃಷಿ ಚಟುವಟಿಕೆಗೆ ಅಗತ್ಯಕ್ಕೆ ತಕ್ಕಂತೆ ಬಳಸುತ್ತಿರುವ ನೀರಾವರಿ ಪಂಪ್‍ಸೆಟ್‍ಗಳಿಗೆ ಲಕ್ಷ ಲಕ್ಷ ಬಿಲ್ ನೀಡಲು ಆರಂಭಿರುವುದು ರೈತರಿಗೆ ದೊಡ್ಡ ಆಘಾತ ಉಂಟು ಮಾಡಿದೆ.
ಸಕಲೇಶಪುರ, ಬೇಲೂರು ಸೇರಿದಂತೆ ಎಲ್ಲಾ ತಾಲೂಕುಗಳ ರೈತರಿಗೆ ದುಬಾರಿ ಬಿಲ್ ಮೂಲಕ ಬರೆ ಎಳೆಯುತ್ತಿದೆ. ಹತ್ತಾರು ವರ್ಷಗಳಿಂದ ಕೆಲ ರೈತರು ಬಿಲ್ ಪಾವತಿ ಮಾಡಿಲ್ಲ. ಅಂತಹವರನ್ನು ಸೇರಿಸಿ ಎಲ್ಲಾ ರೈತರ ಪಂಪ್‍ಸೆಟ್‍ಗಳಿಗೆ ಎರಡೂವರೆ ಲಕ್ಷ, ಒಂದು ಲಕ್ಷ, ಐವತ್ತು ಸಾವಿರ ಹೀಗೆ ಮನಬಂದಂತೆ ಬಿಲ್ ನೀಡಿದ್ದಾರೆ. ಈ ವರ್ಷ ಬರಗಾಲದಿಂದ ಬೆಳೆ ಕಳೆದುಕೊಂಡು ಕಂಗಾಲಾಗಿದ್ದೀವಿ. ಈ ವೇಳೆ ಹೇಗೆ ಬಿಲ್ ಕಟ್ಟೋದು ಎನ್ನುತ್ತಿದ್ದಾರೆ.
ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಈಡೇರಿಸಲು ಗೃಹಜ್ಯೋತಿ ಜಾರಿಗೊಳಿಸಿ ಮನೆಮನೆಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. 200 ಯೂನಿಟ್ ವಿದ್ಯುತ್ ಉಚಿತ ಸಿಗುತ್ತಿದೆ ಎಂದು ಜನರು ಖಷಿಯಲ್ಲಿರುವಾಗ ಪಂಪ್‍ಸೆಟ್‍ಗಳಿಗೆ ದುಬಾರಿ ಬಿಲ್ ನೀಡುವ ಮೂಲಕ ರೈತರಿಂದ ಹಣ ವಸೂಲಿ ಮಾಡಲು ಮುಂದಾಗಿರೋದು ರೈತರ ಕಣ್ಣು ಕೆಂಪಾಗಿಸಿದೆ.
– ಅಂತರ್ಜಾಲ ಮಾಹಿತಿ
The Congress Govt came to power on a whim. Among the five guarantees given during the election, Griha Jyoti, Grilahakshmi, Shakti and Annabhagya schemes have been implemented. But after the implementation of Griha Jyoti Yojana which gives free electricity, there are still many discussions going on. On the one hand, the government claims to be providing free electricity, on the other hand, it has come down to collecting double electricity bills from the farmers.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

17 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago